ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ ಕೆಲಸ ಮಾಡಬೇಕಿದೆ ಎಂದು ವಿಜಯಪುರದ ಬಸವ ಕಲ್ಯಾಣ ಮಠದ ಶ್ರೀಗಳಾದ ಡಾ. ಮಹದೇವಸ್ವಾಮೀಜಿ ಅವರು ಹೇಳಿದರು.

ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ಮೇಲೂರು ರಸ್ತೆಯಲ್ಲಿರುವ ಶ್ರೀ ಬಸವ ಕಲ್ಯಾಣ ಮಠದಲ್ಲಿ ಕಾರ್ತಿಕ ಮಾಸದ ಕೊನೆಯ ಸೋಮವಾರ ಪ್ರಯುಕ್ತ ಆಯೋಜಿಸಿದ್ದ “ಶಿವಪಂಚಾಕ್ಷರಿ ಮಹಾಮಂತ್ರ ಅಖಂಡ ಭಜನೆಯ ಸಮಾರೋಪ ಹಾಗೂ 38ನೇ ವರ್ಷದ ಕಡ್ಲೆಕಾಯಿ ಪರಿಷೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಧ್ಯಾತ್ಮಿಕ, ಪ್ರವಚನ ಆಲಿಸುವುದರಿಂದ ನಮ್ಮಲ್ಲಿರುವ ನಕಾರಾತ್ಮಕ ಮನೋಭಾವ ತೊಲಗಿಸಿ, ಸಕಾರಾತ್ಮಕ ಮನೋಲ್ಲಾಸ ಸಂಪಾದಿಸಲು ಸಾಧ್ಯವಾಗುತ್ತದೆ ಎಂದು ಶ್ರೀಗಳು ಆಶಿರ್ವಚನ ನೀಡಿದರು.

ಮುಖ್ಯ ಅತಿಥಿಗಳಾದ ದೇವನಹಳ್ಳಿ ನಿವೃತ್ತ ತಹಶೀಲ್ದಾರ್ ಹೆಚ್. ಬಾಲಕೃಷ್ಣ ಅವರು ಮಾತನಾಡಿ, ಸಮಾಜದಲ್ಲಿ ಸಾಮರಸ್ಯ, ಪರಿವರ್ತನೆ ತರುವಲ್ಲಿ ಮಠ-ಮಾನ್ಯಗಳ ಪಾತ್ರ ಅಪಾರವಾದುದ್ದು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದರಿಂದ ಸದ್ವಿಚಾರ ತಿಳಿಯುವ ಜತೆಗೆ ಜೀವನದಲ್ಲಿ ನೆಮ್ಮದಿ ಪಡೆಯಲು ಸಹಕಾರಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಓಂತಾರಾಶ್ರಮದ ಕಾಳಿತನಯ ಉಮಾ ಮಹೇಶ್ವರ ಶ್ರೀಗಳು, ಶ್ರೀಮಠದ ಕಿರಿಯ ಶ್ರೀಗಳಾದ ಸದಾಶಿವ ಸ್ವಾಮಿಜೀಯವರು ದಿವ್ಯಸಾನಿಧ್ಯ ವಹಿಸಿದ್ದರು.

ಇದಕ್ಕೂ ಮುನ್ನ ಹೋಮ ಹವನ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಸಿ, ಶ್ರೀಮಠದ ಸಾವಿರಾರು ಭಕ್ತರಿಗೆ ಅನ್ನ ಪ್ರಸಾದ ಜತೆಗೆ 35 ಕ್ವಿಂಟಲ್ ಕಡ್ಲೆಕಾಯಿ ಪ್ರಸಾದ ವಿತರಣೆ ಮಾಡಲಾಯಿತು.

ಮೂರು ದಿನ ನಿರಂತರ ಜರುಗಿದ ಶಿವಪಂಚಾಕ್ಷರಿ ಮಹಾಮಂತ್ರ ಅಖಂಡ ಭಜನೆ ಸಮಾರಂಭಕ್ಕೆ ತೆರೆ ಎಳೆಯಲಾಯಿತು. ಇದೇ ವೇಳೆ ಶ್ರೀಮಠದಿಂದ 2026 ನೇ ವರ್ಷದ ನೂತನ ದಿನದರ್ಶಿಕೆಯನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ದೊಡ್ಡಹುಲ್ಲೂರಿನ ಸ್ಟಾಂಪ್ ವೆಂಡರ್ ನಾರಾಯಣಸ್ವಾಮಿ, ಕನಕಪುರದ ಎಂ.ಎನ್.ಸಿ ಕಂಪನಿ ಸಾಫ್ಟ್ ವೇರ್ ಇಂಜಿನಿಯರ್ ಜಗದೀಶ್, ಹೊಸಕೋಟೆ ತಾ.ಪಂ ಮಾಜಿ ಅಧ್ಯಕ್ಷ ಟಿ.ಎಸ್ ರಾಜಶೇಖರ್, ವಿಜಯಪುರದ ಸಾಹಿತಿ ಸುರೇಶ್ ಬಾಬು, ಶ್ರೀಮಠದ ಸದಸ್ಯರಾದ ಪುರ ಗ್ರಾಮದ ನಂಜುಂಡಪ್ಪ, ಅಂಕದಟ್ಟಿ ನಾರಾಯಣಸ್ವಾಮಿ, ದಾಕ್ಷಾಯಣಮ್ಮ, ಪಿ.ಸಿ ಜಯಕುಮಾರ್, ಬಸವರಾಜ ಹಾಗೂ ಸ್ಥಳೀಯ ಮುಖಂಡರು ಸೇರಿದಂತೆ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಭೂ ಮಾಪನ ಕಾರ್ಯ ಸ್ಥಗಿತ, ರೈತರ ಆಕ್ರೋಶ: ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…

18 minutes ago

ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆ ಜಾರಿ- ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್

ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…

1 hour ago

ಆಶಾ ಭೋಸ್ಲೆ…..ಸುಮಾರು 12000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದವರು- ಅವರಿಗೆ ‌ಭಾವಪೂರ್ಣ ಶ್ರದ್ಧಾಂಜಲಿ……

ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…

11 hours ago

Документ_9

Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…

15 hours ago

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

23 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

1 day ago