ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ ಕೆಲಸ ಮಾಡಬೇಕಿದೆ ಎಂದು ವಿಜಯಪುರದ ಬಸವ ಕಲ್ಯಾಣ ಮಠದ ಶ್ರೀಗಳಾದ ಡಾ. ಮಹದೇವಸ್ವಾಮೀಜಿ ಅವರು ಹೇಳಿದರು.

ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ಮೇಲೂರು ರಸ್ತೆಯಲ್ಲಿರುವ ಶ್ರೀ ಬಸವ ಕಲ್ಯಾಣ ಮಠದಲ್ಲಿ ಕಾರ್ತಿಕ ಮಾಸದ ಕೊನೆಯ ಸೋಮವಾರ ಪ್ರಯುಕ್ತ ಆಯೋಜಿಸಿದ್ದ “ಶಿವಪಂಚಾಕ್ಷರಿ ಮಹಾಮಂತ್ರ ಅಖಂಡ ಭಜನೆಯ ಸಮಾರೋಪ ಹಾಗೂ 38ನೇ ವರ್ಷದ ಕಡ್ಲೆಕಾಯಿ ಪರಿಷೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಧ್ಯಾತ್ಮಿಕ, ಪ್ರವಚನ ಆಲಿಸುವುದರಿಂದ ನಮ್ಮಲ್ಲಿರುವ ನಕಾರಾತ್ಮಕ ಮನೋಭಾವ ತೊಲಗಿಸಿ, ಸಕಾರಾತ್ಮಕ ಮನೋಲ್ಲಾಸ ಸಂಪಾದಿಸಲು ಸಾಧ್ಯವಾಗುತ್ತದೆ ಎಂದು ಶ್ರೀಗಳು ಆಶಿರ್ವಚನ ನೀಡಿದರು.

ಮುಖ್ಯ ಅತಿಥಿಗಳಾದ ದೇವನಹಳ್ಳಿ ನಿವೃತ್ತ ತಹಶೀಲ್ದಾರ್ ಹೆಚ್. ಬಾಲಕೃಷ್ಣ ಅವರು ಮಾತನಾಡಿ, ಸಮಾಜದಲ್ಲಿ ಸಾಮರಸ್ಯ, ಪರಿವರ್ತನೆ ತರುವಲ್ಲಿ ಮಠ-ಮಾನ್ಯಗಳ ಪಾತ್ರ ಅಪಾರವಾದುದ್ದು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದರಿಂದ ಸದ್ವಿಚಾರ ತಿಳಿಯುವ ಜತೆಗೆ ಜೀವನದಲ್ಲಿ ನೆಮ್ಮದಿ ಪಡೆಯಲು ಸಹಕಾರಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಓಂತಾರಾಶ್ರಮದ ಕಾಳಿತನಯ ಉಮಾ ಮಹೇಶ್ವರ ಶ್ರೀಗಳು, ಶ್ರೀಮಠದ ಕಿರಿಯ ಶ್ರೀಗಳಾದ ಸದಾಶಿವ ಸ್ವಾಮಿಜೀಯವರು ದಿವ್ಯಸಾನಿಧ್ಯ ವಹಿಸಿದ್ದರು.

ಇದಕ್ಕೂ ಮುನ್ನ ಹೋಮ ಹವನ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಸಿ, ಶ್ರೀಮಠದ ಸಾವಿರಾರು ಭಕ್ತರಿಗೆ ಅನ್ನ ಪ್ರಸಾದ ಜತೆಗೆ 35 ಕ್ವಿಂಟಲ್ ಕಡ್ಲೆಕಾಯಿ ಪ್ರಸಾದ ವಿತರಣೆ ಮಾಡಲಾಯಿತು.

ಮೂರು ದಿನ ನಿರಂತರ ಜರುಗಿದ ಶಿವಪಂಚಾಕ್ಷರಿ ಮಹಾಮಂತ್ರ ಅಖಂಡ ಭಜನೆ ಸಮಾರಂಭಕ್ಕೆ ತೆರೆ ಎಳೆಯಲಾಯಿತು. ಇದೇ ವೇಳೆ ಶ್ರೀಮಠದಿಂದ 2026 ನೇ ವರ್ಷದ ನೂತನ ದಿನದರ್ಶಿಕೆಯನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ದೊಡ್ಡಹುಲ್ಲೂರಿನ ಸ್ಟಾಂಪ್ ವೆಂಡರ್ ನಾರಾಯಣಸ್ವಾಮಿ, ಕನಕಪುರದ ಎಂ.ಎನ್.ಸಿ ಕಂಪನಿ ಸಾಫ್ಟ್ ವೇರ್ ಇಂಜಿನಿಯರ್ ಜಗದೀಶ್, ಹೊಸಕೋಟೆ ತಾ.ಪಂ ಮಾಜಿ ಅಧ್ಯಕ್ಷ ಟಿ.ಎಸ್ ರಾಜಶೇಖರ್, ವಿಜಯಪುರದ ಸಾಹಿತಿ ಸುರೇಶ್ ಬಾಬು, ಶ್ರೀಮಠದ ಸದಸ್ಯರಾದ ಪುರ ಗ್ರಾಮದ ನಂಜುಂಡಪ್ಪ, ಅಂಕದಟ್ಟಿ ನಾರಾಯಣಸ್ವಾಮಿ, ದಾಕ್ಷಾಯಣಮ್ಮ, ಪಿ.ಸಿ ಜಯಕುಮಾರ್, ಬಸವರಾಜ ಹಾಗೂ ಸ್ಥಳೀಯ ಮುಖಂಡರು ಸೇರಿದಂತೆ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

5 hours ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

16 hours ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

21 hours ago

ಜು.25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…

21 hours ago

ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…

1 day ago

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಮುಕ್ತ – ಖಾಸಗಿ ಹೂಡಿಕೆದಾರರಿಗೆ ಸರ್ಕಾರದಿಂದ ಸಂಪೂರ್ಣ ಬೆಂಬಲ- ಸಚಿವ ಕೆ.ಜೆ. ಜಾರ್ಜ್

ಕರ್ನಾಟಕವನ್ನು ದೇಶದ ಹೂಡಿಕೆ ಸ್ನೇಹಿ ಪ್ರವಾಸೋದ್ಯಮ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದ್ದು, ಖಾಸಗಿ ಹೂಡಿಕೆದಾರರಿಗೆ…

1 day ago