ವಿಚ್ಛೇದನಕ್ಕೆ ಮುಂದಾಗಿದ್ದ ದಂಪತಿಗಳನ್ನು ಒಂದುಗೂಡಿಸಿದ ಲೋಕ ಆದಾಲತ್‌: ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದ ಜೋಡಿ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿಂದು ರಾಷ್ಟ್ರೀಯ ಲೋಕ ಆದಾಲತ್‌ ನಡೆಯಿತು.

ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ದೂರವಾಗಿದ್ದ ಗಂಡ-ಹೆಂಡತಿಯನ್ನು ರಾಜೀ ಸಂಧಾನದ ಮೂಲಕ ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್ ಸಿ ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ಅವರು ಒಂದು ಮಾಡಿದರು.

ದೊಡ್ಡಬಳ್ಳಾಪುರ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಸುಮಾರು ವರ್ಷಗಳಿಂದ ನಡೆಯುತ್ತಿದ್ದ ಕೌಟುಂಬಿಕ ಪ್ರಕರಣಗಳನ್ನು ಇತ್ಯರ್ಥ ಮಾಡುವ ಮೂಲಕ ದಾಂಪತ್ಯ ಜೀವನದಲ್ಲಿ ಬಿರುಕುಗೊಂಡು ದೂರವಾಗಿದ್ದ ದಂಪತಿಗಳನ್ನು ಮತ್ತೆ ಒಂದು ಮಾಡಲಾಯಿತು.

ಇಬ್ಬರ ಮನಸ್ಸುನ್ನು ಬದಲಾಯಿಸಿ ನೂತನ ಜೀವನಕ್ಕೆ ಕಾಲಿಡುವಂತೆ ನ್ಯಾಯಾಧೀಶರು ಮನಮೋಲಿಸಿದರು. ನವ ವಧು- ವರರಂತೆ ಪರಸ್ಪರ ಹೂಮಾಲೆಗಳನ್ನು ಹಾಕಿಕೊಳ್ಳುವ ಮೂಲಕ ಸತಿ-ಪತಿ ಒಂದಾದರು.

ಒಂದಾದ ಜೋಡಿಗಳಿಗೆ ಪರಸ್ಪರ ಸಿಹಿ ತಿನ್ನಿಸುವ ಮೂಲಕ ಸಂಭ್ರಮಿಸಿದ ಘಟನೆ ಕೋರ್ಟ್ ಆವರಣದಲ್ಲಿ ನಡೆದಿದೆ.

ಶಾಲಿನಿ – ಹರೀಶ್, ಸುರೇಶ್ – ಮೀನಾಕ್ಷಿ ಜೋಡಿಯು ದೊಡ್ಡಬಳ್ಳಾಪುರ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದರು. ಇದೀಗ ರಾಷ್ಟ್ರೀಯ ಲೋಕ ಆದಾಲತ್‌ ನಲ್ಲಿ ರಾಜೀ ಸಂಧಾನದ ಮೂಲಕ ಒಂದುಗೂಡಿಸಲಾಗಿದೆ. ಈ ಜೋಡಿ ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದ್ದಾರೆ.

ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ಕಲಹಗಳು ಹೆಚ್ಚಾಗುತ್ತಿದ್ದು, ವಿಚ್ಛೇದನ ಪಡೆಯುವ ಸಂಖ್ಯೆಯೂ ಅಧಿಕವಾಗುತ್ತಿರುವುದು ಬೇಸರದ ಸಂಗತಿ. ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡಬೇಕಾದರೆ ಶಾಂತಿ ಸುವ್ಯವಸ್ಥೆ ಅತ್ಯವಶ್ಯಕ ಎಂದರು.

ಸಣ್ಣ ಪುಟ್ಟ ವ್ಯಾಜ್ಯಗಳಿಂದ ಮನಸ್ಸುಗಳನ್ನು ಕೆಡಿಸಿಕೊಳ್ಳುವ ಬದಲು ಎಲ್ಲರೂ ಹೊಂದಾಣಿಕೆಯ ಜೀವನ ನಡೆಸಿದರೆ ಇಂತಹ ಘಟನೆಗಳು ನಡೆಯುವುದಿಲ್ಲ. ವಿಚ್ಛೇದನಕ್ಕೆ ಮುಂದಾಗಿರುವ ದಂಪತಿಗಳಿಗೆ ಈ ಪ್ರಕರಣ ಒಂದು ಮಾರ್ಗದರ್ಶನವಾಗಿದೆ ಎಂದು ತಿಳಿಸಿದರು.

ಇಂದು ನಡೆದ ಲೋಕ ಅದಾಲತ್ ನಲ್ಲಿ ಸುಮಾರು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ‌. ಪ್ರತಿ ಮೂರು ತಿಂಗಳಿಗೊಮ್ಮೆ ರಾಷ್ಟ್ರೀಯ ಲೋಕ ಆದಾಲತ್‌ ಹಮ್ಮಿಕೊಳ್ಳಲಾಗುತ್ತದೆ. ಈ‌ ಕುರಿತು ಎಲ್ಲರಿಗೂ ಜಾಗೃತಿ ಮೂಡಿಸಲಾಗಿದೆ ಎಂದು ಹೇಳಿದರು…

ಲೋಕ ಅದಾಲತ್ ನಿಂದ ನಾವು(ಗಂಡ-ಹೆಂಡತಿ) ಒಂದಾಗಿದ್ದೇವೆ. ಮುಂದೆ ಯಾವುದೇ ಮನಸ್ತಾಪಗಳು‌ ಇಲ್ಲದೇ ಸಂಸಾರ ನಡೆಸುಕೊಂಡು ಹೋಗುತ್ತೇವೆ‌. ನಮಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಅವರನ್ನು ಚೆನ್ನಾಗಿ ನೋಡಿಕೊಂಡು, ಉತ್ತಮ ವಿದ್ಯಾಭ್ಯಾಸ ಕೊಡಿಸುತ್ತೇವೆ. ನಮ್ಮನ್ನು ಮತ್ತೆ ಒಂದು‌ ಮಾಡಿದ ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ಹಾಗೂ ವಕೀಲರಾದ ಎಂ.ಮೋಹನ್ ಕುಮಾರ್, ಎಂ. ಸುದರ್ಶನ್, ಎಂ.ಕೃಷ್ಣಮೂರ್ತಿ ಅವರಿಗೆ ಧನ್ಯವಾದಗಳು ಎಂದು ಶಾಲಿನಿ ಹರೀಶ್ ಅವರು ತಿಳಿಸಿದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

6 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

7 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

10 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

10 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

15 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

19 hours ago