ವಿಜೃಂಭಣೆಯಿಂದ ಜರುಗಿದ ಸುಮಾರು 600 ವರ್ಷಗಳ ಇತಿಹಾಸವಿರುವ ರಂಗನಾಥಸ್ವಾಮಿ ಕೋಲು ಬೇಟೆ ಜಾತ್ರಾ ಮಹೋತ್ಸವ


ಹುಲಿಕುಂಟೆ (ದೊಡ್ಡಬಳ್ಳಾಪುರ): ತಾಲ್ಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಶ್ರೀವರಪ್ರದ ಬೇಟೆ ರಂಗನಾಥಸ್ವಾಮಿ ಕೋಲು ಬೇಟೆ ಜಾತ್ರಾ ಮಹೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು.

ಹುಲಿಕುಂಟೆ ಗ್ರಾಮದ ಬೇಟೆ ಕೊಡುವ ಕದಿರು ಆಲದ ಮರದ ದಿನ್ನೆಯವರೆಗೆ ಸಾಗಿದ ರಂಗನಾಥಸ್ವಾಮಿ ಉತ್ಸವದಲ್ಲಿ ರಾಜ್ಯದ ವಿವಿಧಡೆಗಳಿಂದ ಆಗಮಿಸಿದ್ದ ಸಹಸ್ರಾರು ಜನ ಭಕ್ತಾದಿಗಳು ಭಾಗವಹಿಸಿದ್ದರು. ಪೇಟಧಾರಿ ಬೇಟೆ ರಂಗನಾಥಸ್ವಾಮಿಯನ್ನು ಹೂವುಗಳಿಂದ ಸಿಂಗರಿಸಲಾಗಿತ್ತು.

ಹುಲಿಕುಂಟೆ, ಮಾವಿನಕುಂಟೆ, ಸೀತಕಲ್ಲು, ಚಿಕ್ಕಬೆಳವಂಗಲ ಮತ್ತಿತರೆ ಗ್ರಾಮಗಳಿಂದ ಕೋಲು, ಕುಡುಗೋಲು, ಭರ್ಜಿಗಳನ್ನು ಹಿಡಿದುಕೊಂಡು ತಂಡೋಪ ತಂಡವಾಗಿ ಆಗಮಿಸಿ ಕೋಲು ಬೇಟೆ ಸಂಪ್ರದಾಯವನ್ನು ಸಾಂಕೇತಿಕವಾಗಿ ಆಚರಿಸಿದರು.

ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಜಾತ್ರೆಯಲ್ಲಿ ಕೋಲುಬೇಟೆ, ವಿವಿಧ ರೀತಿಯ ತಿಂಡಿ ತಿನಿಸುಗಳ ಅಂಗಡಿಗಳು ಗಮನ ಸೆಳೆದವು.

ಸುಮಾರು 600 ವರ್ಷಗಳ ಇತಿಹಾಸವಿರುವ ಚೋಳರ ಕಾಲದ ಇತಿಹಾಸ ಹೊಂದಿರುವ ಹುಲಿಕುಂಟೆ ಕೋಲುಬೇಟೆ ಕಾರಣಕ್ಕೆ ಮಹತ್ವದ್ದೆನಿಸಿದೆ.

ಮಾಗಡಿ ತಾಲ್ಲೂಕಿನ ಜನತೆಯ ಆರಾಧ್ಯ ದೈವವಾದ ಮಾಗಡಿ ರಂಗನಾಥ, ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ ಗ್ರಾಮದ ಸುತ್ತಲಿನ ಜನರು ಪೂಜಿಸುವ ಹಣಬೆ ರಂಗನಾಥ ಮತ್ತು ಹುಲಿಕುಂಟೆ ಸುತ್ತಲಿನ ಜನತೆಯ ಆರಾದ್ಯ ದೈವ ಹುಲಿಕುಂಟೆ ಬೇಟೆ ರಂಗನಾಥ ಈ ಮೂರು ಐತಿಹಾಸಿಕ ವ್ಯಕ್ತಿಗಳ ಶಕ್ತಿ ಸಂಚಯನದ ಸಾಕಾರ ರೂಪವೇ ಹುಲಿಕುಂಟೆ ಬೇಟೆ ರಂಗನಾಥ.

ಮೂರೂ ಜನ ವ್ಯಕ್ತಿಗಳು ಸೇರಿ ತಮ್ಮ ಶಕ್ತಿಯನ್ನು ಕ್ರೋಢೀಕರಿಸಿ ಹುಲಿಕುಂಟೆಯಲ್ಲಿ ‘ಬೇಟೆ ರಂಗನಾಥಸ್ವಾಮಿ’ ಹೆಸರಿನ ಗುಡಿಯೊಂದನ್ನು ಕಟ್ಟಿ ವಿಗ್ರಹವೊಂದನ್ನು ಸ್ಥಾಪಿಸಿ ಯುದ್ಧವೊಂದಕ್ಕೆ ಸಿದ್ಧರಾಗುತ್ತಾರೆ.

ರಂಗನಾಥಸ್ವಾಮಿಯೇ ಬೇಟೆಯ ನಾಯಕ ಎಂದು ಈ ಆಚರಣೆಯನ್ನು ಸಾಂಕೇತಿಕವಾಗಿ ಈಗಲೂ ನಡೆಸುತ್ತ ಬರಲಾಗುತ್ತಿದೆ. ಅಲ್ಲಿಂದ ಸ್ವಲ್ಪ ದೂರದಲ್ಲಿ ರಂಗನಾಥಸ್ವಾಮಿಗೆ ಮೊದಲ ಬಲಿ ಸಿಗುತ್ತದೆ. ಆ ಮೊದಲ ಬಲಿ ಸಿಕ್ಕ ಜಾಗದಲ್ಲಿ ಒಂದು ಮಂಟಪ ಕಟ್ಟಿ ಸ್ವಾಮಿಯನ್ನು ಶಾಂತಗೊಳಿಸಲಾಗುತ್ತದೆ.

ಈಗಲೂ ಅದೇ ಜಾಗದಲ್ಲಿ ಬೇಟೆ ಮುಗಿಸಿಕೊಂಡು ಬಂದ ಬೇಟೆ ರಂಗನಾಥಸ್ವಾಮಿಗೆ ಪೂಜೆ ನಡೆಯುತ್ತದೆ. ಈ ಕುರಿತ ಆಚರಣೆಗೆ ‘ಕೋಲು ಬೇಟೆ’ ಎಂದೇ ಕರೆಯಲಾಗುತ್ತದೆ. ಪ್ರತಿ ವರ್ಷದ ಶೂನ್ಯ ಮಾಸದ ಕಡೆಯ ಗುರುವಾರ ಈ ಆಚರಣೆ ನಡೆಯುತ್ತದೆ. ಬೆಳೆಗಳ ಕೊಯ್ಲು ಮುಗಿದು ದಾನ್ಯ ಮನೆಗೆ ಬರುವ ಕಾಲವಾದ್ದರಿಂದ ದಾನ್ಯಗಳನ್ನು ಹೊಲಗಳಲ್ಲಿಯೇ ಕೂಡಿಡುವ ಪರಿಪಾಟವಿದ್ದುದರಿಂದ ಸುತ್ತಲಿನ ಪ್ರದೇಶದ ಪ್ರಾಣಿಗಳನ್ನು ನಿಯಂತ್ರಿಸುವ ಕಾರಣಕ್ಕೆ ಸುತ್ತಲಿನ ಜನ ಬೇಟೆಯಾಡಿ ಪ್ರಾಣಿಗಳನ್ನು ನಿಯಂತ್ರಿಸುವ ಪದ್ಧತಿ ಬೆಳೆದು ಬಂದಿರಬಹುದು ಎನ್ನಲಾಗಿದೆ.

ಹಳ್ಳಿಗಳ ಜನ ಸುತ್ತಲಿನ ಕಾಡುಗಳನ್ನು ತಿರುಗಿ,ಕೋಲು ಹಿಡಿದುಕೊಂಡು ಈ ಸ್ಥಳಕ್ಕೆ ಬಂದು ಸೇರಿ ಸಾಂಪ್ರದಾಯಿಕ ಕೋಲು ಬೇಟೆ ಆಚರಣೆಯನ್ನು ಮಾಡಲಾಗುತ್ತದೆ.

Ramesh Babu

Journalist

Recent Posts

ಮಳೆ, ಗಾಳಿ ಅವಾಂತರ: ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಕುಂಟನಹಳ್ಳಿ, ಹುಸ್ಕೂರು ದಾರಿ ಬಂದ್

ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…

28 minutes ago

ಆನ್‌ಲೈನ್ ಗೇಮ್ ನಿಷೇಧ: ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಜಾರಿ: ಕಾಯ್ದೆ ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಕಠಿಣ ಶಿಕ್ಷೆ ನಿಗದಿ

ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್‌ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…

2 hours ago

ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…

3 hours ago

ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ  ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…

5 hours ago

ಮಳೆ, ಗಾಳಿ ಅವಾಂತರ: ವಿದ್ಯುತ್ ತಂತಿ ಮೇಲೆ ಬಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಭಾರೀ ಗಾತ್ರದ ಝಿಂಕ್ ಅಲ್ಯೂಮಿನಿಯಮ್ ಶೀಟ್‌: ರಸ್ತೆಗೆ ಅಡ್ಡಲಾಗಿ ಬಿದ್ದ 7 ವಿದ್ಯುತ್ ಕಂಬಗಳು

ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…

5 hours ago

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

17 hours ago