Categories: ಲೇಖನ

ವಿಚಿತ್ರ ಸ್ವಾರ್ಥದ ನ್ಯಾಯ ನೀತಿ…

ನನ್ನ ತಾಯಿ ದೈವೀ ಸ್ವರೂಪಿ, ನನ್ನ ತಂದೆ ಮುಗ್ದ ಮತ್ತು ಶ್ರಮ ಜೀವಿ, ನನ್ನ ಅಜ್ಜ ಅಜ್ಜಿ ನಿಷ್ಕಲ್ಮಶ ಮನಸ್ಸಿನವರು, ನನ್ನ ಹೆಂಡತಿ ಪ್ರೀತಿಯ ಸಾಗರ, ನನ್ನ ಅಣ್ಣ ಮಮತೆಯ ಸಾಕಾರ ಮೂರ್ತಿ, ನನ್ನ ಅತ್ತಿಗೆ ಮಮತಾಮಯಿ, ನನ್ನ ತಂಗಿ ಕರುಣಾಮಯಿ, ನನ್ನ ಗಂಡ ದಕ್ಷ ಪ್ರಾಮಾಣಿಕ, ನನ್ನ ಮಗ ಮಗಳು ಅತ್ಯಂತ ಸಹೃದಯಿಗಳು,………..

ಹೀಗೆ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮವರ ಬಗ್ಗೆ ಅದರಲ್ಲೂ ರಕ್ತ ಸಂಬಂಧಿಗಳ ಬಗ್ಗೆ ಹೇಳುತ್ತಿರುತ್ತಾರೆ.( ಕೆಲವು ಅಪರೂಪದ ಅಪವಾದಗಳು ಇರಬಹುದು. ಅಂದರೆ ಇವರನ್ನು ವಾಚಾಮಗೋಚರವಾಗಿ ಟೀಕಿಸಬಹುದು )…..

ಆದರೆ ಬಹುತೇಕ ಜನರ ಅಭಿಪ್ರಾಯ ಇದೇ ಆಗಿರುತ್ತದೆ.
ಹಾಗಾದರೆ ಇಷ್ಟೊಂದು ಒಳ್ಳೆಯವರಿಂದ ಕೂಡಿರುವ ನಮ್ಮ ಸಮಾಜ ಅತ್ಯಂತ ಆದರ್ಶ ನಾಗರಿಕ ಸಮಾಜವಾಗಿರಬೇಕಿತ್ತಲ್ಲವೇ ?…….

ಈ ಭ್ರಷ್ಟಾಚಾರ, ಮೋಸ, ವಂಚನೆ, ನಂಬಿಕೆ ದ್ರೋಹ, ಡಾಕ್ಟರ್, ಲಾಯರ್, ಪೋಲೀಸ್, ರಾಜಕಾರಣಿ, ಕಂಟ್ರಾಕ್ಟರ್ ಮುಂತಾದ ಸಮಾಜದ ಎಲ್ಲಾ ಕ್ಷೇತ್ರದ ಜನರ ಮೇಲೆ ಅನುಮಾನ ಏಕೆ. ಇವರೆಲ್ಲರೂ ನಮ್ಮ ತಾಯಿ ತಂಗಿ ಅಣ್ಣ ಅಕ್ಕ ಅಪ್ಪ ಅಮ್ಮ ಮಕ್ಕಳಲ್ಲಿ ಒಬ್ಬರಾಗಿರಬೇಕಲ್ಲವೇ ?
ಆದರೂ ಏಕೆ ವ್ಯವಸ್ಥೆ ಹೀಗಿದೆ……

ಸಮಸ್ಯೆ ಇರುವುದೇ ಇಲ್ಲಿ.

ಸಮಾಜದ ಒಟ್ಟು ಹಿತದ ದೃಷ್ಟಿಯಲ್ಲಿ ನಾವು ಇವರನ್ನು ನೋಡುವುದಿಲ್ಲ. ನಮ್ಮ ವೈಯಕ್ತಿಕ ಬದುಕಿನ ಸ್ವಾರ್ಥದ ಹಿತದಿಂದ ಇವರನ್ನು ಗುರುತಿಸುತ್ತೇವೆ…..

ಹೆಚ್ಚು ಲಂಚ ತಂದು, ಮನೆ ಕಾರು ಒಡವೆ ಪ್ರವಾಸ ಮುಂತಾದ ಮೋಜು ಮಾಡುವ ವ್ಯಕ್ತಿ, ಹೆಂಡತಿ ಮಕ್ಕಳಿಗೆ, ತಂದೆ ತಾಯಿಗಳಿಗೆ ಅತ್ಯಂತ ಪ್ರೀತಿ ಪಾತ್ರವಾಗುತ್ತಾನೆ. ಗಂಡನಿಗೆ ಅಥವಾ ಮಗನಿಗೆ ಬರುವ ಸಂಬಳದಲ್ಲಿ ಇಷ್ಟೊಂದು ಅದ್ದೂರಿ ಜೀವನ ಸಾಧ್ಯವಿಲ್ಲ. ಇದು ಲಂಚದ ಹಣವೇ ಎಂದು ಗೊತ್ತಿದ್ದರೂ ಅದನ್ನು ಸಾಮಾನ್ಯವಾಗಿ ಯಾರೂ ಪ್ರಶ್ನಿಸುವುದಿಲ್ಲ……

ಪ್ರಿಯಕರನಿಗೆ ಅಥವಾ ಗಂಡನಿಗೆ ಮೋಸ ವಂಚನೆ ಮಾಡಿದ ಹೆಣ್ಣು ನಮ್ಮ ಅಕ್ಕ ತಂಗಿ ಮಗಳು ಆಗಿದ್ದರೂ ನಾವು ಸಮರ್ಥಿಸುತ್ತೇವೆ……

ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಅತ್ತೆ ಮಾವನಿಗೊಂದು ನ್ಯಾಯ, ಅಮ್ಮ ಅಪ್ಪನಿಗೆ ಒಂದು ನ್ಯಾಯ, ಮಗ ಮಗಳಿಗೆ ಒಂದು ನಿಯಮ, ಅಳಿಯ ಸೊಸೆಗೊಂದು ನಿಯಮ.
ಇದರ ವಿಸ್ತ್ರತ ರೂಪವೇ ಇಂದಿನ ಒಟ್ಟು ವ್ಯವಸ್ಥೆಯ ಗೊಂದಲಕ್ಕೆ ಬಹುತೇಕ ಕಾರಣ……

ನ್ಯಾಯ ಅನ್ಯಾಯ, ನೀತಿ ಅನೀತಿಗಳ ವಿಷಯ ಬಂದಾಗ ಭಾವನಾತ್ಮಕ ಜೀವಿಗಳಾದ ನಾವು ಪಕ್ಷಪಾತದ ಧೋರಣೆ ಅನುಸರಿಸುತ್ತೇವೆ.
ನಮ್ಮ ಮಗ ಅತ್ಯಾಚಾರಿ, ವಿಕೃತ ಕಾಮಿ, ಕೊಲೆಪಾತಕನಾದಾಗ ಅದು ನಮಗೆ ಯೌವ್ವನದ ಸಣ್ಣ ಚೇಷ್ಟೇ ಎಂದೇ ಕಾಣುತ್ತದೆ. ಇತರರು ಮಾಡಿದಾಗ ರಸ್ತೆಯಲ್ಲಿ ಗುಂಡು ಹೊಡೆದು ಸಾಯಿಸಬೇಕೆನಿಸುತ್ತದೆ…..

ನನ್ನ ಗಂಡ/ಹೆಂಡತಿ, ಲೋಕಾಯುಕ್ತರ ಬಲೆಯಲ್ಲಿ ಸಿಲುಕಿದಾಗ ಎಷ್ಟೋ ದೊಡ್ಡ ಭ್ರಷ್ಟರ ನಡುವೆ ಇವರು ತುಂಬಾ ಒಳ್ಳೆಯವರು, ಇಡೀ ವ್ಯವಸ್ಥೆ ಇವರಿಗೆ ಮೋಸ ಮಾಡಿದೆ ಎನಿಸುತ್ತದೆ……

ಸಮಸ್ಯೆಗಳ ಬಗ್ಗೆ ಏನೋ ಹೇಳಿದೆ. ಆದರೆ ಇಂದಿನ ಸಾಮಾಜಿಕ, ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಇದನ್ನು ಮೀರಲು ಸಾಧ್ಯವೇ ?….

ಇದೇ ನಮ್ಮ ಮುಂದಿರುವ ಬಹುದೊಡ್ಡ ಸವಾಲು. ಮನಸ್ಸುಗಳ ಅಂತರಂಗದ ಚಳವಳಿ ಈ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳವ ಆಶಯವಿದೆ. ಜನರ ಚಿಂತನಾ ಕ್ರಮವನ್ನು ವಿಶಾಲಗೊಳಿಸಿ ಅವರ ವ್ಯಕ್ತಿತ್ವ ವಿಕಸನಕ್ಕೆ‌ ದಾರಿ ಮಾಡಿಕೊಡುವ ಪ್ರಯತ್ನ ಮುಂದುವರಿಯಲಿದೆ….

ದ್ವೇಷವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ,
ಪ್ರೀತಿಯನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ…..

ಕೋಪವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ,
ತಾಳ್ಮೆಯನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ…….

ಸ್ವಾರ್ಥವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ,
ತ್ಯಾಗವನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ……

ಗಲಾಟೆಗಳನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ,
ಸ್ನೇಹಿತರನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ…….

ಭ್ರಮೆಗಳನ್ನು ಸ್ವಲ್ಪ ದೂರ ಮಾಡೋಣ,
ವಾಸ್ತವಕ್ಕೆ ಸ್ವಲ್ಪ ಹತ್ತಿರವಾಗೋಣ…….

ಕೃತಕತೆ ಸ್ವಲ್ಪ ಕಡಿಮೆ ಮಾಡೋಣ,
ನ್ಯೆಜತೆಗೆ ಸ್ವಲ್ಪ ಹೆಚ್ಚು ಒತ್ತು ಕೊಡೋಣ……

ಎಲ್ಲವನ್ನೂ ನಿಮ್ಮ ಕುಟುಂಬಕ್ಕಾಗಿ ಮಾಡಿ,
ಆದರೆ ಸಮಾಜಕ್ಕಾಗಿ ಸ್ವಲ್ಪವಾದರೂ ಕೊಡಿ……

ಎಲ್ಲವೂ ನಿಮಗಾಗಿ,
ನೀವು ಮಾತ್ರ ಇತರರಿಗಾಗಿ……

ಮುಖವಾಡ ಮನಸ್ಥಿತಿ ಕಡಿಮೆ ಮಾಡಿ,
ಪ್ರಾಮಾಣಿಕ ಮನಸ್ಥಿತಿಗೆ ಹೆಚ್ಚು ಹತ್ತಿರವಾಗಿ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

37 minutes ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

2 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

6 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

7 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

15 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

23 hours ago