ವಿಚ್ಛೇದನಕ್ಕೆ ಮುಂದಾಗಿದ್ದ ದಂಪತಿಗಳನ್ನು ಒಂದುಗೂಡಿಸಿದ ಲೋಕ ಆದಾಲತ್‌: ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದ ಜೋಡಿ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿಂದು ರಾಷ್ಟ್ರೀಯ ಲೋಕ ಆದಾಲತ್‌ ನಡೆಯಿತು.

ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ದೂರವಾಗಿದ್ದ ಗಂಡ-ಹೆಂಡತಿಯನ್ನು ರಾಜೀ ಸಂಧಾನದ ಮೂಲಕ ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್ ಸಿ ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ಅವರು ಒಂದು ಮಾಡಿದರು.

ದೊಡ್ಡಬಳ್ಳಾಪುರ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಸುಮಾರು ವರ್ಷಗಳಿಂದ ನಡೆಯುತ್ತಿದ್ದ ಕೌಟುಂಬಿಕ ಪ್ರಕರಣಗಳನ್ನು ಇತ್ಯರ್ಥ ಮಾಡುವ ಮೂಲಕ ದಾಂಪತ್ಯ ಜೀವನದಲ್ಲಿ ಬಿರುಕುಗೊಂಡು ದೂರವಾಗಿದ್ದ ದಂಪತಿಗಳನ್ನು ಮತ್ತೆ ಒಂದು ಮಾಡಲಾಯಿತು.

ಇಬ್ಬರ ಮನಸ್ಸುನ್ನು ಬದಲಾಯಿಸಿ ನೂತನ ಜೀವನಕ್ಕೆ ಕಾಲಿಡುವಂತೆ ನ್ಯಾಯಾಧೀಶರು ಮನಮೋಲಿಸಿದರು. ನವ ವಧು- ವರರಂತೆ ಪರಸ್ಪರ ಹೂಮಾಲೆಗಳನ್ನು ಹಾಕಿಕೊಳ್ಳುವ ಮೂಲಕ ಸತಿ-ಪತಿ ಒಂದಾದರು.

ಒಂದಾದ ಜೋಡಿಗಳಿಗೆ ಪರಸ್ಪರ ಸಿಹಿ ತಿನ್ನಿಸುವ ಮೂಲಕ ಸಂಭ್ರಮಿಸಿದ ಘಟನೆ ಕೋರ್ಟ್ ಆವರಣದಲ್ಲಿ ನಡೆದಿದೆ.

ಶಾಲಿನಿ – ಹರೀಶ್, ಸುರೇಶ್ – ಮೀನಾಕ್ಷಿ ಜೋಡಿಯು ದೊಡ್ಡಬಳ್ಳಾಪುರ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದರು. ಇದೀಗ ರಾಷ್ಟ್ರೀಯ ಲೋಕ ಆದಾಲತ್‌ ನಲ್ಲಿ ರಾಜೀ ಸಂಧಾನದ ಮೂಲಕ ಒಂದುಗೂಡಿಸಲಾಗಿದೆ. ಈ ಜೋಡಿ ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದ್ದಾರೆ.

ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ಕಲಹಗಳು ಹೆಚ್ಚಾಗುತ್ತಿದ್ದು, ವಿಚ್ಛೇದನ ಪಡೆಯುವ ಸಂಖ್ಯೆಯೂ ಅಧಿಕವಾಗುತ್ತಿರುವುದು ಬೇಸರದ ಸಂಗತಿ. ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡಬೇಕಾದರೆ ಶಾಂತಿ ಸುವ್ಯವಸ್ಥೆ ಅತ್ಯವಶ್ಯಕ ಎಂದರು.

ಸಣ್ಣ ಪುಟ್ಟ ವ್ಯಾಜ್ಯಗಳಿಂದ ಮನಸ್ಸುಗಳನ್ನು ಕೆಡಿಸಿಕೊಳ್ಳುವ ಬದಲು ಎಲ್ಲರೂ ಹೊಂದಾಣಿಕೆಯ ಜೀವನ ನಡೆಸಿದರೆ ಇಂತಹ ಘಟನೆಗಳು ನಡೆಯುವುದಿಲ್ಲ. ವಿಚ್ಛೇದನಕ್ಕೆ ಮುಂದಾಗಿರುವ ದಂಪತಿಗಳಿಗೆ ಈ ಪ್ರಕರಣ ಒಂದು ಮಾರ್ಗದರ್ಶನವಾಗಿದೆ ಎಂದು ತಿಳಿಸಿದರು.

ಇಂದು ನಡೆದ ಲೋಕ ಅದಾಲತ್ ನಲ್ಲಿ ಸುಮಾರು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ‌. ಪ್ರತಿ ಮೂರು ತಿಂಗಳಿಗೊಮ್ಮೆ ರಾಷ್ಟ್ರೀಯ ಲೋಕ ಆದಾಲತ್‌ ಹಮ್ಮಿಕೊಳ್ಳಲಾಗುತ್ತದೆ. ಈ‌ ಕುರಿತು ಎಲ್ಲರಿಗೂ ಜಾಗೃತಿ ಮೂಡಿಸಲಾಗಿದೆ ಎಂದು ಹೇಳಿದರು…

ಲೋಕ ಅದಾಲತ್ ನಿಂದ ನಾವು(ಗಂಡ-ಹೆಂಡತಿ) ಒಂದಾಗಿದ್ದೇವೆ. ಮುಂದೆ ಯಾವುದೇ ಮನಸ್ತಾಪಗಳು‌ ಇಲ್ಲದೇ ಸಂಸಾರ ನಡೆಸುಕೊಂಡು ಹೋಗುತ್ತೇವೆ‌. ನಮಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಅವರನ್ನು ಚೆನ್ನಾಗಿ ನೋಡಿಕೊಂಡು, ಉತ್ತಮ ವಿದ್ಯಾಭ್ಯಾಸ ಕೊಡಿಸುತ್ತೇವೆ. ನಮ್ಮನ್ನು ಮತ್ತೆ ಒಂದು‌ ಮಾಡಿದ ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ಹಾಗೂ ವಕೀಲರಾದ ಎಂ.ಮೋಹನ್ ಕುಮಾರ್, ಎಂ. ಸುದರ್ಶನ್, ಎಂ.ಕೃಷ್ಣಮೂರ್ತಿ ಅವರಿಗೆ ಧನ್ಯವಾದಗಳು ಎಂದು ಶಾಲಿನಿ ಹರೀಶ್ ಅವರು ತಿಳಿಸಿದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

14 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

16 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

17 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

21 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

23 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago