ವಿಚ್ಛೇದನಕ್ಕೆ ಮುಂದಾಗಿದ್ದ ದಂಪತಿಗಳನ್ನು ಒಂದುಗೂಡಿಸಿದ ಲೋಕ ಆದಾಲತ್‌: ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದ ಜೋಡಿ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿಂದು ರಾಷ್ಟ್ರೀಯ ಲೋಕ ಆದಾಲತ್‌ ನಡೆಯಿತು.

ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ದೂರವಾಗಿದ್ದ ಗಂಡ-ಹೆಂಡತಿಯನ್ನು ರಾಜೀ ಸಂಧಾನದ ಮೂಲಕ ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್ ಸಿ ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ಅವರು ಒಂದು ಮಾಡಿದರು.

ದೊಡ್ಡಬಳ್ಳಾಪುರ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಸುಮಾರು ವರ್ಷಗಳಿಂದ ನಡೆಯುತ್ತಿದ್ದ ಕೌಟುಂಬಿಕ ಪ್ರಕರಣಗಳನ್ನು ಇತ್ಯರ್ಥ ಮಾಡುವ ಮೂಲಕ ದಾಂಪತ್ಯ ಜೀವನದಲ್ಲಿ ಬಿರುಕುಗೊಂಡು ದೂರವಾಗಿದ್ದ ದಂಪತಿಗಳನ್ನು ಮತ್ತೆ ಒಂದು ಮಾಡಲಾಯಿತು.

ಇಬ್ಬರ ಮನಸ್ಸುನ್ನು ಬದಲಾಯಿಸಿ ನೂತನ ಜೀವನಕ್ಕೆ ಕಾಲಿಡುವಂತೆ ನ್ಯಾಯಾಧೀಶರು ಮನಮೋಲಿಸಿದರು. ನವ ವಧು- ವರರಂತೆ ಪರಸ್ಪರ ಹೂಮಾಲೆಗಳನ್ನು ಹಾಕಿಕೊಳ್ಳುವ ಮೂಲಕ ಸತಿ-ಪತಿ ಒಂದಾದರು.

ಒಂದಾದ ಜೋಡಿಗಳಿಗೆ ಪರಸ್ಪರ ಸಿಹಿ ತಿನ್ನಿಸುವ ಮೂಲಕ ಸಂಭ್ರಮಿಸಿದ ಘಟನೆ ಕೋರ್ಟ್ ಆವರಣದಲ್ಲಿ ನಡೆದಿದೆ.

ಶಾಲಿನಿ – ಹರೀಶ್, ಸುರೇಶ್ – ಮೀನಾಕ್ಷಿ ಜೋಡಿಯು ದೊಡ್ಡಬಳ್ಳಾಪುರ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದರು. ಇದೀಗ ರಾಷ್ಟ್ರೀಯ ಲೋಕ ಆದಾಲತ್‌ ನಲ್ಲಿ ರಾಜೀ ಸಂಧಾನದ ಮೂಲಕ ಒಂದುಗೂಡಿಸಲಾಗಿದೆ. ಈ ಜೋಡಿ ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದ್ದಾರೆ.

ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ಕಲಹಗಳು ಹೆಚ್ಚಾಗುತ್ತಿದ್ದು, ವಿಚ್ಛೇದನ ಪಡೆಯುವ ಸಂಖ್ಯೆಯೂ ಅಧಿಕವಾಗುತ್ತಿರುವುದು ಬೇಸರದ ಸಂಗತಿ. ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡಬೇಕಾದರೆ ಶಾಂತಿ ಸುವ್ಯವಸ್ಥೆ ಅತ್ಯವಶ್ಯಕ ಎಂದರು.

ಸಣ್ಣ ಪುಟ್ಟ ವ್ಯಾಜ್ಯಗಳಿಂದ ಮನಸ್ಸುಗಳನ್ನು ಕೆಡಿಸಿಕೊಳ್ಳುವ ಬದಲು ಎಲ್ಲರೂ ಹೊಂದಾಣಿಕೆಯ ಜೀವನ ನಡೆಸಿದರೆ ಇಂತಹ ಘಟನೆಗಳು ನಡೆಯುವುದಿಲ್ಲ. ವಿಚ್ಛೇದನಕ್ಕೆ ಮುಂದಾಗಿರುವ ದಂಪತಿಗಳಿಗೆ ಈ ಪ್ರಕರಣ ಒಂದು ಮಾರ್ಗದರ್ಶನವಾಗಿದೆ ಎಂದು ತಿಳಿಸಿದರು.

ಇಂದು ನಡೆದ ಲೋಕ ಅದಾಲತ್ ನಲ್ಲಿ ಸುಮಾರು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ‌. ಪ್ರತಿ ಮೂರು ತಿಂಗಳಿಗೊಮ್ಮೆ ರಾಷ್ಟ್ರೀಯ ಲೋಕ ಆದಾಲತ್‌ ಹಮ್ಮಿಕೊಳ್ಳಲಾಗುತ್ತದೆ. ಈ‌ ಕುರಿತು ಎಲ್ಲರಿಗೂ ಜಾಗೃತಿ ಮೂಡಿಸಲಾಗಿದೆ ಎಂದು ಹೇಳಿದರು…

ಲೋಕ ಅದಾಲತ್ ನಿಂದ ನಾವು(ಗಂಡ-ಹೆಂಡತಿ) ಒಂದಾಗಿದ್ದೇವೆ. ಮುಂದೆ ಯಾವುದೇ ಮನಸ್ತಾಪಗಳು‌ ಇಲ್ಲದೇ ಸಂಸಾರ ನಡೆಸುಕೊಂಡು ಹೋಗುತ್ತೇವೆ‌. ನಮಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಅವರನ್ನು ಚೆನ್ನಾಗಿ ನೋಡಿಕೊಂಡು, ಉತ್ತಮ ವಿದ್ಯಾಭ್ಯಾಸ ಕೊಡಿಸುತ್ತೇವೆ. ನಮ್ಮನ್ನು ಮತ್ತೆ ಒಂದು‌ ಮಾಡಿದ ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ಹಾಗೂ ವಕೀಲರಾದ ಎಂ.ಮೋಹನ್ ಕುಮಾರ್, ಎಂ. ಸುದರ್ಶನ್, ಎಂ.ಕೃಷ್ಣಮೂರ್ತಿ ಅವರಿಗೆ ಧನ್ಯವಾದಗಳು ಎಂದು ಶಾಲಿನಿ ಹರೀಶ್ ಅವರು ತಿಳಿಸಿದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

8 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

12 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

13 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

21 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago