ವಿಜೃಂಭಣೆಯಿಂದ ಜರುಗಿದ ಸುಮಾರು 600 ವರ್ಷಗಳ ಇತಿಹಾಸವಿರುವ ರಂಗನಾಥಸ್ವಾಮಿ ಕೋಲು ಬೇಟೆ ಜಾತ್ರಾ ಮಹೋತ್ಸವ


ಹುಲಿಕುಂಟೆ (ದೊಡ್ಡಬಳ್ಳಾಪುರ): ತಾಲ್ಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಶ್ರೀವರಪ್ರದ ಬೇಟೆ ರಂಗನಾಥಸ್ವಾಮಿ ಕೋಲು ಬೇಟೆ ಜಾತ್ರಾ ಮಹೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು.

ಹುಲಿಕುಂಟೆ ಗ್ರಾಮದ ಬೇಟೆ ಕೊಡುವ ಕದಿರು ಆಲದ ಮರದ ದಿನ್ನೆಯವರೆಗೆ ಸಾಗಿದ ರಂಗನಾಥಸ್ವಾಮಿ ಉತ್ಸವದಲ್ಲಿ ರಾಜ್ಯದ ವಿವಿಧಡೆಗಳಿಂದ ಆಗಮಿಸಿದ್ದ ಸಹಸ್ರಾರು ಜನ ಭಕ್ತಾದಿಗಳು ಭಾಗವಹಿಸಿದ್ದರು. ಪೇಟಧಾರಿ ಬೇಟೆ ರಂಗನಾಥಸ್ವಾಮಿಯನ್ನು ಹೂವುಗಳಿಂದ ಸಿಂಗರಿಸಲಾಗಿತ್ತು.

ಹುಲಿಕುಂಟೆ, ಮಾವಿನಕುಂಟೆ, ಸೀತಕಲ್ಲು, ಚಿಕ್ಕಬೆಳವಂಗಲ ಮತ್ತಿತರೆ ಗ್ರಾಮಗಳಿಂದ ಕೋಲು, ಕುಡುಗೋಲು, ಭರ್ಜಿಗಳನ್ನು ಹಿಡಿದುಕೊಂಡು ತಂಡೋಪ ತಂಡವಾಗಿ ಆಗಮಿಸಿ ಕೋಲು ಬೇಟೆ ಸಂಪ್ರದಾಯವನ್ನು ಸಾಂಕೇತಿಕವಾಗಿ ಆಚರಿಸಿದರು.

ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಜಾತ್ರೆಯಲ್ಲಿ ಕೋಲುಬೇಟೆ, ವಿವಿಧ ರೀತಿಯ ತಿಂಡಿ ತಿನಿಸುಗಳ ಅಂಗಡಿಗಳು ಗಮನ ಸೆಳೆದವು.

ಸುಮಾರು 600 ವರ್ಷಗಳ ಇತಿಹಾಸವಿರುವ ಚೋಳರ ಕಾಲದ ಇತಿಹಾಸ ಹೊಂದಿರುವ ಹುಲಿಕುಂಟೆ ಕೋಲುಬೇಟೆ ಕಾರಣಕ್ಕೆ ಮಹತ್ವದ್ದೆನಿಸಿದೆ.

ಮಾಗಡಿ ತಾಲ್ಲೂಕಿನ ಜನತೆಯ ಆರಾಧ್ಯ ದೈವವಾದ ಮಾಗಡಿ ರಂಗನಾಥ, ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ ಗ್ರಾಮದ ಸುತ್ತಲಿನ ಜನರು ಪೂಜಿಸುವ ಹಣಬೆ ರಂಗನಾಥ ಮತ್ತು ಹುಲಿಕುಂಟೆ ಸುತ್ತಲಿನ ಜನತೆಯ ಆರಾದ್ಯ ದೈವ ಹುಲಿಕುಂಟೆ ಬೇಟೆ ರಂಗನಾಥ ಈ ಮೂರು ಐತಿಹಾಸಿಕ ವ್ಯಕ್ತಿಗಳ ಶಕ್ತಿ ಸಂಚಯನದ ಸಾಕಾರ ರೂಪವೇ ಹುಲಿಕುಂಟೆ ಬೇಟೆ ರಂಗನಾಥ.

ಮೂರೂ ಜನ ವ್ಯಕ್ತಿಗಳು ಸೇರಿ ತಮ್ಮ ಶಕ್ತಿಯನ್ನು ಕ್ರೋಢೀಕರಿಸಿ ಹುಲಿಕುಂಟೆಯಲ್ಲಿ ‘ಬೇಟೆ ರಂಗನಾಥಸ್ವಾಮಿ’ ಹೆಸರಿನ ಗುಡಿಯೊಂದನ್ನು ಕಟ್ಟಿ ವಿಗ್ರಹವೊಂದನ್ನು ಸ್ಥಾಪಿಸಿ ಯುದ್ಧವೊಂದಕ್ಕೆ ಸಿದ್ಧರಾಗುತ್ತಾರೆ.

ರಂಗನಾಥಸ್ವಾಮಿಯೇ ಬೇಟೆಯ ನಾಯಕ ಎಂದು ಈ ಆಚರಣೆಯನ್ನು ಸಾಂಕೇತಿಕವಾಗಿ ಈಗಲೂ ನಡೆಸುತ್ತ ಬರಲಾಗುತ್ತಿದೆ. ಅಲ್ಲಿಂದ ಸ್ವಲ್ಪ ದೂರದಲ್ಲಿ ರಂಗನಾಥಸ್ವಾಮಿಗೆ ಮೊದಲ ಬಲಿ ಸಿಗುತ್ತದೆ. ಆ ಮೊದಲ ಬಲಿ ಸಿಕ್ಕ ಜಾಗದಲ್ಲಿ ಒಂದು ಮಂಟಪ ಕಟ್ಟಿ ಸ್ವಾಮಿಯನ್ನು ಶಾಂತಗೊಳಿಸಲಾಗುತ್ತದೆ.

ಈಗಲೂ ಅದೇ ಜಾಗದಲ್ಲಿ ಬೇಟೆ ಮುಗಿಸಿಕೊಂಡು ಬಂದ ಬೇಟೆ ರಂಗನಾಥಸ್ವಾಮಿಗೆ ಪೂಜೆ ನಡೆಯುತ್ತದೆ. ಈ ಕುರಿತ ಆಚರಣೆಗೆ ‘ಕೋಲು ಬೇಟೆ’ ಎಂದೇ ಕರೆಯಲಾಗುತ್ತದೆ. ಪ್ರತಿ ವರ್ಷದ ಶೂನ್ಯ ಮಾಸದ ಕಡೆಯ ಗುರುವಾರ ಈ ಆಚರಣೆ ನಡೆಯುತ್ತದೆ. ಬೆಳೆಗಳ ಕೊಯ್ಲು ಮುಗಿದು ದಾನ್ಯ ಮನೆಗೆ ಬರುವ ಕಾಲವಾದ್ದರಿಂದ ದಾನ್ಯಗಳನ್ನು ಹೊಲಗಳಲ್ಲಿಯೇ ಕೂಡಿಡುವ ಪರಿಪಾಟವಿದ್ದುದರಿಂದ ಸುತ್ತಲಿನ ಪ್ರದೇಶದ ಪ್ರಾಣಿಗಳನ್ನು ನಿಯಂತ್ರಿಸುವ ಕಾರಣಕ್ಕೆ ಸುತ್ತಲಿನ ಜನ ಬೇಟೆಯಾಡಿ ಪ್ರಾಣಿಗಳನ್ನು ನಿಯಂತ್ರಿಸುವ ಪದ್ಧತಿ ಬೆಳೆದು ಬಂದಿರಬಹುದು ಎನ್ನಲಾಗಿದೆ.

ಹಳ್ಳಿಗಳ ಜನ ಸುತ್ತಲಿನ ಕಾಡುಗಳನ್ನು ತಿರುಗಿ,ಕೋಲು ಹಿಡಿದುಕೊಂಡು ಈ ಸ್ಥಳಕ್ಕೆ ಬಂದು ಸೇರಿ ಸಾಂಪ್ರದಾಯಿಕ ಕೋಲು ಬೇಟೆ ಆಚರಣೆಯನ್ನು ಮಾಡಲಾಗುತ್ತದೆ.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

6 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

7 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

7 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

8 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

9 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

13 hours ago