ದೊಡ್ಡಬಳ್ಳಾಪುರ: ತಾಲ್ಲೂಕಿನ ಕೂಗೇನಹಳ್ಳಿ ಗ್ರಾಮದಲ್ಲಿ ಬೈರವೇಶ್ವರಸ್ವಾಮಿ ಹಾಗೂ ಲಕುಮಿದೇವಿ ವಾರ್ಷಿಕ ಮಹೋತ್ಸವ ಅದ್ದೂರಿಯಾಗಿ ನಡೆಯಿತು.
ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮದಿಂದ ಪ್ರಾರಂಭವಾದ ವಾರ್ಷಿಕೋತ್ಸವ ಕಾರ್ಯಕ್ರಮ ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ನಡೆಯಿತು.
ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ನೂರಾರು ಜನ ಭಕ್ತಾದಿಗಳು ಭಾಗವಹಿಸಿದ್ದರು.
ಸಂಜೆ ವಿವಿಧ ಕಲಾ ತಂಡಗಳೊಂದಿಗೆ ನಡೆದ ಭೈರವೇಶ್ವೇರಸ್ವಾಮಿ, ಲಕುಮಿದೇವಿ ಬೆಳ್ಳಿಫಲ್ಲಕ್ಕಿ ಉತ್ಸವ ಕೂಗೇನಹಳ್ಳಿಯ ಸೇರಿದಂತೆ ಏಳು ಗ್ರಾಮಗಳಲ್ಲಿ ಸಂಚರಿಸಿತು.
ಈ ಸಂದರ್ಭದಲ್ಲಿ ಮಹಿಳೆಯರು ಅದ್ದೂರಿಯಾಗಿ ಸಿಂಗರಿಸಿದ್ದ ಹೂವಿನ ಆರತಿಗಳೊಂದಿಗೆ ವಾರ್ಷಿಕೋತ್ಸವದಲ್ಲಿ ಭಾಗವಹಿದ್ದರು. ಲಕುಮಿದೇವಿಯನ್ನು ಕಾಂತರ ಚಲನ ಚಿತ್ರದಲ್ಲಿನ ವರಹ ರೂಪದಲ್ಲಿ ತೆಂಗಿನಗರಿಗಳಿಂದ ಶೃಂಗರಿಸಿದ್ದು ಎಲ್ಲಾರ ಆಕರ್ಷಣೆಗೆ ಕಾರಣವಾಗಿತ್ತು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…