Categories: ಕೋಲಾರ

ವಿಕಸಿತ ಭಾರತ ಬಲಗೊಳ್ಳಲು ಬಿಜೆಪಿ ಪಕ್ಷ ಸಂಘಟನೆಗೆ ಒತ್ತು-ಡಾ.ನವೀನ್

ಕೋಲಾರ: ರೈತ ಮೋರ್ಚಾದ ಪದಾಧಿಕಾರಿಗಳು ತಮ್ಮ ಬೂತ್‌ಗಳಲ್ಲಿ ಹೆಚ್ಚಿನ ರೈತರನ್ನು ಬಿಜೆಪಿ ಸದಸ್ಯತ್ವ ಮಾಡಿಸುವ ಮೂಲಕ ಪಕ್ಷಕ್ಕೆ ಹೆಚ್ಚಿನ ಬಲ ಸಿಗುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ತಿಳಿಸಿದರು.

ನಗರದ ಹೊರವಲಯದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಬುಧವಾತ ರೈತ ಮೋರ್ಚಾ ಜಿಲ್ಲಾ ಕಾರ್ಯಾಗಾರ ಹಾಗೂ 2024 ರ ಸದಸ್ಯತ್ವ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರೈತರ ಸ್ವಾವಲಂಬಿ ಜೀವನ ನಡೆಸಲು ವಿಕಸಿತ ಭಾರತ ಪರಿಕಲ್ಪನೆಯಡಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಅದನ್ನು ಜನಸಾಮಾನ್ಯರಿಗೆ ತಲುಪಿ ಪಕ್ಷದ ಸದಸ್ಯರಾಗಿ ಸಂಘಟನೆಯ ಬೆಳೆವಣಿಗೆ ಒತ್ತು ನಿಒಡಬೇಕು ಎಂದು ತಿಳಿಸಿದರು.

ಭಾರತ ದೇಶದಲ್ಲಿ ಭಾರತೀಯರೇ ಪಕ್ಷವನ್ನು ಪ್ರಾರಂಭಿಸಿ ನೇತೃತ್ವ ವಹಿಸಿ ನಡೆಸುವ ಪಕ್ಷ ಬಿಜೆಪಿಯಾಗಿದೆ ವಿಶ್ವದ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿದೆ ಬಿಜೆಪಿ ಸದಸ್ಯತ್ವ ಅಭಿಯಾನ ಎಂದರೆ ಹಬ್ಬದ ವಾತಾವರಣ ಮೂಡಿಸುತ್ತದೆ ನಮ್ಮ ವಿಚಾರಧಾರೆ ಸಿದ್ಧಾಂತ ತಿಳಿಸುವ ಸಂದರ್ಭ ಬಂದಿದೆ ಪಕ್ಷವನ್ನು ವಿಸ್ತಾರ ಮಾಡಲು ಅವಕಾಶವು ಸೆ.1ರಿಂದ ಸದಸ್ಯತ್ವ ನೋಂದಣಿ ಶುರುವಾಗಿದೆ ಕೇಂದ್ರದ ಬಿಜೆಪಿ ‌ಸರ್ಕಾರ ಹಾಗೂ ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದ ಯೋಜನೆಗಳನ್ನು ಜನರಿಗೆ ಹೇಳಬೇಕು ದೇಶದಲ್ಲಿ 10 ಕೋಟಿ ಸದಸ್ಯತ್ವ ಗುರಿ ಕೊಟ್ಟಿದ್ದಾರೆ. ರಾಜ್ಯ ರೈತ ಮೋರ್ಚಾಕ್ಕೆ 10 ಲಕ್ಷ ಜಿಲ್ಲೆಗೆ 25 ಸಾವಿರ ಗುರಿ ನೀಡಲಾಗಿದೆ. ಮಿಸ್ಡ್ ಕಾಲ್, ಆನ್‌ಲೈನ್, ಕ್ಯೂಆರ್ ಕೋಡ್, ಹಾಗೂ ನಮೋ ಆ್ಯಪ್ ಮೂಲಕ ಸದಸ್ಯತ್ವ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಸದಸ್ಯತ್ವದ ಬಗ್ಗೆ ಮನೆ ಮನೆಗೆ ತೆರಳಿ ಪ್ರಚಾರ‌ ಮಾಡಬೇಕು ಬೂತ್ ಮಟ್ಟದ ಅಧ್ಯಕ್ಷರಿಂದ ಹಿಡಿದು ರಾಷ್ಟ್ರೀಯ ಅಧ್ಯಕ್ಷರವರೆಗೆ ಈ ಪ್ರಕ್ರಿಯೆ ನಡೆಯಲಿದೆ ಪ್ರತಿಯೊಬ್ಬರೂ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು. ಒಂದು ಲೋಕಸಭಾ ಕ್ಷೇತ್ರದಲ್ಲಿ 100 ಪ್ರಭಾವಿಗಳನ್ನು ಸದಸ್ಯರಾಗಿಸಬೇಕು ಎರಡು ತಿಂಗಳು ಕಾಲಿಗೆ ಚಕ್ರಕಟ್ಟಿಕೊಂಡು ಪಕ್ಷ ಕಟ್ಟುವ ಕೆಲಸ‌ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ ಮಾತನಾಡಿ ಜಿಲ್ಲೆಯಿಂದ ರೈತ ಮೋರ್ಚಾದಿಂದ 25 ಸಾವಿರ ಸದಸ್ಯತ್ವದ ಗುರಿ ನೀಡಲಾಗಿದೆ ಜಿಲ್ಲೆಯ 9 ಮಂಡಲಗಳಲ್ಲಿ 7 ಮಂಡಲಗಳು ರಚನೆಯಾಗಿದೆ. ಇನ್ನು ಎರಡು ಮಂಡಲ ಆಗಬೇಕಿದೆ ಸದಸ್ಯರಾಗಲು ಮಿಸ್ಡ್ ಕಾಲ್ ಕೊಟ್ಟರೆ ಸಾಕು. ಆದರೆ ಸಕ್ರಿಯ ಸದಸ್ಯರಾಗಲು 100 ಜನರನ್ನು ಸದಸ್ಯರನ್ನಾಗಿ ಮಾಡಬೇಕು. ಈ ತಿಂಗಳ 25ರೊಳಗೆ ಮುಗಿಯಬೇಕು ಎಂದರು.

ಅಭಿಯಾನದ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದಗೌಡ ಮಾತನಾಡಿ ದೇಶ ಕಾಪಾಡಬೇಕೆಂದರೆ‌ ಆಳುವ ಪಕ್ಷ ಸದೃಢವಾಗಿರಬೇಕು. ದೇಶವನ್ನು ಅಗ್ರಸ್ಥಾನಕ್ಕೆ‌ ಕೊಂಡೊಯ್ಯುವ ಗುರಿಯನ್ನು ಮೋದಿ‌ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ‌ಸದಸ್ಯತ್ವವನ್ನು ಹೆಚ್ಚಿಸಿ ಪಕ್ಷವನ್ನು ಬಲಪಡಿಸಬೇಕು ರಾಜ್ಯ ಕಾಂಗ್ರೆಸ್ ಸರ್ಕಾರವು ರೈತರಿಗೆ ಏನೂ ಮಾಡಿಲ್ಲ ರೈತರಿಂದ ಖರೀದಿಸುವ ಹಾಲಿನ ದರ ಕಡಿತ ಮಾಡಿದ್ದಾರೆ ಕೆಜಿಎಫ್ ಗೆ‌ ಬೆಂಗಳೂರಿನ ಕಸ ತಂದ‌ ಹಾಕಲು ಹೊರಟಿದ್ದಾರೆ ರೈತ ಪರವಾಗಿ ಬಿಜೆಪಿ ರೈತ ಮೋರ್ಚಾದಿಂದ ಮುತ್ತಿಗೆ, ಪ್ರತಿಭಟನೆ ‌ನಡೆಸಬೇಕಾಗಿದ್ದು ಕಾರ್ಯಕರ್ತರು ಸಂಘಟಿತರಾಗಬೇಕು ಎಂದರು.

ವೇದಿಕೆಯಲ್ಲಿ ಮಾಜಿ ಸಚಿವ ವರ್ತೂರ್ ಪ್ರಕಾಶ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಓಂಶಕ್ತಿ ಚಲಪತಿ, ಅಪ್ಪಿರಾಜು, ರೈತ ಮೋರ್ಚಾ ರಾಜ್ಯ ಕಾರ್ಯಕಾರಿ ಸದಸ್ಯರಾದ ಲಕ್ಷ್ಮಣಗೌಡ, ನಾರಾಯಣಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿಜೆಪಿ ಶಿವಣ್ಣ, ಮುಖಂಡರಾದ ಹನುಮಪ್ಪ, ಓಹಿಲೇಶ್, ತಿಮ್ಮರಾಯಪ್ಪ, ಮುನಿವೆಂಕಟಪ್ಪ ಸೇರಿದಂತೆ ಮಂಡಲ ಅಧ್ಯಕ್ಷರು ಇದ್ದರು.

Ramesh Babu

Journalist

Recent Posts

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

30 minutes ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

1 hour ago

ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಬಗ್ಗೆ ಮತ್ತೆ ಸುಪ್ರೀಂನಲ್ಲಿ ವಾದ ವಿವಾದ ಪ್ರಾರಂಭ

ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…

2 hours ago

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

11 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

13 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

14 hours ago