ದೊಡ್ಡಬಳ್ಳಾಪುರ ನಗರದ 29ನೇ ಡಿವಿಜನ್ ಭೋವಿ (ವಡ್ಡರ)ಪೇಟೆಯಲ್ಲಿನ ಶ್ರೀ ಶ್ರೀ ಭೂನೀಳಾಸಮೇತ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೋಳಿ (ಕದರಿ) ಹುಣ್ಣಿಮೆ ಪ್ರಯುಕ್ತ ಮಾ.2, 3ರಂದು ಲೋಕಕಲ್ಯಾಣಾರ್ಥ ಶ್ರೀ ಭೂನೀಳಾಸಮೇತ “ಶ್ರೀ ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣೋತ್ಸವ” ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ನೆರವೇರಿತು.
ಮಾ.2ರ ಬೆಳಿಗ್ಗೆ 6-00 ಗಂಟೆಗೆ ಸುಪ್ರಭಾತ ಸೇವೆ, ಶ್ರೀ ವಿಶ್ವಸೇನ ಪೂಜೆ, ಶ್ರೀ ಭಗವತ್ ವಾಸುದೇವ ಪುಣ್ಯಾಹ ವಾಚನ, ಶ್ರೀ ಮಹಾಲಕ್ಷ್ಮೀನರಸಿಂಹಸ್ವಾಮಿ ಪ್ರಧಾನ ಕಳಸ ಸ್ಥಾಪನೆ, ಸಕಲ ಇಷ್ಟಾರ್ಥ ಸಿದ್ದಿ ಶ್ರೀ ಲಕ್ಷ್ಮೀನರಸಿಂಹ ಪ್ರಧಾನ ಹೋಮ, ಮಹಾಸುದರ್ಶನ ಹೋಮ, ಶಾಂತಿ ಹೋಮ, ಪೂರ್ಣಾಹುತಿ ನಡೆಸಲಾಯಿತು.
ಮಧ್ಯಾಹ್ನ 12-30 ಗಂಟೆಗೆ ಮಂತ್ರ ಪುಷ್ಪ ಶಾತುಮುರೈ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಸಂಜೆ 6-00 ಗಂಟೆಗೆ ವೇದ-ಸ್ತೋತ್ರ-ಪ್ರಬಂಧ ಪಾರಾಯಣ ಶ್ರೀ ಮಹಾಲಕ್ಷ್ಮೀ ಪ್ರಧಾನ ಹೋಮ, ಮಹಾಪೂರ್ಣಾಹುತಿ ರಾತ್ರಿ 8-00 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.
ಮಾ.3ರ ಬೆಳಿಗ್ಗೆ 6-00 ಗಂಟೆಗೆ ಸುಪ್ರಭಾತ ಸೇವೆ, ಸ್ವಾಮಿಯವರಿಗೆ ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಅಲಂಕಾರ. ಬೆಳಿಗ್ಗೆ 9-00 ಗಂಟೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣಸ್ವಾಮಿ ಪೂಜೆ, ಮಧ್ಯಾಹ್ನ 12-00 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.
ಲೋಕಕಲ್ಯಾಣಾರ್ಥ ಶ್ರೀ ಭೂನೀಳಾಸಮೇತ “ಶ್ರೀ ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣೋತ್ಸವ”. ರಾತ್ರಿ 8ಕ್ಕೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.
ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಗಳು, ಭಕ್ತಾಧಿಗಳು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…