ದೊಡ್ಡಬಳ್ಳಾಪುರ ನಗರದ 29ನೇ ಡಿವಿಜನ್ ಭೋವಿ (ವಡ್ಡರ)ಪೇಟೆಯಲ್ಲಿನ ಶ್ರೀ ಶ್ರೀ ಭೂನೀಳಾಸಮೇತ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೋಳಿ (ಕದರಿ) ಹುಣ್ಣಿಮೆ ಪ್ರಯುಕ್ತ ಮಾ.2, 3ರಂದು ಲೋಕಕಲ್ಯಾಣಾರ್ಥ ಶ್ರೀ ಭೂನೀಳಾಸಮೇತ “ಶ್ರೀ ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣೋತ್ಸವ” ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ನೆರವೇರಿತು.
ಮಾ.2ರ ಬೆಳಿಗ್ಗೆ 6-00 ಗಂಟೆಗೆ ಸುಪ್ರಭಾತ ಸೇವೆ, ಶ್ರೀ ವಿಶ್ವಸೇನ ಪೂಜೆ, ಶ್ರೀ ಭಗವತ್ ವಾಸುದೇವ ಪುಣ್ಯಾಹ ವಾಚನ, ಶ್ರೀ ಮಹಾಲಕ್ಷ್ಮೀನರಸಿಂಹಸ್ವಾಮಿ ಪ್ರಧಾನ ಕಳಸ ಸ್ಥಾಪನೆ, ಸಕಲ ಇಷ್ಟಾರ್ಥ ಸಿದ್ದಿ ಶ್ರೀ ಲಕ್ಷ್ಮೀನರಸಿಂಹ ಪ್ರಧಾನ ಹೋಮ, ಮಹಾಸುದರ್ಶನ ಹೋಮ, ಶಾಂತಿ ಹೋಮ, ಪೂರ್ಣಾಹುತಿ ನಡೆಸಲಾಯಿತು.
ಮಧ್ಯಾಹ್ನ 12-30 ಗಂಟೆಗೆ ಮಂತ್ರ ಪುಷ್ಪ ಶಾತುಮುರೈ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಸಂಜೆ 6-00 ಗಂಟೆಗೆ ವೇದ-ಸ್ತೋತ್ರ-ಪ್ರಬಂಧ ಪಾರಾಯಣ ಶ್ರೀ ಮಹಾಲಕ್ಷ್ಮೀ ಪ್ರಧಾನ ಹೋಮ, ಮಹಾಪೂರ್ಣಾಹುತಿ ರಾತ್ರಿ 8-00 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.
ಮಾ.3ರ ಬೆಳಿಗ್ಗೆ 6-00 ಗಂಟೆಗೆ ಸುಪ್ರಭಾತ ಸೇವೆ, ಸ್ವಾಮಿಯವರಿಗೆ ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಅಲಂಕಾರ. ಬೆಳಿಗ್ಗೆ 9-00 ಗಂಟೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣಸ್ವಾಮಿ ಪೂಜೆ, ಮಧ್ಯಾಹ್ನ 12-00 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.
ಲೋಕಕಲ್ಯಾಣಾರ್ಥ ಶ್ರೀ ಭೂನೀಳಾಸಮೇತ “ಶ್ರೀ ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣೋತ್ಸವ”. ರಾತ್ರಿ 8ಕ್ಕೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.
ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಗಳು, ಭಕ್ತಾಧಿಗಳು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…