ವಿಜೃಂಭಣೆಯಿಂದ‌ ನೆರವೇರಿದ ಲೋಕಕಲ್ಯಾಣಾರ್ಥ ಶ್ರೀ ಭೂನೀಳಾಸಮೇತ “ಶ್ರೀ ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣೋತ್ಸವ”

ದೊಡ್ಡಬಳ್ಳಾಪುರ ನಗರದ 29ನೇ ಡಿವಿಜನ್ ಭೋವಿ (ವಡ್ಡರ)ಪೇಟೆಯಲ್ಲಿನ ಶ್ರೀ ಶ್ರೀ ಭೂನೀಳಾಸಮೇತ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೋಳಿ (ಕದರಿ) ಹುಣ್ಣಿಮೆ ಪ್ರಯುಕ್ತ ಮಾ.2, 3ರಂದು ಲೋಕಕಲ್ಯಾಣಾರ್ಥ ಶ್ರೀ ಭೂನೀಳಾಸಮೇತ “ಶ್ರೀ ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣೋತ್ಸವ” ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ‌ ನೆರವೇರಿತು.

ಮಾ.2ರ ಬೆಳಿಗ್ಗೆ 6-00 ಗಂಟೆಗೆ ಸುಪ್ರಭಾತ ಸೇವೆ, ಶ್ರೀ ವಿಶ್ವಸೇನ ಪೂಜೆ, ಶ್ರೀ ಭಗವತ್ ವಾಸುದೇವ ಪುಣ್ಯಾಹ ವಾಚನ, ಶ್ರೀ ಮಹಾಲಕ್ಷ್ಮೀನರಸಿಂಹಸ್ವಾಮಿ ಪ್ರಧಾನ ಕಳಸ ಸ್ಥಾಪನೆ, ಸಕಲ ಇಷ್ಟಾರ್ಥ ಸಿದ್ದಿ ಶ್ರೀ ಲಕ್ಷ್ಮೀನರಸಿಂಹ ಪ್ರಧಾನ ಹೋಮ, ಮಹಾಸುದರ್ಶನ ಹೋಮ, ಶಾಂತಿ ಹೋಮ, ಪೂರ್ಣಾಹುತಿ ನಡೆಸಲಾಯಿತು‌.

ಮಧ್ಯಾಹ್ನ 12-30 ಗಂಟೆಗೆ ಮಂತ್ರ ಪುಷ್ಪ ಶಾತುಮುರೈ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಸಂಜೆ 6-00 ಗಂಟೆಗೆ ವೇದ-ಸ್ತೋತ್ರ-ಪ್ರಬಂಧ ಪಾರಾಯಣ ಶ್ರೀ ಮಹಾಲಕ್ಷ್ಮೀ ಪ್ರಧಾನ ಹೋಮ, ಮಹಾಪೂರ್ಣಾಹುತಿ ರಾತ್ರಿ 8-00 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.

ಮಾ.3ರ ಬೆಳಿಗ್ಗೆ 6-00 ಗಂಟೆಗೆ ಸುಪ್ರಭಾತ ಸೇವೆ, ಸ್ವಾಮಿಯವರಿಗೆ ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಅಲಂಕಾರ. ಬೆಳಿಗ್ಗೆ 9-00 ಗಂಟೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣಸ್ವಾಮಿ ಪೂಜೆ, ಮಧ್ಯಾಹ್ನ 12-00 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.

ಲೋಕಕಲ್ಯಾಣಾರ್ಥ ಶ್ರೀ ಭೂನೀಳಾಸಮೇತ “ಶ್ರೀ ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣೋತ್ಸವ”. ರಾತ್ರಿ 8ಕ್ಕೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ‌ ಏರ್ಪಡಿಸಲಾಗಿತ್ತು.

ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಗಳು, ಭಕ್ತಾಧಿಗಳು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.

Ramesh Babu

Journalist

Recent Posts

ಇಚ್ಚಾ ಶಕ್ತಿಯ ಕೊರತೆ ಅಥವಾ ಕಪಟ ನಾಟಕ ಅಥವಾ ಸ್ವ ಹಿತಾಸಕ್ತಿ……

ಇಚ್ಚಾ ಶಕ್ತಿಯ ಕೊರತೆ ಅಥವಾ ಕಪಟ ನಾಟಕ ಅಥವಾ ಸ್ವ ಹಿತಾಸಕ್ತಿ...... ಮತದಾರರ ಪಟ್ಟಿ ಪರಿಷ್ಕರಣೆ, ಲೋಕಸಭಾ ಕ್ಷೇತ್ರಗಳ ಪುನರ್…

2 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲು

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದೆ. ವಿಧೇಯಕ ಅಂಗೀಕಾರವಾಗಲು 326 ಸದಸ್ಯರ ಬೆಂಬಲ‌ ಬೇಕಿತ್ತು.‌ ಒಟ್ಟಾರೆ 489 ಸದಸ್ಯರು ಮತ…

13 hours ago

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್‌ ಗೌಡ ಹತ್ಯೆ ಪ್ರಕರಣ: ಹಾಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟ

2016ರಲ್ಲಿ ಧಾರವಾಡದಲ್ಲಿ ಜಿಲ್ಲಾ ಪಂಚಾಯಿತಿಯ ಬಿಜೆಪಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡ ಹತ್ಯೆ ಪ್ರಕರಣದಲ್ಲಿ ದೋಷಿಗಳಾದ ಮಾಜಿ ಸಚಿವ ಹಾಗೂ ಹಾಲಿ…

16 hours ago

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆ

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆಯಾಗಿದೆ. ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್‌ಗಳನ್ನು…

19 hours ago

ಲವ್ ಜಿಹಾದ್ ಮತ್ತೊಮ್ಮೆ ಇಡೀ ದೇಶಾದ್ಯಂತ ಮಾಧ್ಯಮಗಳಲ್ಲಿ ಚರ್ಚೆ

ಲವ್ ಜಿಹಾದ್....... ಪ್ರೀತಿ - ಪ್ರೇಮದ ಧರ್ಮ ಯುದ್ಧ..... ಒಂದು ಆತ್ಮಾವಲೋಕನ,..... ನಿಜ ಪ್ರೀತಿಯನ್ನು ಅನುಮಾನದಿಂದ ನೋಡುವ ಅತ್ಯಂತ ಕೆಟ್ಟ,…

1 day ago

ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳ…

2 days ago