ತಾಲೂಕಿನ ತೂಬಗೆರೆ ಗ್ರಾಮದಲ್ಲಿನ ಕುರುಬ ಸಮುದಾಯದ ಆರಾಧ್ಯದೈವ ಶ್ರೀ ಸಿದ್ಧರಾಮೇಶ್ವರ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
ಜಾತ್ರೆಯಲ್ಲಿ ಹೊಸದುರ್ಗ ಕನಕ ಗುರುಪೀಠ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿ,
ಹಾಲುಮತ ಸಂಸ್ಕೃತಿ ವೈಭವ ಮತ್ತು ಪರಂಪರೆಗಳನುಸಾರ ಕುಲದೈವ ಸಿದ್ದರಾಮೇಶ್ವರ ಸ್ವಾಮಿ ಮತ್ತು ಸಿದ್ದೇಶ್ವರ ಸದ್ಬಕ್ತರಾದ ನಾವುಗಳು ನಮ್ಮ ಇತಿಹಾಸ ಹಿರಿಮೆಗಳಿಗೆ, ದೈವತ್ವದ ಸದಾಚಾರಗಳನ್ನು ಪಸರಿಸುವುದು ಮತ್ತು ಗೌರವಿಸುವುದು ನಮ್ಮ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಕುಲದೇವರ ಸದ್ಭಕ್ತರೂ ಹಾಗೂ ಪೂಜಾರಿಗಳು, ಕಾಲಾಟಗಾರರು, ಗೊರವರ ಕುಣಿತದವರು, ಶಿವ ತಾಂಡವ ನೃತ್ಯದವರು, ಕೋಲಕಾರರು, ಈರಮಕ್ಕಳು ಒಂದೆಡೆ ಸೇರಿ ಆಚರಿಸುತ್ತಿರವ ದೊಡ್ಡ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿರುವುದು ನನ್ನ ಪುಣ್ಯ. ಈ ಸಂದರ್ಭದಲ್ಲಿ ನಾನು ನಿಮ್ಮ ಸಮುದಾಯದ ಗುರುವಾಗಿ ಮನವಿ ಮಾಡಿಕೊಳ್ಳುವುದೇನಂದರೇ ದಯವಿಟ್ಟು, ಕುರುಬ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದರ ಮೂಲಕ, ಸಮುದಾಯ ಜಾಗೃತಿ, ನಮ್ಮ ಸಂಸ್ಕೃತಿ ಪರಂಪರೆಗಳನ್ನು ಅಖಂಡತೆ ಹಾಗೂ ಸಾರ್ವಭೌಮತ್ವವನ್ನು ಉಳಿಸಿ ಎಂದರು.
ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ದೇವನಹಳ್ಳಿ, ಚಿಕ್ಕಬಳ್ಳಾಪುರ, ದುರ್ಗೇನಹಳ್ಳಿ, ಬೀರಸಂದ್ರ ಹಾಗೂ ಬೆಂಗಳೂರಿಗೆ ಸೇರಿದ ವಿವಿಧ ಪ್ರದೇಶಗಳಿಂದ ಕುಲಬಾಂಧವರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದರು.
ಉತ್ಸವದಲ್ಲಿ ವೀರಗಾಸೆ, ಗೊರವನ ಕುಣಿತ, ಕಾಲಾಟಕಾರರು, ಡೊಳ್ಳು ಕುಣಿತ, ಪೂಜಾ ಕುಣಿತ, ಗೊಂಬೆ ಕುಣಿತ ಸೇರಿದಂತೆ ಜನಪದ ನೃತ್ಯ ಪ್ರದರ್ಶನ ಗಮನ ಸೆಳೆಯಿತು.
ಜಾತ್ರಾ ಮಹೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಪೂಜಾ ಕೈಂಕರ್ಯಗಳು ಜರುಗಿದವು, ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.
ಶಾಸಕ ಧೀರಜ್ ಮುನಿರಾಜು, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಕೃಷ್ಣಮೂರ್ತಿ, ಶ್ರೀ ಸಿದ್ಧರಾಮೇಶ್ವರ ಮತ್ತು ಶ್ರೀ ಸಿದ್ದೇಶ್ವರ ದೇವಸ್ಥಾನ ಸಮಿತಿಯ ಪದಾಧಿಕಾರಿಗಳಾದ ಕೃಷ್ಣಪ್ಪ ಬೆಂಗಳೂರು, ರಾಮಚಂದ್ರಪ್ಪ ಚಿಕ್ಕಬಳ್ಳಾಪುರ, ಮುನಿನಂಜಪ್ಪ ದೇವನಹಳ್ಳಿ, ಕೇಬಲ್ ಮಂಜುನಾಥ, ಕೃಷ್ಣಮೂರ್ತಿ, ಮುನಿರಾಜು, ಹಾಗೂ ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯರಾದ ಕೃಷ್ಣಪ್ಪ, ಮುನಿಕೃಷ್ಣಪ್ಪ ಮುಖಂಡರಾದ ಪ್ರತಾಪ್, ಉದಯ ಆರಾಧ್ಯ ಮತ್ತಿತರರು ಇದ್ದರು.
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…