ವಿಜೃಂಭಣೆಯಿಂದ ಜರುಗಿದ ಸುಮಾರು 600 ವರ್ಷಗಳ ಇತಿಹಾಸವಿರುವ ರಂಗನಾಥಸ್ವಾಮಿ ಕೋಲು ಬೇಟೆ ಜಾತ್ರಾ ಮಹೋತ್ಸವ


ಹುಲಿಕುಂಟೆ (ದೊಡ್ಡಬಳ್ಳಾಪುರ): ತಾಲ್ಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಶ್ರೀವರಪ್ರದ ಬೇಟೆ ರಂಗನಾಥಸ್ವಾಮಿ ಕೋಲು ಬೇಟೆ ಜಾತ್ರಾ ಮಹೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು.

ಹುಲಿಕುಂಟೆ ಗ್ರಾಮದ ಬೇಟೆ ಕೊಡುವ ಕದಿರು ಆಲದ ಮರದ ದಿನ್ನೆಯವರೆಗೆ ಸಾಗಿದ ರಂಗನಾಥಸ್ವಾಮಿ ಉತ್ಸವದಲ್ಲಿ ರಾಜ್ಯದ ವಿವಿಧಡೆಗಳಿಂದ ಆಗಮಿಸಿದ್ದ ಸಹಸ್ರಾರು ಜನ ಭಕ್ತಾದಿಗಳು ಭಾಗವಹಿಸಿದ್ದರು. ಪೇಟಧಾರಿ ಬೇಟೆ ರಂಗನಾಥಸ್ವಾಮಿಯನ್ನು ಹೂವುಗಳಿಂದ ಸಿಂಗರಿಸಲಾಗಿತ್ತು.

ಹುಲಿಕುಂಟೆ, ಮಾವಿನಕುಂಟೆ, ಸೀತಕಲ್ಲು, ಚಿಕ್ಕಬೆಳವಂಗಲ ಮತ್ತಿತರೆ ಗ್ರಾಮಗಳಿಂದ ಕೋಲು, ಕುಡುಗೋಲು, ಭರ್ಜಿಗಳನ್ನು ಹಿಡಿದುಕೊಂಡು ತಂಡೋಪ ತಂಡವಾಗಿ ಆಗಮಿಸಿ ಕೋಲು ಬೇಟೆ ಸಂಪ್ರದಾಯವನ್ನು ಸಾಂಕೇತಿಕವಾಗಿ ಆಚರಿಸಿದರು.

ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಜಾತ್ರೆಯಲ್ಲಿ ಕೋಲುಬೇಟೆ, ವಿವಿಧ ರೀತಿಯ ತಿಂಡಿ ತಿನಿಸುಗಳ ಅಂಗಡಿಗಳು ಗಮನ ಸೆಳೆದವು.

ಸುಮಾರು 600 ವರ್ಷಗಳ ಇತಿಹಾಸವಿರುವ ಚೋಳರ ಕಾಲದ ಇತಿಹಾಸ ಹೊಂದಿರುವ ಹುಲಿಕುಂಟೆ ಕೋಲುಬೇಟೆ ಕಾರಣಕ್ಕೆ ಮಹತ್ವದ್ದೆನಿಸಿದೆ.

ಮಾಗಡಿ ತಾಲ್ಲೂಕಿನ ಜನತೆಯ ಆರಾಧ್ಯ ದೈವವಾದ ಮಾಗಡಿ ರಂಗನಾಥ, ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ ಗ್ರಾಮದ ಸುತ್ತಲಿನ ಜನರು ಪೂಜಿಸುವ ಹಣಬೆ ರಂಗನಾಥ ಮತ್ತು ಹುಲಿಕುಂಟೆ ಸುತ್ತಲಿನ ಜನತೆಯ ಆರಾದ್ಯ ದೈವ ಹುಲಿಕುಂಟೆ ಬೇಟೆ ರಂಗನಾಥ ಈ ಮೂರು ಐತಿಹಾಸಿಕ ವ್ಯಕ್ತಿಗಳ ಶಕ್ತಿ ಸಂಚಯನದ ಸಾಕಾರ ರೂಪವೇ ಹುಲಿಕುಂಟೆ ಬೇಟೆ ರಂಗನಾಥ.

ಮೂರೂ ಜನ ವ್ಯಕ್ತಿಗಳು ಸೇರಿ ತಮ್ಮ ಶಕ್ತಿಯನ್ನು ಕ್ರೋಢೀಕರಿಸಿ ಹುಲಿಕುಂಟೆಯಲ್ಲಿ ‘ಬೇಟೆ ರಂಗನಾಥಸ್ವಾಮಿ’ ಹೆಸರಿನ ಗುಡಿಯೊಂದನ್ನು ಕಟ್ಟಿ ವಿಗ್ರಹವೊಂದನ್ನು ಸ್ಥಾಪಿಸಿ ಯುದ್ಧವೊಂದಕ್ಕೆ ಸಿದ್ಧರಾಗುತ್ತಾರೆ.

ರಂಗನಾಥಸ್ವಾಮಿಯೇ ಬೇಟೆಯ ನಾಯಕ ಎಂದು ಈ ಆಚರಣೆಯನ್ನು ಸಾಂಕೇತಿಕವಾಗಿ ಈಗಲೂ ನಡೆಸುತ್ತ ಬರಲಾಗುತ್ತಿದೆ. ಅಲ್ಲಿಂದ ಸ್ವಲ್ಪ ದೂರದಲ್ಲಿ ರಂಗನಾಥಸ್ವಾಮಿಗೆ ಮೊದಲ ಬಲಿ ಸಿಗುತ್ತದೆ. ಆ ಮೊದಲ ಬಲಿ ಸಿಕ್ಕ ಜಾಗದಲ್ಲಿ ಒಂದು ಮಂಟಪ ಕಟ್ಟಿ ಸ್ವಾಮಿಯನ್ನು ಶಾಂತಗೊಳಿಸಲಾಗುತ್ತದೆ.

ಈಗಲೂ ಅದೇ ಜಾಗದಲ್ಲಿ ಬೇಟೆ ಮುಗಿಸಿಕೊಂಡು ಬಂದ ಬೇಟೆ ರಂಗನಾಥಸ್ವಾಮಿಗೆ ಪೂಜೆ ನಡೆಯುತ್ತದೆ. ಈ ಕುರಿತ ಆಚರಣೆಗೆ ‘ಕೋಲು ಬೇಟೆ’ ಎಂದೇ ಕರೆಯಲಾಗುತ್ತದೆ. ಪ್ರತಿ ವರ್ಷದ ಶೂನ್ಯ ಮಾಸದ ಕಡೆಯ ಗುರುವಾರ ಈ ಆಚರಣೆ ನಡೆಯುತ್ತದೆ. ಬೆಳೆಗಳ ಕೊಯ್ಲು ಮುಗಿದು ದಾನ್ಯ ಮನೆಗೆ ಬರುವ ಕಾಲವಾದ್ದರಿಂದ ದಾನ್ಯಗಳನ್ನು ಹೊಲಗಳಲ್ಲಿಯೇ ಕೂಡಿಡುವ ಪರಿಪಾಟವಿದ್ದುದರಿಂದ ಸುತ್ತಲಿನ ಪ್ರದೇಶದ ಪ್ರಾಣಿಗಳನ್ನು ನಿಯಂತ್ರಿಸುವ ಕಾರಣಕ್ಕೆ ಸುತ್ತಲಿನ ಜನ ಬೇಟೆಯಾಡಿ ಪ್ರಾಣಿಗಳನ್ನು ನಿಯಂತ್ರಿಸುವ ಪದ್ಧತಿ ಬೆಳೆದು ಬಂದಿರಬಹುದು ಎನ್ನಲಾಗಿದೆ.

ಹಳ್ಳಿಗಳ ಜನ ಸುತ್ತಲಿನ ಕಾಡುಗಳನ್ನು ತಿರುಗಿ,ಕೋಲು ಹಿಡಿದುಕೊಂಡು ಈ ಸ್ಥಳಕ್ಕೆ ಬಂದು ಸೇರಿ ಸಾಂಪ್ರದಾಯಿಕ ಕೋಲು ಬೇಟೆ ಆಚರಣೆಯನ್ನು ಮಾಡಲಾಗುತ್ತದೆ.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

13 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

15 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

15 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

15 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

17 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

21 hours ago