ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ ಕೆಲಸ ಮಾಡಬೇಕಿದೆ ಎಂದು ವಿಜಯಪುರದ ಬಸವ ಕಲ್ಯಾಣ ಮಠದ ಶ್ರೀಗಳಾದ ಡಾ. ಮಹದೇವಸ್ವಾಮೀಜಿ ಅವರು ಹೇಳಿದರು.

ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ಮೇಲೂರು ರಸ್ತೆಯಲ್ಲಿರುವ ಶ್ರೀ ಬಸವ ಕಲ್ಯಾಣ ಮಠದಲ್ಲಿ ಕಾರ್ತಿಕ ಮಾಸದ ಕೊನೆಯ ಸೋಮವಾರ ಪ್ರಯುಕ್ತ ಆಯೋಜಿಸಿದ್ದ “ಶಿವಪಂಚಾಕ್ಷರಿ ಮಹಾಮಂತ್ರ ಅಖಂಡ ಭಜನೆಯ ಸಮಾರೋಪ ಹಾಗೂ 38ನೇ ವರ್ಷದ ಕಡ್ಲೆಕಾಯಿ ಪರಿಷೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಧ್ಯಾತ್ಮಿಕ, ಪ್ರವಚನ ಆಲಿಸುವುದರಿಂದ ನಮ್ಮಲ್ಲಿರುವ ನಕಾರಾತ್ಮಕ ಮನೋಭಾವ ತೊಲಗಿಸಿ, ಸಕಾರಾತ್ಮಕ ಮನೋಲ್ಲಾಸ ಸಂಪಾದಿಸಲು ಸಾಧ್ಯವಾಗುತ್ತದೆ ಎಂದು ಶ್ರೀಗಳು ಆಶಿರ್ವಚನ ನೀಡಿದರು.

ಮುಖ್ಯ ಅತಿಥಿಗಳಾದ ದೇವನಹಳ್ಳಿ ನಿವೃತ್ತ ತಹಶೀಲ್ದಾರ್ ಹೆಚ್. ಬಾಲಕೃಷ್ಣ ಅವರು ಮಾತನಾಡಿ, ಸಮಾಜದಲ್ಲಿ ಸಾಮರಸ್ಯ, ಪರಿವರ್ತನೆ ತರುವಲ್ಲಿ ಮಠ-ಮಾನ್ಯಗಳ ಪಾತ್ರ ಅಪಾರವಾದುದ್ದು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದರಿಂದ ಸದ್ವಿಚಾರ ತಿಳಿಯುವ ಜತೆಗೆ ಜೀವನದಲ್ಲಿ ನೆಮ್ಮದಿ ಪಡೆಯಲು ಸಹಕಾರಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಓಂತಾರಾಶ್ರಮದ ಕಾಳಿತನಯ ಉಮಾ ಮಹೇಶ್ವರ ಶ್ರೀಗಳು, ಶ್ರೀಮಠದ ಕಿರಿಯ ಶ್ರೀಗಳಾದ ಸದಾಶಿವ ಸ್ವಾಮಿಜೀಯವರು ದಿವ್ಯಸಾನಿಧ್ಯ ವಹಿಸಿದ್ದರು.

ಇದಕ್ಕೂ ಮುನ್ನ ಹೋಮ ಹವನ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಸಿ, ಶ್ರೀಮಠದ ಸಾವಿರಾರು ಭಕ್ತರಿಗೆ ಅನ್ನ ಪ್ರಸಾದ ಜತೆಗೆ 35 ಕ್ವಿಂಟಲ್ ಕಡ್ಲೆಕಾಯಿ ಪ್ರಸಾದ ವಿತರಣೆ ಮಾಡಲಾಯಿತು.

ಮೂರು ದಿನ ನಿರಂತರ ಜರುಗಿದ ಶಿವಪಂಚಾಕ್ಷರಿ ಮಹಾಮಂತ್ರ ಅಖಂಡ ಭಜನೆ ಸಮಾರಂಭಕ್ಕೆ ತೆರೆ ಎಳೆಯಲಾಯಿತು. ಇದೇ ವೇಳೆ ಶ್ರೀಮಠದಿಂದ 2026 ನೇ ವರ್ಷದ ನೂತನ ದಿನದರ್ಶಿಕೆಯನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ದೊಡ್ಡಹುಲ್ಲೂರಿನ ಸ್ಟಾಂಪ್ ವೆಂಡರ್ ನಾರಾಯಣಸ್ವಾಮಿ, ಕನಕಪುರದ ಎಂ.ಎನ್.ಸಿ ಕಂಪನಿ ಸಾಫ್ಟ್ ವೇರ್ ಇಂಜಿನಿಯರ್ ಜಗದೀಶ್, ಹೊಸಕೋಟೆ ತಾ.ಪಂ ಮಾಜಿ ಅಧ್ಯಕ್ಷ ಟಿ.ಎಸ್ ರಾಜಶೇಖರ್, ವಿಜಯಪುರದ ಸಾಹಿತಿ ಸುರೇಶ್ ಬಾಬು, ಶ್ರೀಮಠದ ಸದಸ್ಯರಾದ ಪುರ ಗ್ರಾಮದ ನಂಜುಂಡಪ್ಪ, ಅಂಕದಟ್ಟಿ ನಾರಾಯಣಸ್ವಾಮಿ, ದಾಕ್ಷಾಯಣಮ್ಮ, ಪಿ.ಸಿ ಜಯಕುಮಾರ್, ಬಸವರಾಜ ಹಾಗೂ ಸ್ಥಳೀಯ ಮುಖಂಡರು ಸೇರಿದಂತೆ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಬಸ್-ನೀರಿನ ಟ್ಯಾಂಕರ್ ಟ್ರ್ಯಾಕ್ಟರ್ ನಡುವೆ ಅಪಘಾತ: ಫುಲ್ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…

3 hours ago

ಶಾಸಕ ಪ್ರದೀಪ್ ಈಶ್ವರ್ ಕಾರಿಗೆ ಮುತ್ತಿಗೆ; ಚಪ್ಪಲಿ ಎಸೆತ, ಉದ್ವಿಗ್ನ ವಾತಾವರಣ

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…

7 hours ago

ಹೆಚ್‌ಡಿಕೆಗೆ ಶಾಸಕ ಪ್ರದೀಪ್ ಈಶ್ವರ್ ಟಾಂಗ್: “32 ಎಕರೆ ಆಸ್ತಿ ದಾಖಲೆ ನನ್ನ ಮುಖದ ಮೇಲೆ ಬಿಸಾಕಿ”

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

8 hours ago

ಕೆಂಪೇಗೌಡರ ಹೆಸರನ್ನು ಶಾಶ್ವತಗೊಳಿಸಲು ಹೊಸ ಯೋಜನೆಗಳು: ಟೌನ್ ಪ್ಲಾನಿಂಗ್, ಕಾಲೇಜು, ಅಭಿವೃದ್ಧಿ ಕೇಂದ್ರ ಸ್ಥಾಪನೆ – ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

10 hours ago

517ನೇ ಕೆಂಪೇಗೌಡ ಜಯಂತಿ: ವಿಮಾನ ನಿಲ್ದಾಣದಲ್ಲಿ ನಾಡಪ್ರಭುವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ

ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

12 hours ago

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

1 day ago