ವಿಜೃಂಭಣೆಯಿಂದ ಜರುಗಿದ ಸುಮಾರು 600 ವರ್ಷಗಳ ಇತಿಹಾಸವಿರುವ ರಂಗನಾಥಸ್ವಾಮಿ ಕೋಲು ಬೇಟೆ ಜಾತ್ರಾ ಮಹೋತ್ಸವ


ಹುಲಿಕುಂಟೆ (ದೊಡ್ಡಬಳ್ಳಾಪುರ): ತಾಲ್ಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಶ್ರೀವರಪ್ರದ ಬೇಟೆ ರಂಗನಾಥಸ್ವಾಮಿ ಕೋಲು ಬೇಟೆ ಜಾತ್ರಾ ಮಹೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು.

ಹುಲಿಕುಂಟೆ ಗ್ರಾಮದ ಬೇಟೆ ಕೊಡುವ ಕದಿರು ಆಲದ ಮರದ ದಿನ್ನೆಯವರೆಗೆ ಸಾಗಿದ ರಂಗನಾಥಸ್ವಾಮಿ ಉತ್ಸವದಲ್ಲಿ ರಾಜ್ಯದ ವಿವಿಧಡೆಗಳಿಂದ ಆಗಮಿಸಿದ್ದ ಸಹಸ್ರಾರು ಜನ ಭಕ್ತಾದಿಗಳು ಭಾಗವಹಿಸಿದ್ದರು. ಪೇಟಧಾರಿ ಬೇಟೆ ರಂಗನಾಥಸ್ವಾಮಿಯನ್ನು ಹೂವುಗಳಿಂದ ಸಿಂಗರಿಸಲಾಗಿತ್ತು.

ಹುಲಿಕುಂಟೆ, ಮಾವಿನಕುಂಟೆ, ಸೀತಕಲ್ಲು, ಚಿಕ್ಕಬೆಳವಂಗಲ ಮತ್ತಿತರೆ ಗ್ರಾಮಗಳಿಂದ ಕೋಲು, ಕುಡುಗೋಲು, ಭರ್ಜಿಗಳನ್ನು ಹಿಡಿದುಕೊಂಡು ತಂಡೋಪ ತಂಡವಾಗಿ ಆಗಮಿಸಿ ಕೋಲು ಬೇಟೆ ಸಂಪ್ರದಾಯವನ್ನು ಸಾಂಕೇತಿಕವಾಗಿ ಆಚರಿಸಿದರು.

ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಜಾತ್ರೆಯಲ್ಲಿ ಕೋಲುಬೇಟೆ, ವಿವಿಧ ರೀತಿಯ ತಿಂಡಿ ತಿನಿಸುಗಳ ಅಂಗಡಿಗಳು ಗಮನ ಸೆಳೆದವು.

ಸುಮಾರು 600 ವರ್ಷಗಳ ಇತಿಹಾಸವಿರುವ ಚೋಳರ ಕಾಲದ ಇತಿಹಾಸ ಹೊಂದಿರುವ ಹುಲಿಕುಂಟೆ ಕೋಲುಬೇಟೆ ಕಾರಣಕ್ಕೆ ಮಹತ್ವದ್ದೆನಿಸಿದೆ.

ಮಾಗಡಿ ತಾಲ್ಲೂಕಿನ ಜನತೆಯ ಆರಾಧ್ಯ ದೈವವಾದ ಮಾಗಡಿ ರಂಗನಾಥ, ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ ಗ್ರಾಮದ ಸುತ್ತಲಿನ ಜನರು ಪೂಜಿಸುವ ಹಣಬೆ ರಂಗನಾಥ ಮತ್ತು ಹುಲಿಕುಂಟೆ ಸುತ್ತಲಿನ ಜನತೆಯ ಆರಾದ್ಯ ದೈವ ಹುಲಿಕುಂಟೆ ಬೇಟೆ ರಂಗನಾಥ ಈ ಮೂರು ಐತಿಹಾಸಿಕ ವ್ಯಕ್ತಿಗಳ ಶಕ್ತಿ ಸಂಚಯನದ ಸಾಕಾರ ರೂಪವೇ ಹುಲಿಕುಂಟೆ ಬೇಟೆ ರಂಗನಾಥ.

ಮೂರೂ ಜನ ವ್ಯಕ್ತಿಗಳು ಸೇರಿ ತಮ್ಮ ಶಕ್ತಿಯನ್ನು ಕ್ರೋಢೀಕರಿಸಿ ಹುಲಿಕುಂಟೆಯಲ್ಲಿ ‘ಬೇಟೆ ರಂಗನಾಥಸ್ವಾಮಿ’ ಹೆಸರಿನ ಗುಡಿಯೊಂದನ್ನು ಕಟ್ಟಿ ವಿಗ್ರಹವೊಂದನ್ನು ಸ್ಥಾಪಿಸಿ ಯುದ್ಧವೊಂದಕ್ಕೆ ಸಿದ್ಧರಾಗುತ್ತಾರೆ.

ರಂಗನಾಥಸ್ವಾಮಿಯೇ ಬೇಟೆಯ ನಾಯಕ ಎಂದು ಈ ಆಚರಣೆಯನ್ನು ಸಾಂಕೇತಿಕವಾಗಿ ಈಗಲೂ ನಡೆಸುತ್ತ ಬರಲಾಗುತ್ತಿದೆ. ಅಲ್ಲಿಂದ ಸ್ವಲ್ಪ ದೂರದಲ್ಲಿ ರಂಗನಾಥಸ್ವಾಮಿಗೆ ಮೊದಲ ಬಲಿ ಸಿಗುತ್ತದೆ. ಆ ಮೊದಲ ಬಲಿ ಸಿಕ್ಕ ಜಾಗದಲ್ಲಿ ಒಂದು ಮಂಟಪ ಕಟ್ಟಿ ಸ್ವಾಮಿಯನ್ನು ಶಾಂತಗೊಳಿಸಲಾಗುತ್ತದೆ.

ಈಗಲೂ ಅದೇ ಜಾಗದಲ್ಲಿ ಬೇಟೆ ಮುಗಿಸಿಕೊಂಡು ಬಂದ ಬೇಟೆ ರಂಗನಾಥಸ್ವಾಮಿಗೆ ಪೂಜೆ ನಡೆಯುತ್ತದೆ. ಈ ಕುರಿತ ಆಚರಣೆಗೆ ‘ಕೋಲು ಬೇಟೆ’ ಎಂದೇ ಕರೆಯಲಾಗುತ್ತದೆ. ಪ್ರತಿ ವರ್ಷದ ಶೂನ್ಯ ಮಾಸದ ಕಡೆಯ ಗುರುವಾರ ಈ ಆಚರಣೆ ನಡೆಯುತ್ತದೆ. ಬೆಳೆಗಳ ಕೊಯ್ಲು ಮುಗಿದು ದಾನ್ಯ ಮನೆಗೆ ಬರುವ ಕಾಲವಾದ್ದರಿಂದ ದಾನ್ಯಗಳನ್ನು ಹೊಲಗಳಲ್ಲಿಯೇ ಕೂಡಿಡುವ ಪರಿಪಾಟವಿದ್ದುದರಿಂದ ಸುತ್ತಲಿನ ಪ್ರದೇಶದ ಪ್ರಾಣಿಗಳನ್ನು ನಿಯಂತ್ರಿಸುವ ಕಾರಣಕ್ಕೆ ಸುತ್ತಲಿನ ಜನ ಬೇಟೆಯಾಡಿ ಪ್ರಾಣಿಗಳನ್ನು ನಿಯಂತ್ರಿಸುವ ಪದ್ಧತಿ ಬೆಳೆದು ಬಂದಿರಬಹುದು ಎನ್ನಲಾಗಿದೆ.

ಹಳ್ಳಿಗಳ ಜನ ಸುತ್ತಲಿನ ಕಾಡುಗಳನ್ನು ತಿರುಗಿ,ಕೋಲು ಹಿಡಿದುಕೊಂಡು ಈ ಸ್ಥಳಕ್ಕೆ ಬಂದು ಸೇರಿ ಸಾಂಪ್ರದಾಯಿಕ ಕೋಲು ಬೇಟೆ ಆಚರಣೆಯನ್ನು ಮಾಡಲಾಗುತ್ತದೆ.

Ramesh Babu

Journalist

Recent Posts

ಅತಿವೇಗ: ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಕಾರು ಡಿಕ್ಕಿ – ಕಾರು ನುಜ್ಜುಗೊಜ್ಜು, ಇಬ್ಬರು ಯುವಕರು ಪವಾಡ ರೀತಿಯಲ್ಲಿ ಪಾರು; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ: ಅತಿವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು…

1 hour ago

ಘಾಟಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಎಂಎಲ್‌ಸಿ ಟಿ.ಎ. ಶರವಣ, ಅವಧೂತ ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಎಲ್‌ಸಿ ಟಿ.ಎ. ಶರವಣ ಹಾಗೂ ಅವಧೂತ ವಿನಯ್ ಗುರೂಜಿ ಭೇಟಿ ನೀಡಿ…

8 hours ago

‘ಡೇ ಕೇರ್’ ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ……?

ಡೇ ಕೇರ್........, ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ...... ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ…

11 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…

24 hours ago

ಪತ್ನಿಯ ಶೀಲ ಶಂಕಿಸಿ ಗೃಹಿಣಿಯ ಕೊಲೆ: ಪತಿ ಬಂಧನಕ್ಕೆ ಬಲೆ

ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…

24 hours ago

ಕೌಟುಂಬಿಕ ಕಲಹ ಡಬಲ್ ಮರ್ಡರ್: ಅಕ್ಕ-ತಂಗಿಯ ಹತ್ಯೆ, ಆರೋಪಿ ಪೊಲೀಸರಿಗೆ ಶರಣು

ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…

1 day ago