ದೊಡ್ಡಬಳ್ಳಾಪುರ: ತಾಲ್ಲೂಕಿನ ಕೂಗೇನಹಳ್ಳಿ ಗ್ರಾಮದಲ್ಲಿ ಬೈರವೇಶ್ವರಸ್ವಾಮಿ ಹಾಗೂ ಲಕುಮಿದೇವಿ ವಾರ್ಷಿಕ ಮಹೋತ್ಸವ ಅದ್ದೂರಿಯಾಗಿ ನಡೆಯಿತು.
ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮದಿಂದ ಪ್ರಾರಂಭವಾದ ವಾರ್ಷಿಕೋತ್ಸವ ಕಾರ್ಯಕ್ರಮ ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ನಡೆಯಿತು.
ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ನೂರಾರು ಜನ ಭಕ್ತಾದಿಗಳು ಭಾಗವಹಿಸಿದ್ದರು.
ಸಂಜೆ ವಿವಿಧ ಕಲಾ ತಂಡಗಳೊಂದಿಗೆ ನಡೆದ ಭೈರವೇಶ್ವೇರಸ್ವಾಮಿ, ಲಕುಮಿದೇವಿ ಬೆಳ್ಳಿಫಲ್ಲಕ್ಕಿ ಉತ್ಸವ ಕೂಗೇನಹಳ್ಳಿಯ ಸೇರಿದಂತೆ ಏಳು ಗ್ರಾಮಗಳಲ್ಲಿ ಸಂಚರಿಸಿತು.
ಈ ಸಂದರ್ಭದಲ್ಲಿ ಮಹಿಳೆಯರು ಅದ್ದೂರಿಯಾಗಿ ಸಿಂಗರಿಸಿದ್ದ ಹೂವಿನ ಆರತಿಗಳೊಂದಿಗೆ ವಾರ್ಷಿಕೋತ್ಸವದಲ್ಲಿ ಭಾಗವಹಿದ್ದರು. ಲಕುಮಿದೇವಿಯನ್ನು ಕಾಂತರ ಚಲನ ಚಿತ್ರದಲ್ಲಿನ ವರಹ ರೂಪದಲ್ಲಿ ತೆಂಗಿನಗರಿಗಳಿಂದ ಶೃಂಗರಿಸಿದ್ದು ಎಲ್ಲಾರ ಆಕರ್ಷಣೆಗೆ ಕಾರಣವಾಗಿತ್ತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…