ವಿಜೃಂಭಣೆಯಿಂದ ಜರುಗಿದ ಸುಮಾರು 600 ವರ್ಷಗಳ ಇತಿಹಾಸವಿರುವ ರಂಗನಾಥಸ್ವಾಮಿ ಕೋಲು ಬೇಟೆ ಜಾತ್ರಾ ಮಹೋತ್ಸವ


ಹುಲಿಕುಂಟೆ (ದೊಡ್ಡಬಳ್ಳಾಪುರ): ತಾಲ್ಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಶ್ರೀವರಪ್ರದ ಬೇಟೆ ರಂಗನಾಥಸ್ವಾಮಿ ಕೋಲು ಬೇಟೆ ಜಾತ್ರಾ ಮಹೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು.

ಹುಲಿಕುಂಟೆ ಗ್ರಾಮದ ಬೇಟೆ ಕೊಡುವ ಕದಿರು ಆಲದ ಮರದ ದಿನ್ನೆಯವರೆಗೆ ಸಾಗಿದ ರಂಗನಾಥಸ್ವಾಮಿ ಉತ್ಸವದಲ್ಲಿ ರಾಜ್ಯದ ವಿವಿಧಡೆಗಳಿಂದ ಆಗಮಿಸಿದ್ದ ಸಹಸ್ರಾರು ಜನ ಭಕ್ತಾದಿಗಳು ಭಾಗವಹಿಸಿದ್ದರು. ಪೇಟಧಾರಿ ಬೇಟೆ ರಂಗನಾಥಸ್ವಾಮಿಯನ್ನು ಹೂವುಗಳಿಂದ ಸಿಂಗರಿಸಲಾಗಿತ್ತು.

ಹುಲಿಕುಂಟೆ, ಮಾವಿನಕುಂಟೆ, ಸೀತಕಲ್ಲು, ಚಿಕ್ಕಬೆಳವಂಗಲ ಮತ್ತಿತರೆ ಗ್ರಾಮಗಳಿಂದ ಕೋಲು, ಕುಡುಗೋಲು, ಭರ್ಜಿಗಳನ್ನು ಹಿಡಿದುಕೊಂಡು ತಂಡೋಪ ತಂಡವಾಗಿ ಆಗಮಿಸಿ ಕೋಲು ಬೇಟೆ ಸಂಪ್ರದಾಯವನ್ನು ಸಾಂಕೇತಿಕವಾಗಿ ಆಚರಿಸಿದರು.

ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಜಾತ್ರೆಯಲ್ಲಿ ಕೋಲುಬೇಟೆ, ವಿವಿಧ ರೀತಿಯ ತಿಂಡಿ ತಿನಿಸುಗಳ ಅಂಗಡಿಗಳು ಗಮನ ಸೆಳೆದವು.

ಸುಮಾರು 600 ವರ್ಷಗಳ ಇತಿಹಾಸವಿರುವ ಚೋಳರ ಕಾಲದ ಇತಿಹಾಸ ಹೊಂದಿರುವ ಹುಲಿಕುಂಟೆ ಕೋಲುಬೇಟೆ ಕಾರಣಕ್ಕೆ ಮಹತ್ವದ್ದೆನಿಸಿದೆ.

ಮಾಗಡಿ ತಾಲ್ಲೂಕಿನ ಜನತೆಯ ಆರಾಧ್ಯ ದೈವವಾದ ಮಾಗಡಿ ರಂಗನಾಥ, ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ ಗ್ರಾಮದ ಸುತ್ತಲಿನ ಜನರು ಪೂಜಿಸುವ ಹಣಬೆ ರಂಗನಾಥ ಮತ್ತು ಹುಲಿಕುಂಟೆ ಸುತ್ತಲಿನ ಜನತೆಯ ಆರಾದ್ಯ ದೈವ ಹುಲಿಕುಂಟೆ ಬೇಟೆ ರಂಗನಾಥ ಈ ಮೂರು ಐತಿಹಾಸಿಕ ವ್ಯಕ್ತಿಗಳ ಶಕ್ತಿ ಸಂಚಯನದ ಸಾಕಾರ ರೂಪವೇ ಹುಲಿಕುಂಟೆ ಬೇಟೆ ರಂಗನಾಥ.

ಮೂರೂ ಜನ ವ್ಯಕ್ತಿಗಳು ಸೇರಿ ತಮ್ಮ ಶಕ್ತಿಯನ್ನು ಕ್ರೋಢೀಕರಿಸಿ ಹುಲಿಕುಂಟೆಯಲ್ಲಿ ‘ಬೇಟೆ ರಂಗನಾಥಸ್ವಾಮಿ’ ಹೆಸರಿನ ಗುಡಿಯೊಂದನ್ನು ಕಟ್ಟಿ ವಿಗ್ರಹವೊಂದನ್ನು ಸ್ಥಾಪಿಸಿ ಯುದ್ಧವೊಂದಕ್ಕೆ ಸಿದ್ಧರಾಗುತ್ತಾರೆ.

ರಂಗನಾಥಸ್ವಾಮಿಯೇ ಬೇಟೆಯ ನಾಯಕ ಎಂದು ಈ ಆಚರಣೆಯನ್ನು ಸಾಂಕೇತಿಕವಾಗಿ ಈಗಲೂ ನಡೆಸುತ್ತ ಬರಲಾಗುತ್ತಿದೆ. ಅಲ್ಲಿಂದ ಸ್ವಲ್ಪ ದೂರದಲ್ಲಿ ರಂಗನಾಥಸ್ವಾಮಿಗೆ ಮೊದಲ ಬಲಿ ಸಿಗುತ್ತದೆ. ಆ ಮೊದಲ ಬಲಿ ಸಿಕ್ಕ ಜಾಗದಲ್ಲಿ ಒಂದು ಮಂಟಪ ಕಟ್ಟಿ ಸ್ವಾಮಿಯನ್ನು ಶಾಂತಗೊಳಿಸಲಾಗುತ್ತದೆ.

ಈಗಲೂ ಅದೇ ಜಾಗದಲ್ಲಿ ಬೇಟೆ ಮುಗಿಸಿಕೊಂಡು ಬಂದ ಬೇಟೆ ರಂಗನಾಥಸ್ವಾಮಿಗೆ ಪೂಜೆ ನಡೆಯುತ್ತದೆ. ಈ ಕುರಿತ ಆಚರಣೆಗೆ ‘ಕೋಲು ಬೇಟೆ’ ಎಂದೇ ಕರೆಯಲಾಗುತ್ತದೆ. ಪ್ರತಿ ವರ್ಷದ ಶೂನ್ಯ ಮಾಸದ ಕಡೆಯ ಗುರುವಾರ ಈ ಆಚರಣೆ ನಡೆಯುತ್ತದೆ. ಬೆಳೆಗಳ ಕೊಯ್ಲು ಮುಗಿದು ದಾನ್ಯ ಮನೆಗೆ ಬರುವ ಕಾಲವಾದ್ದರಿಂದ ದಾನ್ಯಗಳನ್ನು ಹೊಲಗಳಲ್ಲಿಯೇ ಕೂಡಿಡುವ ಪರಿಪಾಟವಿದ್ದುದರಿಂದ ಸುತ್ತಲಿನ ಪ್ರದೇಶದ ಪ್ರಾಣಿಗಳನ್ನು ನಿಯಂತ್ರಿಸುವ ಕಾರಣಕ್ಕೆ ಸುತ್ತಲಿನ ಜನ ಬೇಟೆಯಾಡಿ ಪ್ರಾಣಿಗಳನ್ನು ನಿಯಂತ್ರಿಸುವ ಪದ್ಧತಿ ಬೆಳೆದು ಬಂದಿರಬಹುದು ಎನ್ನಲಾಗಿದೆ.

ಹಳ್ಳಿಗಳ ಜನ ಸುತ್ತಲಿನ ಕಾಡುಗಳನ್ನು ತಿರುಗಿ,ಕೋಲು ಹಿಡಿದುಕೊಂಡು ಈ ಸ್ಥಳಕ್ಕೆ ಬಂದು ಸೇರಿ ಸಾಂಪ್ರದಾಯಿಕ ಕೋಲು ಬೇಟೆ ಆಚರಣೆಯನ್ನು ಮಾಡಲಾಗುತ್ತದೆ.

Ramesh Babu

Journalist

Recent Posts

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

5 minutes ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

10 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

13 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

18 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

18 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

19 hours ago