ಜಿಲ್ಲಾ ಬಾಲಕಾರ್ಮಿಕ ಯೋಜನೆ ಮತ್ತು ಮಕ್ಕಳ ಸಹಾಯವಾಣಿ-1098 ಇವರು ಜಂಟಿಯಾಗಿ ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ-1098 ಜಂಟಿಯಾಗಿ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ವಿವಿಧ ಸ್ಥಳಗಳಲ್ಲಿ ಸೋಮವಾರದಂದು ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು ನಡೆಸಿದರು.
ಈ ತಪಾಸಣೆ ವೇಳೆಯಲ್ಲಿ 04 ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಮುಂದಿನ ಕ್ರಮಕ್ಕಾಗಿ ಹಾಜರು ಪಡಿಸಿದರು.
ಅಲ್ಲದೇ ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಳ್ಳದಂತೆ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು, ಇಟ್ಟಿಗೆ ಕಾರ್ಖಾನೆ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ, ಮಾಲೀಕರಿಗೆ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ರೂ. 20,000/- ಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ರೂ. 50,000/- ಸಾವಿರದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಾಗೃತಿ ಮೂಡಿಸಿದರು.
ಇದೇ ವೇಳೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕರಪತ್ರವನ್ನು ಮತ್ತು ಭಿತ್ತಿಪತ್ರಗಳನ್ನು ಅಂಗಡಿಗಳ ಮಾಲೀಕರಿಗೆ ವಿತರಿಸುವ ಮೂಲಕ ಇನ್ನು ಮುಂದೆ ತಮ್ಮ ಸುತ್ತಮುತ್ತಲಿನಲ್ಲಿ ಯಾವುದೇ ಮಕ್ಕಳನ್ನು ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಹಾಗೂ ಅಂಗಡಿಗಳ ಮಾಲೀಕರು ಸಹಕಾರ ನೀಡುವಂತೆ ಅಧಿಕಾರಿಗಳು ಸೂಚಿಸಿದರು.
ಅಲ್ಲದೇ ವಿಜಯಪುರ ಪಟ್ಟಣದ ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಂಳ್ಳದಂತೆ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಮಾಲೀಕರಿಗೆ ಕರಪತ್ರಗಳನ್ನು ಹಂಚಿ ಮಾಲೀಕರಿಗೆ ಹಾಗೂ ಸ್ಥಳಗಳಲ್ಲಿ ಇದ್ದ ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಲಾಯಿತು.
ಈ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಸುಬ್ಬಾರಾವ್ ಎಸ್, ಕಾರ್ಮಿಕ ನಿರೀಕ್ಷಕಿ ಅಂಬಿಕಾ ವೈ, ಶಿಕ್ಷಣ ಇಲಾಖೆಯ ಬಿ ಆರ್ ಸಿ ನಾಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ನರಸಿಂಹ ರಾಜು, ಮಕ್ಕಳ ಸಹಾಯವಾಣಿಯ ಮಲ್ಲಿಕಾರ್ಜುನ ಮತ್ತು ಲಾವಣ್ಯ ಹಾಜರಿದ್ದರು.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…