Categories: ಕೋಲಾರ

ವಿಕಸಿತ ಭಾರತ ಬಲಗೊಳ್ಳಲು ಬಿಜೆಪಿ ಪಕ್ಷ ಸಂಘಟನೆಗೆ ಒತ್ತು-ಡಾ.ನವೀನ್

ಕೋಲಾರ: ರೈತ ಮೋರ್ಚಾದ ಪದಾಧಿಕಾರಿಗಳು ತಮ್ಮ ಬೂತ್‌ಗಳಲ್ಲಿ ಹೆಚ್ಚಿನ ರೈತರನ್ನು ಬಿಜೆಪಿ ಸದಸ್ಯತ್ವ ಮಾಡಿಸುವ ಮೂಲಕ ಪಕ್ಷಕ್ಕೆ ಹೆಚ್ಚಿನ ಬಲ ಸಿಗುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ತಿಳಿಸಿದರು.

ನಗರದ ಹೊರವಲಯದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಬುಧವಾತ ರೈತ ಮೋರ್ಚಾ ಜಿಲ್ಲಾ ಕಾರ್ಯಾಗಾರ ಹಾಗೂ 2024 ರ ಸದಸ್ಯತ್ವ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರೈತರ ಸ್ವಾವಲಂಬಿ ಜೀವನ ನಡೆಸಲು ವಿಕಸಿತ ಭಾರತ ಪರಿಕಲ್ಪನೆಯಡಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಅದನ್ನು ಜನಸಾಮಾನ್ಯರಿಗೆ ತಲುಪಿ ಪಕ್ಷದ ಸದಸ್ಯರಾಗಿ ಸಂಘಟನೆಯ ಬೆಳೆವಣಿಗೆ ಒತ್ತು ನಿಒಡಬೇಕು ಎಂದು ತಿಳಿಸಿದರು.

ಭಾರತ ದೇಶದಲ್ಲಿ ಭಾರತೀಯರೇ ಪಕ್ಷವನ್ನು ಪ್ರಾರಂಭಿಸಿ ನೇತೃತ್ವ ವಹಿಸಿ ನಡೆಸುವ ಪಕ್ಷ ಬಿಜೆಪಿಯಾಗಿದೆ ವಿಶ್ವದ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿದೆ ಬಿಜೆಪಿ ಸದಸ್ಯತ್ವ ಅಭಿಯಾನ ಎಂದರೆ ಹಬ್ಬದ ವಾತಾವರಣ ಮೂಡಿಸುತ್ತದೆ ನಮ್ಮ ವಿಚಾರಧಾರೆ ಸಿದ್ಧಾಂತ ತಿಳಿಸುವ ಸಂದರ್ಭ ಬಂದಿದೆ ಪಕ್ಷವನ್ನು ವಿಸ್ತಾರ ಮಾಡಲು ಅವಕಾಶವು ಸೆ.1ರಿಂದ ಸದಸ್ಯತ್ವ ನೋಂದಣಿ ಶುರುವಾಗಿದೆ ಕೇಂದ್ರದ ಬಿಜೆಪಿ ‌ಸರ್ಕಾರ ಹಾಗೂ ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದ ಯೋಜನೆಗಳನ್ನು ಜನರಿಗೆ ಹೇಳಬೇಕು ದೇಶದಲ್ಲಿ 10 ಕೋಟಿ ಸದಸ್ಯತ್ವ ಗುರಿ ಕೊಟ್ಟಿದ್ದಾರೆ. ರಾಜ್ಯ ರೈತ ಮೋರ್ಚಾಕ್ಕೆ 10 ಲಕ್ಷ ಜಿಲ್ಲೆಗೆ 25 ಸಾವಿರ ಗುರಿ ನೀಡಲಾಗಿದೆ. ಮಿಸ್ಡ್ ಕಾಲ್, ಆನ್‌ಲೈನ್, ಕ್ಯೂಆರ್ ಕೋಡ್, ಹಾಗೂ ನಮೋ ಆ್ಯಪ್ ಮೂಲಕ ಸದಸ್ಯತ್ವ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಸದಸ್ಯತ್ವದ ಬಗ್ಗೆ ಮನೆ ಮನೆಗೆ ತೆರಳಿ ಪ್ರಚಾರ‌ ಮಾಡಬೇಕು ಬೂತ್ ಮಟ್ಟದ ಅಧ್ಯಕ್ಷರಿಂದ ಹಿಡಿದು ರಾಷ್ಟ್ರೀಯ ಅಧ್ಯಕ್ಷರವರೆಗೆ ಈ ಪ್ರಕ್ರಿಯೆ ನಡೆಯಲಿದೆ ಪ್ರತಿಯೊಬ್ಬರೂ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು. ಒಂದು ಲೋಕಸಭಾ ಕ್ಷೇತ್ರದಲ್ಲಿ 100 ಪ್ರಭಾವಿಗಳನ್ನು ಸದಸ್ಯರಾಗಿಸಬೇಕು ಎರಡು ತಿಂಗಳು ಕಾಲಿಗೆ ಚಕ್ರಕಟ್ಟಿಕೊಂಡು ಪಕ್ಷ ಕಟ್ಟುವ ಕೆಲಸ‌ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ ಮಾತನಾಡಿ ಜಿಲ್ಲೆಯಿಂದ ರೈತ ಮೋರ್ಚಾದಿಂದ 25 ಸಾವಿರ ಸದಸ್ಯತ್ವದ ಗುರಿ ನೀಡಲಾಗಿದೆ ಜಿಲ್ಲೆಯ 9 ಮಂಡಲಗಳಲ್ಲಿ 7 ಮಂಡಲಗಳು ರಚನೆಯಾಗಿದೆ. ಇನ್ನು ಎರಡು ಮಂಡಲ ಆಗಬೇಕಿದೆ ಸದಸ್ಯರಾಗಲು ಮಿಸ್ಡ್ ಕಾಲ್ ಕೊಟ್ಟರೆ ಸಾಕು. ಆದರೆ ಸಕ್ರಿಯ ಸದಸ್ಯರಾಗಲು 100 ಜನರನ್ನು ಸದಸ್ಯರನ್ನಾಗಿ ಮಾಡಬೇಕು. ಈ ತಿಂಗಳ 25ರೊಳಗೆ ಮುಗಿಯಬೇಕು ಎಂದರು.

ಅಭಿಯಾನದ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದಗೌಡ ಮಾತನಾಡಿ ದೇಶ ಕಾಪಾಡಬೇಕೆಂದರೆ‌ ಆಳುವ ಪಕ್ಷ ಸದೃಢವಾಗಿರಬೇಕು. ದೇಶವನ್ನು ಅಗ್ರಸ್ಥಾನಕ್ಕೆ‌ ಕೊಂಡೊಯ್ಯುವ ಗುರಿಯನ್ನು ಮೋದಿ‌ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ‌ಸದಸ್ಯತ್ವವನ್ನು ಹೆಚ್ಚಿಸಿ ಪಕ್ಷವನ್ನು ಬಲಪಡಿಸಬೇಕು ರಾಜ್ಯ ಕಾಂಗ್ರೆಸ್ ಸರ್ಕಾರವು ರೈತರಿಗೆ ಏನೂ ಮಾಡಿಲ್ಲ ರೈತರಿಂದ ಖರೀದಿಸುವ ಹಾಲಿನ ದರ ಕಡಿತ ಮಾಡಿದ್ದಾರೆ ಕೆಜಿಎಫ್ ಗೆ‌ ಬೆಂಗಳೂರಿನ ಕಸ ತಂದ‌ ಹಾಕಲು ಹೊರಟಿದ್ದಾರೆ ರೈತ ಪರವಾಗಿ ಬಿಜೆಪಿ ರೈತ ಮೋರ್ಚಾದಿಂದ ಮುತ್ತಿಗೆ, ಪ್ರತಿಭಟನೆ ‌ನಡೆಸಬೇಕಾಗಿದ್ದು ಕಾರ್ಯಕರ್ತರು ಸಂಘಟಿತರಾಗಬೇಕು ಎಂದರು.

ವೇದಿಕೆಯಲ್ಲಿ ಮಾಜಿ ಸಚಿವ ವರ್ತೂರ್ ಪ್ರಕಾಶ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಓಂಶಕ್ತಿ ಚಲಪತಿ, ಅಪ್ಪಿರಾಜು, ರೈತ ಮೋರ್ಚಾ ರಾಜ್ಯ ಕಾರ್ಯಕಾರಿ ಸದಸ್ಯರಾದ ಲಕ್ಷ್ಮಣಗೌಡ, ನಾರಾಯಣಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿಜೆಪಿ ಶಿವಣ್ಣ, ಮುಖಂಡರಾದ ಹನುಮಪ್ಪ, ಓಹಿಲೇಶ್, ತಿಮ್ಮರಾಯಪ್ಪ, ಮುನಿವೆಂಕಟಪ್ಪ ಸೇರಿದಂತೆ ಮಂಡಲ ಅಧ್ಯಕ್ಷರು ಇದ್ದರು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

17 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

23 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

3 days ago