ವಿಚ್ಛೇದನಕ್ಕೆ ಮುಂದಾಗಿದ್ದ ದಂಪತಿಗಳನ್ನು ಒಂದುಗೂಡಿಸಿದ ಲೋಕ ಆದಾಲತ್‌: ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದ ಜೋಡಿ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿಂದು ರಾಷ್ಟ್ರೀಯ ಲೋಕ ಆದಾಲತ್‌ ನಡೆಯಿತು.

ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ದೂರವಾಗಿದ್ದ ಗಂಡ-ಹೆಂಡತಿಯನ್ನು ರಾಜೀ ಸಂಧಾನದ ಮೂಲಕ ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್ ಸಿ ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ಅವರು ಒಂದು ಮಾಡಿದರು.

ದೊಡ್ಡಬಳ್ಳಾಪುರ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಸುಮಾರು ವರ್ಷಗಳಿಂದ ನಡೆಯುತ್ತಿದ್ದ ಕೌಟುಂಬಿಕ ಪ್ರಕರಣಗಳನ್ನು ಇತ್ಯರ್ಥ ಮಾಡುವ ಮೂಲಕ ದಾಂಪತ್ಯ ಜೀವನದಲ್ಲಿ ಬಿರುಕುಗೊಂಡು ದೂರವಾಗಿದ್ದ ದಂಪತಿಗಳನ್ನು ಮತ್ತೆ ಒಂದು ಮಾಡಲಾಯಿತು.

ಇಬ್ಬರ ಮನಸ್ಸುನ್ನು ಬದಲಾಯಿಸಿ ನೂತನ ಜೀವನಕ್ಕೆ ಕಾಲಿಡುವಂತೆ ನ್ಯಾಯಾಧೀಶರು ಮನಮೋಲಿಸಿದರು. ನವ ವಧು- ವರರಂತೆ ಪರಸ್ಪರ ಹೂಮಾಲೆಗಳನ್ನು ಹಾಕಿಕೊಳ್ಳುವ ಮೂಲಕ ಸತಿ-ಪತಿ ಒಂದಾದರು.

ಒಂದಾದ ಜೋಡಿಗಳಿಗೆ ಪರಸ್ಪರ ಸಿಹಿ ತಿನ್ನಿಸುವ ಮೂಲಕ ಸಂಭ್ರಮಿಸಿದ ಘಟನೆ ಕೋರ್ಟ್ ಆವರಣದಲ್ಲಿ ನಡೆದಿದೆ.

ಶಾಲಿನಿ – ಹರೀಶ್, ಸುರೇಶ್ – ಮೀನಾಕ್ಷಿ ಜೋಡಿಯು ದೊಡ್ಡಬಳ್ಳಾಪುರ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದರು. ಇದೀಗ ರಾಷ್ಟ್ರೀಯ ಲೋಕ ಆದಾಲತ್‌ ನಲ್ಲಿ ರಾಜೀ ಸಂಧಾನದ ಮೂಲಕ ಒಂದುಗೂಡಿಸಲಾಗಿದೆ. ಈ ಜೋಡಿ ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದ್ದಾರೆ.

ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ಕಲಹಗಳು ಹೆಚ್ಚಾಗುತ್ತಿದ್ದು, ವಿಚ್ಛೇದನ ಪಡೆಯುವ ಸಂಖ್ಯೆಯೂ ಅಧಿಕವಾಗುತ್ತಿರುವುದು ಬೇಸರದ ಸಂಗತಿ. ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡಬೇಕಾದರೆ ಶಾಂತಿ ಸುವ್ಯವಸ್ಥೆ ಅತ್ಯವಶ್ಯಕ ಎಂದರು.

ಸಣ್ಣ ಪುಟ್ಟ ವ್ಯಾಜ್ಯಗಳಿಂದ ಮನಸ್ಸುಗಳನ್ನು ಕೆಡಿಸಿಕೊಳ್ಳುವ ಬದಲು ಎಲ್ಲರೂ ಹೊಂದಾಣಿಕೆಯ ಜೀವನ ನಡೆಸಿದರೆ ಇಂತಹ ಘಟನೆಗಳು ನಡೆಯುವುದಿಲ್ಲ. ವಿಚ್ಛೇದನಕ್ಕೆ ಮುಂದಾಗಿರುವ ದಂಪತಿಗಳಿಗೆ ಈ ಪ್ರಕರಣ ಒಂದು ಮಾರ್ಗದರ್ಶನವಾಗಿದೆ ಎಂದು ತಿಳಿಸಿದರು.

ಇಂದು ನಡೆದ ಲೋಕ ಅದಾಲತ್ ನಲ್ಲಿ ಸುಮಾರು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ‌. ಪ್ರತಿ ಮೂರು ತಿಂಗಳಿಗೊಮ್ಮೆ ರಾಷ್ಟ್ರೀಯ ಲೋಕ ಆದಾಲತ್‌ ಹಮ್ಮಿಕೊಳ್ಳಲಾಗುತ್ತದೆ. ಈ‌ ಕುರಿತು ಎಲ್ಲರಿಗೂ ಜಾಗೃತಿ ಮೂಡಿಸಲಾಗಿದೆ ಎಂದು ಹೇಳಿದರು…

ಲೋಕ ಅದಾಲತ್ ನಿಂದ ನಾವು(ಗಂಡ-ಹೆಂಡತಿ) ಒಂದಾಗಿದ್ದೇವೆ. ಮುಂದೆ ಯಾವುದೇ ಮನಸ್ತಾಪಗಳು‌ ಇಲ್ಲದೇ ಸಂಸಾರ ನಡೆಸುಕೊಂಡು ಹೋಗುತ್ತೇವೆ‌. ನಮಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಅವರನ್ನು ಚೆನ್ನಾಗಿ ನೋಡಿಕೊಂಡು, ಉತ್ತಮ ವಿದ್ಯಾಭ್ಯಾಸ ಕೊಡಿಸುತ್ತೇವೆ. ನಮ್ಮನ್ನು ಮತ್ತೆ ಒಂದು‌ ಮಾಡಿದ ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ಹಾಗೂ ವಕೀಲರಾದ ಎಂ.ಮೋಹನ್ ಕುಮಾರ್, ಎಂ. ಸುದರ್ಶನ್, ಎಂ.ಕೃಷ್ಣಮೂರ್ತಿ ಅವರಿಗೆ ಧನ್ಯವಾದಗಳು ಎಂದು ಶಾಲಿನಿ ಹರೀಶ್ ಅವರು ತಿಳಿಸಿದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

14 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

24 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago