ವಿಜೃಂಭಣೆಯಿಂದ ಜರುಗಿದ ಸುಮಾರು 600 ವರ್ಷಗಳ ಇತಿಹಾಸವಿರುವ ರಂಗನಾಥಸ್ವಾಮಿ ಕೋಲು ಬೇಟೆ ಜಾತ್ರಾ ಮಹೋತ್ಸವ


ಹುಲಿಕುಂಟೆ (ದೊಡ್ಡಬಳ್ಳಾಪುರ): ತಾಲ್ಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಶ್ರೀವರಪ್ರದ ಬೇಟೆ ರಂಗನಾಥಸ್ವಾಮಿ ಕೋಲು ಬೇಟೆ ಜಾತ್ರಾ ಮಹೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು.

ಹುಲಿಕುಂಟೆ ಗ್ರಾಮದ ಬೇಟೆ ಕೊಡುವ ಕದಿರು ಆಲದ ಮರದ ದಿನ್ನೆಯವರೆಗೆ ಸಾಗಿದ ರಂಗನಾಥಸ್ವಾಮಿ ಉತ್ಸವದಲ್ಲಿ ರಾಜ್ಯದ ವಿವಿಧಡೆಗಳಿಂದ ಆಗಮಿಸಿದ್ದ ಸಹಸ್ರಾರು ಜನ ಭಕ್ತಾದಿಗಳು ಭಾಗವಹಿಸಿದ್ದರು. ಪೇಟಧಾರಿ ಬೇಟೆ ರಂಗನಾಥಸ್ವಾಮಿಯನ್ನು ಹೂವುಗಳಿಂದ ಸಿಂಗರಿಸಲಾಗಿತ್ತು.

ಹುಲಿಕುಂಟೆ, ಮಾವಿನಕುಂಟೆ, ಸೀತಕಲ್ಲು, ಚಿಕ್ಕಬೆಳವಂಗಲ ಮತ್ತಿತರೆ ಗ್ರಾಮಗಳಿಂದ ಕೋಲು, ಕುಡುಗೋಲು, ಭರ್ಜಿಗಳನ್ನು ಹಿಡಿದುಕೊಂಡು ತಂಡೋಪ ತಂಡವಾಗಿ ಆಗಮಿಸಿ ಕೋಲು ಬೇಟೆ ಸಂಪ್ರದಾಯವನ್ನು ಸಾಂಕೇತಿಕವಾಗಿ ಆಚರಿಸಿದರು.

ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಜಾತ್ರೆಯಲ್ಲಿ ಕೋಲುಬೇಟೆ, ವಿವಿಧ ರೀತಿಯ ತಿಂಡಿ ತಿನಿಸುಗಳ ಅಂಗಡಿಗಳು ಗಮನ ಸೆಳೆದವು.

ಸುಮಾರು 600 ವರ್ಷಗಳ ಇತಿಹಾಸವಿರುವ ಚೋಳರ ಕಾಲದ ಇತಿಹಾಸ ಹೊಂದಿರುವ ಹುಲಿಕುಂಟೆ ಕೋಲುಬೇಟೆ ಕಾರಣಕ್ಕೆ ಮಹತ್ವದ್ದೆನಿಸಿದೆ.

ಮಾಗಡಿ ತಾಲ್ಲೂಕಿನ ಜನತೆಯ ಆರಾಧ್ಯ ದೈವವಾದ ಮಾಗಡಿ ರಂಗನಾಥ, ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ ಗ್ರಾಮದ ಸುತ್ತಲಿನ ಜನರು ಪೂಜಿಸುವ ಹಣಬೆ ರಂಗನಾಥ ಮತ್ತು ಹುಲಿಕುಂಟೆ ಸುತ್ತಲಿನ ಜನತೆಯ ಆರಾದ್ಯ ದೈವ ಹುಲಿಕುಂಟೆ ಬೇಟೆ ರಂಗನಾಥ ಈ ಮೂರು ಐತಿಹಾಸಿಕ ವ್ಯಕ್ತಿಗಳ ಶಕ್ತಿ ಸಂಚಯನದ ಸಾಕಾರ ರೂಪವೇ ಹುಲಿಕುಂಟೆ ಬೇಟೆ ರಂಗನಾಥ.

ಮೂರೂ ಜನ ವ್ಯಕ್ತಿಗಳು ಸೇರಿ ತಮ್ಮ ಶಕ್ತಿಯನ್ನು ಕ್ರೋಢೀಕರಿಸಿ ಹುಲಿಕುಂಟೆಯಲ್ಲಿ ‘ಬೇಟೆ ರಂಗನಾಥಸ್ವಾಮಿ’ ಹೆಸರಿನ ಗುಡಿಯೊಂದನ್ನು ಕಟ್ಟಿ ವಿಗ್ರಹವೊಂದನ್ನು ಸ್ಥಾಪಿಸಿ ಯುದ್ಧವೊಂದಕ್ಕೆ ಸಿದ್ಧರಾಗುತ್ತಾರೆ.

ರಂಗನಾಥಸ್ವಾಮಿಯೇ ಬೇಟೆಯ ನಾಯಕ ಎಂದು ಈ ಆಚರಣೆಯನ್ನು ಸಾಂಕೇತಿಕವಾಗಿ ಈಗಲೂ ನಡೆಸುತ್ತ ಬರಲಾಗುತ್ತಿದೆ. ಅಲ್ಲಿಂದ ಸ್ವಲ್ಪ ದೂರದಲ್ಲಿ ರಂಗನಾಥಸ್ವಾಮಿಗೆ ಮೊದಲ ಬಲಿ ಸಿಗುತ್ತದೆ. ಆ ಮೊದಲ ಬಲಿ ಸಿಕ್ಕ ಜಾಗದಲ್ಲಿ ಒಂದು ಮಂಟಪ ಕಟ್ಟಿ ಸ್ವಾಮಿಯನ್ನು ಶಾಂತಗೊಳಿಸಲಾಗುತ್ತದೆ.

ಈಗಲೂ ಅದೇ ಜಾಗದಲ್ಲಿ ಬೇಟೆ ಮುಗಿಸಿಕೊಂಡು ಬಂದ ಬೇಟೆ ರಂಗನಾಥಸ್ವಾಮಿಗೆ ಪೂಜೆ ನಡೆಯುತ್ತದೆ. ಈ ಕುರಿತ ಆಚರಣೆಗೆ ‘ಕೋಲು ಬೇಟೆ’ ಎಂದೇ ಕರೆಯಲಾಗುತ್ತದೆ. ಪ್ರತಿ ವರ್ಷದ ಶೂನ್ಯ ಮಾಸದ ಕಡೆಯ ಗುರುವಾರ ಈ ಆಚರಣೆ ನಡೆಯುತ್ತದೆ. ಬೆಳೆಗಳ ಕೊಯ್ಲು ಮುಗಿದು ದಾನ್ಯ ಮನೆಗೆ ಬರುವ ಕಾಲವಾದ್ದರಿಂದ ದಾನ್ಯಗಳನ್ನು ಹೊಲಗಳಲ್ಲಿಯೇ ಕೂಡಿಡುವ ಪರಿಪಾಟವಿದ್ದುದರಿಂದ ಸುತ್ತಲಿನ ಪ್ರದೇಶದ ಪ್ರಾಣಿಗಳನ್ನು ನಿಯಂತ್ರಿಸುವ ಕಾರಣಕ್ಕೆ ಸುತ್ತಲಿನ ಜನ ಬೇಟೆಯಾಡಿ ಪ್ರಾಣಿಗಳನ್ನು ನಿಯಂತ್ರಿಸುವ ಪದ್ಧತಿ ಬೆಳೆದು ಬಂದಿರಬಹುದು ಎನ್ನಲಾಗಿದೆ.

ಹಳ್ಳಿಗಳ ಜನ ಸುತ್ತಲಿನ ಕಾಡುಗಳನ್ನು ತಿರುಗಿ,ಕೋಲು ಹಿಡಿದುಕೊಂಡು ಈ ಸ್ಥಳಕ್ಕೆ ಬಂದು ಸೇರಿ ಸಾಂಪ್ರದಾಯಿಕ ಕೋಲು ಬೇಟೆ ಆಚರಣೆಯನ್ನು ಮಾಡಲಾಗುತ್ತದೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

16 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago