ವಿಜೃಂಭಣೆಯಿಂದ‌ ನೆರವೇರಿದ ಲೋಕಕಲ್ಯಾಣಾರ್ಥ ಶ್ರೀ ಭೂನೀಳಾಸಮೇತ “ಶ್ರೀ ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣೋತ್ಸವ”

ದೊಡ್ಡಬಳ್ಳಾಪುರ ನಗರದ 29ನೇ ಡಿವಿಜನ್ ಭೋವಿ (ವಡ್ಡರ)ಪೇಟೆಯಲ್ಲಿನ ಶ್ರೀ ಶ್ರೀ ಭೂನೀಳಾಸಮೇತ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೋಳಿ (ಕದರಿ) ಹುಣ್ಣಿಮೆ ಪ್ರಯುಕ್ತ ಮಾ.2, 3ರಂದು ಲೋಕಕಲ್ಯಾಣಾರ್ಥ ಶ್ರೀ ಭೂನೀಳಾಸಮೇತ “ಶ್ರೀ ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣೋತ್ಸವ” ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ‌ ನೆರವೇರಿತು.

ಮಾ.2ರ ಬೆಳಿಗ್ಗೆ 6-00 ಗಂಟೆಗೆ ಸುಪ್ರಭಾತ ಸೇವೆ, ಶ್ರೀ ವಿಶ್ವಸೇನ ಪೂಜೆ, ಶ್ರೀ ಭಗವತ್ ವಾಸುದೇವ ಪುಣ್ಯಾಹ ವಾಚನ, ಶ್ರೀ ಮಹಾಲಕ್ಷ್ಮೀನರಸಿಂಹಸ್ವಾಮಿ ಪ್ರಧಾನ ಕಳಸ ಸ್ಥಾಪನೆ, ಸಕಲ ಇಷ್ಟಾರ್ಥ ಸಿದ್ದಿ ಶ್ರೀ ಲಕ್ಷ್ಮೀನರಸಿಂಹ ಪ್ರಧಾನ ಹೋಮ, ಮಹಾಸುದರ್ಶನ ಹೋಮ, ಶಾಂತಿ ಹೋಮ, ಪೂರ್ಣಾಹುತಿ ನಡೆಸಲಾಯಿತು‌.

ಮಧ್ಯಾಹ್ನ 12-30 ಗಂಟೆಗೆ ಮಂತ್ರ ಪುಷ್ಪ ಶಾತುಮುರೈ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಸಂಜೆ 6-00 ಗಂಟೆಗೆ ವೇದ-ಸ್ತೋತ್ರ-ಪ್ರಬಂಧ ಪಾರಾಯಣ ಶ್ರೀ ಮಹಾಲಕ್ಷ್ಮೀ ಪ್ರಧಾನ ಹೋಮ, ಮಹಾಪೂರ್ಣಾಹುತಿ ರಾತ್ರಿ 8-00 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.

ಮಾ.3ರ ಬೆಳಿಗ್ಗೆ 6-00 ಗಂಟೆಗೆ ಸುಪ್ರಭಾತ ಸೇವೆ, ಸ್ವಾಮಿಯವರಿಗೆ ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಅಲಂಕಾರ. ಬೆಳಿಗ್ಗೆ 9-00 ಗಂಟೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣಸ್ವಾಮಿ ಪೂಜೆ, ಮಧ್ಯಾಹ್ನ 12-00 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.

ಲೋಕಕಲ್ಯಾಣಾರ್ಥ ಶ್ರೀ ಭೂನೀಳಾಸಮೇತ “ಶ್ರೀ ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣೋತ್ಸವ”. ರಾತ್ರಿ 8ಕ್ಕೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ‌ ಏರ್ಪಡಿಸಲಾಗಿತ್ತು.

ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಗಳು, ಭಕ್ತಾಧಿಗಳು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

6 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

7 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

9 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

1 day ago