Categories: ಲೇಖನ

ವಿಚಿತ್ರ ಸ್ವಾರ್ಥದ ನ್ಯಾಯ ನೀತಿ…

ನನ್ನ ತಾಯಿ ದೈವೀ ಸ್ವರೂಪಿ, ನನ್ನ ತಂದೆ ಮುಗ್ದ ಮತ್ತು ಶ್ರಮ ಜೀವಿ, ನನ್ನ ಅಜ್ಜ ಅಜ್ಜಿ ನಿಷ್ಕಲ್ಮಶ ಮನಸ್ಸಿನವರು, ನನ್ನ ಹೆಂಡತಿ ಪ್ರೀತಿಯ ಸಾಗರ, ನನ್ನ ಅಣ್ಣ ಮಮತೆಯ ಸಾಕಾರ ಮೂರ್ತಿ, ನನ್ನ ಅತ್ತಿಗೆ ಮಮತಾಮಯಿ, ನನ್ನ ತಂಗಿ ಕರುಣಾಮಯಿ, ನನ್ನ ಗಂಡ ದಕ್ಷ ಪ್ರಾಮಾಣಿಕ, ನನ್ನ ಮಗ ಮಗಳು ಅತ್ಯಂತ ಸಹೃದಯಿಗಳು,………..

ಹೀಗೆ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮವರ ಬಗ್ಗೆ ಅದರಲ್ಲೂ ರಕ್ತ ಸಂಬಂಧಿಗಳ ಬಗ್ಗೆ ಹೇಳುತ್ತಿರುತ್ತಾರೆ.( ಕೆಲವು ಅಪರೂಪದ ಅಪವಾದಗಳು ಇರಬಹುದು. ಅಂದರೆ ಇವರನ್ನು ವಾಚಾಮಗೋಚರವಾಗಿ ಟೀಕಿಸಬಹುದು )…..

ಆದರೆ ಬಹುತೇಕ ಜನರ ಅಭಿಪ್ರಾಯ ಇದೇ ಆಗಿರುತ್ತದೆ.
ಹಾಗಾದರೆ ಇಷ್ಟೊಂದು ಒಳ್ಳೆಯವರಿಂದ ಕೂಡಿರುವ ನಮ್ಮ ಸಮಾಜ ಅತ್ಯಂತ ಆದರ್ಶ ನಾಗರಿಕ ಸಮಾಜವಾಗಿರಬೇಕಿತ್ತಲ್ಲವೇ ?…….

ಈ ಭ್ರಷ್ಟಾಚಾರ, ಮೋಸ, ವಂಚನೆ, ನಂಬಿಕೆ ದ್ರೋಹ, ಡಾಕ್ಟರ್, ಲಾಯರ್, ಪೋಲೀಸ್, ರಾಜಕಾರಣಿ, ಕಂಟ್ರಾಕ್ಟರ್ ಮುಂತಾದ ಸಮಾಜದ ಎಲ್ಲಾ ಕ್ಷೇತ್ರದ ಜನರ ಮೇಲೆ ಅನುಮಾನ ಏಕೆ. ಇವರೆಲ್ಲರೂ ನಮ್ಮ ತಾಯಿ ತಂಗಿ ಅಣ್ಣ ಅಕ್ಕ ಅಪ್ಪ ಅಮ್ಮ ಮಕ್ಕಳಲ್ಲಿ ಒಬ್ಬರಾಗಿರಬೇಕಲ್ಲವೇ ?
ಆದರೂ ಏಕೆ ವ್ಯವಸ್ಥೆ ಹೀಗಿದೆ……

ಸಮಸ್ಯೆ ಇರುವುದೇ ಇಲ್ಲಿ.

ಸಮಾಜದ ಒಟ್ಟು ಹಿತದ ದೃಷ್ಟಿಯಲ್ಲಿ ನಾವು ಇವರನ್ನು ನೋಡುವುದಿಲ್ಲ. ನಮ್ಮ ವೈಯಕ್ತಿಕ ಬದುಕಿನ ಸ್ವಾರ್ಥದ ಹಿತದಿಂದ ಇವರನ್ನು ಗುರುತಿಸುತ್ತೇವೆ…..

ಹೆಚ್ಚು ಲಂಚ ತಂದು, ಮನೆ ಕಾರು ಒಡವೆ ಪ್ರವಾಸ ಮುಂತಾದ ಮೋಜು ಮಾಡುವ ವ್ಯಕ್ತಿ, ಹೆಂಡತಿ ಮಕ್ಕಳಿಗೆ, ತಂದೆ ತಾಯಿಗಳಿಗೆ ಅತ್ಯಂತ ಪ್ರೀತಿ ಪಾತ್ರವಾಗುತ್ತಾನೆ. ಗಂಡನಿಗೆ ಅಥವಾ ಮಗನಿಗೆ ಬರುವ ಸಂಬಳದಲ್ಲಿ ಇಷ್ಟೊಂದು ಅದ್ದೂರಿ ಜೀವನ ಸಾಧ್ಯವಿಲ್ಲ. ಇದು ಲಂಚದ ಹಣವೇ ಎಂದು ಗೊತ್ತಿದ್ದರೂ ಅದನ್ನು ಸಾಮಾನ್ಯವಾಗಿ ಯಾರೂ ಪ್ರಶ್ನಿಸುವುದಿಲ್ಲ……

ಪ್ರಿಯಕರನಿಗೆ ಅಥವಾ ಗಂಡನಿಗೆ ಮೋಸ ವಂಚನೆ ಮಾಡಿದ ಹೆಣ್ಣು ನಮ್ಮ ಅಕ್ಕ ತಂಗಿ ಮಗಳು ಆಗಿದ್ದರೂ ನಾವು ಸಮರ್ಥಿಸುತ್ತೇವೆ……

ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಅತ್ತೆ ಮಾವನಿಗೊಂದು ನ್ಯಾಯ, ಅಮ್ಮ ಅಪ್ಪನಿಗೆ ಒಂದು ನ್ಯಾಯ, ಮಗ ಮಗಳಿಗೆ ಒಂದು ನಿಯಮ, ಅಳಿಯ ಸೊಸೆಗೊಂದು ನಿಯಮ.
ಇದರ ವಿಸ್ತ್ರತ ರೂಪವೇ ಇಂದಿನ ಒಟ್ಟು ವ್ಯವಸ್ಥೆಯ ಗೊಂದಲಕ್ಕೆ ಬಹುತೇಕ ಕಾರಣ……

ನ್ಯಾಯ ಅನ್ಯಾಯ, ನೀತಿ ಅನೀತಿಗಳ ವಿಷಯ ಬಂದಾಗ ಭಾವನಾತ್ಮಕ ಜೀವಿಗಳಾದ ನಾವು ಪಕ್ಷಪಾತದ ಧೋರಣೆ ಅನುಸರಿಸುತ್ತೇವೆ.
ನಮ್ಮ ಮಗ ಅತ್ಯಾಚಾರಿ, ವಿಕೃತ ಕಾಮಿ, ಕೊಲೆಪಾತಕನಾದಾಗ ಅದು ನಮಗೆ ಯೌವ್ವನದ ಸಣ್ಣ ಚೇಷ್ಟೇ ಎಂದೇ ಕಾಣುತ್ತದೆ. ಇತರರು ಮಾಡಿದಾಗ ರಸ್ತೆಯಲ್ಲಿ ಗುಂಡು ಹೊಡೆದು ಸಾಯಿಸಬೇಕೆನಿಸುತ್ತದೆ…..

ನನ್ನ ಗಂಡ/ಹೆಂಡತಿ, ಲೋಕಾಯುಕ್ತರ ಬಲೆಯಲ್ಲಿ ಸಿಲುಕಿದಾಗ ಎಷ್ಟೋ ದೊಡ್ಡ ಭ್ರಷ್ಟರ ನಡುವೆ ಇವರು ತುಂಬಾ ಒಳ್ಳೆಯವರು, ಇಡೀ ವ್ಯವಸ್ಥೆ ಇವರಿಗೆ ಮೋಸ ಮಾಡಿದೆ ಎನಿಸುತ್ತದೆ……

ಸಮಸ್ಯೆಗಳ ಬಗ್ಗೆ ಏನೋ ಹೇಳಿದೆ. ಆದರೆ ಇಂದಿನ ಸಾಮಾಜಿಕ, ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಇದನ್ನು ಮೀರಲು ಸಾಧ್ಯವೇ ?….

ಇದೇ ನಮ್ಮ ಮುಂದಿರುವ ಬಹುದೊಡ್ಡ ಸವಾಲು. ಮನಸ್ಸುಗಳ ಅಂತರಂಗದ ಚಳವಳಿ ಈ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳವ ಆಶಯವಿದೆ. ಜನರ ಚಿಂತನಾ ಕ್ರಮವನ್ನು ವಿಶಾಲಗೊಳಿಸಿ ಅವರ ವ್ಯಕ್ತಿತ್ವ ವಿಕಸನಕ್ಕೆ‌ ದಾರಿ ಮಾಡಿಕೊಡುವ ಪ್ರಯತ್ನ ಮುಂದುವರಿಯಲಿದೆ….

ದ್ವೇಷವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ,
ಪ್ರೀತಿಯನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ…..

ಕೋಪವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ,
ತಾಳ್ಮೆಯನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ…….

ಸ್ವಾರ್ಥವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ,
ತ್ಯಾಗವನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ……

ಗಲಾಟೆಗಳನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ,
ಸ್ನೇಹಿತರನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ…….

ಭ್ರಮೆಗಳನ್ನು ಸ್ವಲ್ಪ ದೂರ ಮಾಡೋಣ,
ವಾಸ್ತವಕ್ಕೆ ಸ್ವಲ್ಪ ಹತ್ತಿರವಾಗೋಣ…….

ಕೃತಕತೆ ಸ್ವಲ್ಪ ಕಡಿಮೆ ಮಾಡೋಣ,
ನ್ಯೆಜತೆಗೆ ಸ್ವಲ್ಪ ಹೆಚ್ಚು ಒತ್ತು ಕೊಡೋಣ……

ಎಲ್ಲವನ್ನೂ ನಿಮ್ಮ ಕುಟುಂಬಕ್ಕಾಗಿ ಮಾಡಿ,
ಆದರೆ ಸಮಾಜಕ್ಕಾಗಿ ಸ್ವಲ್ಪವಾದರೂ ಕೊಡಿ……

ಎಲ್ಲವೂ ನಿಮಗಾಗಿ,
ನೀವು ಮಾತ್ರ ಇತರರಿಗಾಗಿ……

ಮುಖವಾಡ ಮನಸ್ಥಿತಿ ಕಡಿಮೆ ಮಾಡಿ,
ಪ್ರಾಮಾಣಿಕ ಮನಸ್ಥಿತಿಗೆ ಹೆಚ್ಚು ಹತ್ತಿರವಾಗಿ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

14 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

15 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

22 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

22 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

2 days ago