ವಿಚ್ಛೇದನಕ್ಕೆ ಮುಂದಾಗಿದ್ದ ದಂಪತಿಗಳನ್ನು ಒಂದುಗೂಡಿಸಿದ ಲೋಕ ಆದಾಲತ್‌: ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದ ಜೋಡಿ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿಂದು ರಾಷ್ಟ್ರೀಯ ಲೋಕ ಆದಾಲತ್‌ ನಡೆಯಿತು.

ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ದೂರವಾಗಿದ್ದ ಗಂಡ-ಹೆಂಡತಿಯನ್ನು ರಾಜೀ ಸಂಧಾನದ ಮೂಲಕ ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್ ಸಿ ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ಅವರು ಒಂದು ಮಾಡಿದರು.

ದೊಡ್ಡಬಳ್ಳಾಪುರ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಸುಮಾರು ವರ್ಷಗಳಿಂದ ನಡೆಯುತ್ತಿದ್ದ ಕೌಟುಂಬಿಕ ಪ್ರಕರಣಗಳನ್ನು ಇತ್ಯರ್ಥ ಮಾಡುವ ಮೂಲಕ ದಾಂಪತ್ಯ ಜೀವನದಲ್ಲಿ ಬಿರುಕುಗೊಂಡು ದೂರವಾಗಿದ್ದ ದಂಪತಿಗಳನ್ನು ಮತ್ತೆ ಒಂದು ಮಾಡಲಾಯಿತು.

ಇಬ್ಬರ ಮನಸ್ಸುನ್ನು ಬದಲಾಯಿಸಿ ನೂತನ ಜೀವನಕ್ಕೆ ಕಾಲಿಡುವಂತೆ ನ್ಯಾಯಾಧೀಶರು ಮನಮೋಲಿಸಿದರು. ನವ ವಧು- ವರರಂತೆ ಪರಸ್ಪರ ಹೂಮಾಲೆಗಳನ್ನು ಹಾಕಿಕೊಳ್ಳುವ ಮೂಲಕ ಸತಿ-ಪತಿ ಒಂದಾದರು.

ಒಂದಾದ ಜೋಡಿಗಳಿಗೆ ಪರಸ್ಪರ ಸಿಹಿ ತಿನ್ನಿಸುವ ಮೂಲಕ ಸಂಭ್ರಮಿಸಿದ ಘಟನೆ ಕೋರ್ಟ್ ಆವರಣದಲ್ಲಿ ನಡೆದಿದೆ.

ಶಾಲಿನಿ – ಹರೀಶ್, ಸುರೇಶ್ – ಮೀನಾಕ್ಷಿ ಜೋಡಿಯು ದೊಡ್ಡಬಳ್ಳಾಪುರ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದರು. ಇದೀಗ ರಾಷ್ಟ್ರೀಯ ಲೋಕ ಆದಾಲತ್‌ ನಲ್ಲಿ ರಾಜೀ ಸಂಧಾನದ ಮೂಲಕ ಒಂದುಗೂಡಿಸಲಾಗಿದೆ. ಈ ಜೋಡಿ ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದ್ದಾರೆ.

ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ಕಲಹಗಳು ಹೆಚ್ಚಾಗುತ್ತಿದ್ದು, ವಿಚ್ಛೇದನ ಪಡೆಯುವ ಸಂಖ್ಯೆಯೂ ಅಧಿಕವಾಗುತ್ತಿರುವುದು ಬೇಸರದ ಸಂಗತಿ. ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡಬೇಕಾದರೆ ಶಾಂತಿ ಸುವ್ಯವಸ್ಥೆ ಅತ್ಯವಶ್ಯಕ ಎಂದರು.

ಸಣ್ಣ ಪುಟ್ಟ ವ್ಯಾಜ್ಯಗಳಿಂದ ಮನಸ್ಸುಗಳನ್ನು ಕೆಡಿಸಿಕೊಳ್ಳುವ ಬದಲು ಎಲ್ಲರೂ ಹೊಂದಾಣಿಕೆಯ ಜೀವನ ನಡೆಸಿದರೆ ಇಂತಹ ಘಟನೆಗಳು ನಡೆಯುವುದಿಲ್ಲ. ವಿಚ್ಛೇದನಕ್ಕೆ ಮುಂದಾಗಿರುವ ದಂಪತಿಗಳಿಗೆ ಈ ಪ್ರಕರಣ ಒಂದು ಮಾರ್ಗದರ್ಶನವಾಗಿದೆ ಎಂದು ತಿಳಿಸಿದರು.

ಇಂದು ನಡೆದ ಲೋಕ ಅದಾಲತ್ ನಲ್ಲಿ ಸುಮಾರು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ‌. ಪ್ರತಿ ಮೂರು ತಿಂಗಳಿಗೊಮ್ಮೆ ರಾಷ್ಟ್ರೀಯ ಲೋಕ ಆದಾಲತ್‌ ಹಮ್ಮಿಕೊಳ್ಳಲಾಗುತ್ತದೆ. ಈ‌ ಕುರಿತು ಎಲ್ಲರಿಗೂ ಜಾಗೃತಿ ಮೂಡಿಸಲಾಗಿದೆ ಎಂದು ಹೇಳಿದರು…

ಲೋಕ ಅದಾಲತ್ ನಿಂದ ನಾವು(ಗಂಡ-ಹೆಂಡತಿ) ಒಂದಾಗಿದ್ದೇವೆ. ಮುಂದೆ ಯಾವುದೇ ಮನಸ್ತಾಪಗಳು‌ ಇಲ್ಲದೇ ಸಂಸಾರ ನಡೆಸುಕೊಂಡು ಹೋಗುತ್ತೇವೆ‌. ನಮಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಅವರನ್ನು ಚೆನ್ನಾಗಿ ನೋಡಿಕೊಂಡು, ಉತ್ತಮ ವಿದ್ಯಾಭ್ಯಾಸ ಕೊಡಿಸುತ್ತೇವೆ. ನಮ್ಮನ್ನು ಮತ್ತೆ ಒಂದು‌ ಮಾಡಿದ ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ಹಾಗೂ ವಕೀಲರಾದ ಎಂ.ಮೋಹನ್ ಕುಮಾರ್, ಎಂ. ಸುದರ್ಶನ್, ಎಂ.ಕೃಷ್ಣಮೂರ್ತಿ ಅವರಿಗೆ ಧನ್ಯವಾದಗಳು ಎಂದು ಶಾಲಿನಿ ಹರೀಶ್ ಅವರು ತಿಳಿಸಿದರು.

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

3 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

8 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

10 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

11 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago