Categories: ಲೇಖನ

ವಿಚಿತ್ರ ಸ್ವಾರ್ಥದ ನ್ಯಾಯ ನೀತಿ…

ನನ್ನ ತಾಯಿ ದೈವೀ ಸ್ವರೂಪಿ, ನನ್ನ ತಂದೆ ಮುಗ್ದ ಮತ್ತು ಶ್ರಮ ಜೀವಿ, ನನ್ನ ಅಜ್ಜ ಅಜ್ಜಿ ನಿಷ್ಕಲ್ಮಶ ಮನಸ್ಸಿನವರು, ನನ್ನ ಹೆಂಡತಿ ಪ್ರೀತಿಯ ಸಾಗರ, ನನ್ನ ಅಣ್ಣ ಮಮತೆಯ ಸಾಕಾರ ಮೂರ್ತಿ, ನನ್ನ ಅತ್ತಿಗೆ ಮಮತಾಮಯಿ, ನನ್ನ ತಂಗಿ ಕರುಣಾಮಯಿ, ನನ್ನ ಗಂಡ ದಕ್ಷ ಪ್ರಾಮಾಣಿಕ, ನನ್ನ ಮಗ ಮಗಳು ಅತ್ಯಂತ ಸಹೃದಯಿಗಳು,………..

ಹೀಗೆ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮವರ ಬಗ್ಗೆ ಅದರಲ್ಲೂ ರಕ್ತ ಸಂಬಂಧಿಗಳ ಬಗ್ಗೆ ಹೇಳುತ್ತಿರುತ್ತಾರೆ.( ಕೆಲವು ಅಪರೂಪದ ಅಪವಾದಗಳು ಇರಬಹುದು. ಅಂದರೆ ಇವರನ್ನು ವಾಚಾಮಗೋಚರವಾಗಿ ಟೀಕಿಸಬಹುದು )…..

ಆದರೆ ಬಹುತೇಕ ಜನರ ಅಭಿಪ್ರಾಯ ಇದೇ ಆಗಿರುತ್ತದೆ.
ಹಾಗಾದರೆ ಇಷ್ಟೊಂದು ಒಳ್ಳೆಯವರಿಂದ ಕೂಡಿರುವ ನಮ್ಮ ಸಮಾಜ ಅತ್ಯಂತ ಆದರ್ಶ ನಾಗರಿಕ ಸಮಾಜವಾಗಿರಬೇಕಿತ್ತಲ್ಲವೇ ?…….

ಈ ಭ್ರಷ್ಟಾಚಾರ, ಮೋಸ, ವಂಚನೆ, ನಂಬಿಕೆ ದ್ರೋಹ, ಡಾಕ್ಟರ್, ಲಾಯರ್, ಪೋಲೀಸ್, ರಾಜಕಾರಣಿ, ಕಂಟ್ರಾಕ್ಟರ್ ಮುಂತಾದ ಸಮಾಜದ ಎಲ್ಲಾ ಕ್ಷೇತ್ರದ ಜನರ ಮೇಲೆ ಅನುಮಾನ ಏಕೆ. ಇವರೆಲ್ಲರೂ ನಮ್ಮ ತಾಯಿ ತಂಗಿ ಅಣ್ಣ ಅಕ್ಕ ಅಪ್ಪ ಅಮ್ಮ ಮಕ್ಕಳಲ್ಲಿ ಒಬ್ಬರಾಗಿರಬೇಕಲ್ಲವೇ ?
ಆದರೂ ಏಕೆ ವ್ಯವಸ್ಥೆ ಹೀಗಿದೆ……

ಸಮಸ್ಯೆ ಇರುವುದೇ ಇಲ್ಲಿ.

ಸಮಾಜದ ಒಟ್ಟು ಹಿತದ ದೃಷ್ಟಿಯಲ್ಲಿ ನಾವು ಇವರನ್ನು ನೋಡುವುದಿಲ್ಲ. ನಮ್ಮ ವೈಯಕ್ತಿಕ ಬದುಕಿನ ಸ್ವಾರ್ಥದ ಹಿತದಿಂದ ಇವರನ್ನು ಗುರುತಿಸುತ್ತೇವೆ…..

ಹೆಚ್ಚು ಲಂಚ ತಂದು, ಮನೆ ಕಾರು ಒಡವೆ ಪ್ರವಾಸ ಮುಂತಾದ ಮೋಜು ಮಾಡುವ ವ್ಯಕ್ತಿ, ಹೆಂಡತಿ ಮಕ್ಕಳಿಗೆ, ತಂದೆ ತಾಯಿಗಳಿಗೆ ಅತ್ಯಂತ ಪ್ರೀತಿ ಪಾತ್ರವಾಗುತ್ತಾನೆ. ಗಂಡನಿಗೆ ಅಥವಾ ಮಗನಿಗೆ ಬರುವ ಸಂಬಳದಲ್ಲಿ ಇಷ್ಟೊಂದು ಅದ್ದೂರಿ ಜೀವನ ಸಾಧ್ಯವಿಲ್ಲ. ಇದು ಲಂಚದ ಹಣವೇ ಎಂದು ಗೊತ್ತಿದ್ದರೂ ಅದನ್ನು ಸಾಮಾನ್ಯವಾಗಿ ಯಾರೂ ಪ್ರಶ್ನಿಸುವುದಿಲ್ಲ……

ಪ್ರಿಯಕರನಿಗೆ ಅಥವಾ ಗಂಡನಿಗೆ ಮೋಸ ವಂಚನೆ ಮಾಡಿದ ಹೆಣ್ಣು ನಮ್ಮ ಅಕ್ಕ ತಂಗಿ ಮಗಳು ಆಗಿದ್ದರೂ ನಾವು ಸಮರ್ಥಿಸುತ್ತೇವೆ……

ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಅತ್ತೆ ಮಾವನಿಗೊಂದು ನ್ಯಾಯ, ಅಮ್ಮ ಅಪ್ಪನಿಗೆ ಒಂದು ನ್ಯಾಯ, ಮಗ ಮಗಳಿಗೆ ಒಂದು ನಿಯಮ, ಅಳಿಯ ಸೊಸೆಗೊಂದು ನಿಯಮ.
ಇದರ ವಿಸ್ತ್ರತ ರೂಪವೇ ಇಂದಿನ ಒಟ್ಟು ವ್ಯವಸ್ಥೆಯ ಗೊಂದಲಕ್ಕೆ ಬಹುತೇಕ ಕಾರಣ……

ನ್ಯಾಯ ಅನ್ಯಾಯ, ನೀತಿ ಅನೀತಿಗಳ ವಿಷಯ ಬಂದಾಗ ಭಾವನಾತ್ಮಕ ಜೀವಿಗಳಾದ ನಾವು ಪಕ್ಷಪಾತದ ಧೋರಣೆ ಅನುಸರಿಸುತ್ತೇವೆ.
ನಮ್ಮ ಮಗ ಅತ್ಯಾಚಾರಿ, ವಿಕೃತ ಕಾಮಿ, ಕೊಲೆಪಾತಕನಾದಾಗ ಅದು ನಮಗೆ ಯೌವ್ವನದ ಸಣ್ಣ ಚೇಷ್ಟೇ ಎಂದೇ ಕಾಣುತ್ತದೆ. ಇತರರು ಮಾಡಿದಾಗ ರಸ್ತೆಯಲ್ಲಿ ಗುಂಡು ಹೊಡೆದು ಸಾಯಿಸಬೇಕೆನಿಸುತ್ತದೆ…..

ನನ್ನ ಗಂಡ/ಹೆಂಡತಿ, ಲೋಕಾಯುಕ್ತರ ಬಲೆಯಲ್ಲಿ ಸಿಲುಕಿದಾಗ ಎಷ್ಟೋ ದೊಡ್ಡ ಭ್ರಷ್ಟರ ನಡುವೆ ಇವರು ತುಂಬಾ ಒಳ್ಳೆಯವರು, ಇಡೀ ವ್ಯವಸ್ಥೆ ಇವರಿಗೆ ಮೋಸ ಮಾಡಿದೆ ಎನಿಸುತ್ತದೆ……

ಸಮಸ್ಯೆಗಳ ಬಗ್ಗೆ ಏನೋ ಹೇಳಿದೆ. ಆದರೆ ಇಂದಿನ ಸಾಮಾಜಿಕ, ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಇದನ್ನು ಮೀರಲು ಸಾಧ್ಯವೇ ?….

ಇದೇ ನಮ್ಮ ಮುಂದಿರುವ ಬಹುದೊಡ್ಡ ಸವಾಲು. ಮನಸ್ಸುಗಳ ಅಂತರಂಗದ ಚಳವಳಿ ಈ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳವ ಆಶಯವಿದೆ. ಜನರ ಚಿಂತನಾ ಕ್ರಮವನ್ನು ವಿಶಾಲಗೊಳಿಸಿ ಅವರ ವ್ಯಕ್ತಿತ್ವ ವಿಕಸನಕ್ಕೆ‌ ದಾರಿ ಮಾಡಿಕೊಡುವ ಪ್ರಯತ್ನ ಮುಂದುವರಿಯಲಿದೆ….

ದ್ವೇಷವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ,
ಪ್ರೀತಿಯನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ…..

ಕೋಪವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ,
ತಾಳ್ಮೆಯನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ…….

ಸ್ವಾರ್ಥವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ,
ತ್ಯಾಗವನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ……

ಗಲಾಟೆಗಳನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ,
ಸ್ನೇಹಿತರನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ…….

ಭ್ರಮೆಗಳನ್ನು ಸ್ವಲ್ಪ ದೂರ ಮಾಡೋಣ,
ವಾಸ್ತವಕ್ಕೆ ಸ್ವಲ್ಪ ಹತ್ತಿರವಾಗೋಣ…….

ಕೃತಕತೆ ಸ್ವಲ್ಪ ಕಡಿಮೆ ಮಾಡೋಣ,
ನ್ಯೆಜತೆಗೆ ಸ್ವಲ್ಪ ಹೆಚ್ಚು ಒತ್ತು ಕೊಡೋಣ……

ಎಲ್ಲವನ್ನೂ ನಿಮ್ಮ ಕುಟುಂಬಕ್ಕಾಗಿ ಮಾಡಿ,
ಆದರೆ ಸಮಾಜಕ್ಕಾಗಿ ಸ್ವಲ್ಪವಾದರೂ ಕೊಡಿ……

ಎಲ್ಲವೂ ನಿಮಗಾಗಿ,
ನೀವು ಮಾತ್ರ ಇತರರಿಗಾಗಿ……

ಮುಖವಾಡ ಮನಸ್ಥಿತಿ ಕಡಿಮೆ ಮಾಡಿ,
ಪ್ರಾಮಾಣಿಕ ಮನಸ್ಥಿತಿಗೆ ಹೆಚ್ಚು ಹತ್ತಿರವಾಗಿ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

2 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

3 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

14 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

19 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

21 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

23 hours ago