ವಿಟಿಯು ನಾಲ್ಕನೇ ರ್ಯಾಂಕ್ ಪಡೆದ ವಿದ್ಯಾರ್ಥಿಗೆ ಸನ್ಮಾನ: ರ್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿರುವುದು ಬಹಳ ಹೆಮ್ಮೆಯ ವಿಷಯ- ರಾಜೇಂದ್ರ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅಡಿಯಲ್ಲಿ ರಾಜ್ಯಾದ್ಯಂತ ಸುಮಾರು 200ಕ್ಕೂ ಹೆಚ್ಚು ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಅದರಲ್ಲಿ ನಮ್ಮ ಆರ್.ಎಲ್ ಜಾಲಪ್ಪ ಸಮೂಹ ಸಂಸ್ಥೆಗಳ ತಾಂತ್ರಿಕ ಕಾಲೇಜು ಒಂದು. ನಮ್ಮ ಕಾಲೇಜಿನ ಮೆಕಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಮೂಲ ಪವನ್ ಕುಮಾರ್ ರೆಡ್ಡಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ. ಉತ್ತಮ ರ್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿರುವುದು ಬಹಳ ಹೆಮ್ಮೆಯ ವಿಷಯ ಎಂದು ಕಾಲೇಜು ನಿರ್ದೇಶಕ ರಾಜೇಂದ್ರ ಹೇಳಿದರು.

ವಿದ್ಯಾರ್ಥಿ ಮೂಲ ಪವನ್ ಕುಮಾರ್ ರೆಡ್ಡಿ ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ. ಉನ್ನತ ಸಾಧನೆಗೈದ ವಿದ್ಯಾರ್ಥಿ ಮೂಲ ಪವನ್ ಕುಮಾರ್ ರೆಡ್ಡಿಯನ್ನ ಕಾಲೇಜು ನಿರ್ದೇಶಕ ರಾಜೇಂದ್ರ, ಪ್ರಾಧ್ಯಪಕರಾದ ಸುನೀಲ್ ಕುಮಾರ್, ದಾದಾಫೀರ್ ಸೇರಿದಂತೆ ಅಭಿನಂದಿಸಿದರು. ನಂತರ ತೆರದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದೆ ನಮ್ಮ ಕಾಲೇಜಿನ ವಿದ್ಯಾರ್ಥಿಗೆ ಐದನೇ ರ್ಯಾಂಕ್ ಬಂದಿತ್ತು. ಮುಂದಿನ‌ ದಿನಗಳಲ್ಲಿ ಮೊದಲ ರ್ಯಾಂಕ್ ಪಡೆಯಲು ವಿದ್ಯಾರ್ಥಿಗಳನ್ನು ತಯಾರು ಮಾಡಲಾಗುವುದು ಎಂದರು.

ಕಾಲೇಜಿನಲ್ಲಿ ಉತ್ತಮ ಪರಿಣತಿ ಪಡೆದ ಬೋಧಕರ ಸಿಬ್ಬಂದಿ ಇದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಈ ವಿದ್ಯಾರ್ಥಿಯನ್ನು‌ ಉಳಿದ ಎಲ್ಲಾ ವಿದ್ಯಾರ್ಥಿಗಳು ಮಾದರಿ, ಸ್ಫೂರ್ತಿಯಾಗಿ ತೆಗೆದುಕೊಂಡು ಉತ್ತಮ ಅಂಕ ಪಡೆದು ತಂದೆ-ತಾಯಿ, ಕಾಲೇಜಿಗೆ ಕೀರ್ತಿ ತರಬೇಕು ಎಂದು ಕೋರಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ವಿದ್ಯಾರ್ಥಿ ಮೂಲ ಪವನ್ ಕುಮಾರ್ ರೆಡ್ಡಿ, ನನ್ನ ಈ ಎಲ್ಲಾ ಸಾಧನೆಗೆ ನನ್ನ ತಂದೆ-ತಾಯಿ, ಕಾಲೇಜಿನ ಆಡಳಿತ ಮಂಡಳಿ ಹಾಗೂ ಗುರುಗಳು. ರ್ಯಾಂಕ್ ಪಡೆಯುವ ನಿರೀಕ್ಷೆ ಇತ್ತು. ಅದರಂತೆ ನಾಲ್ಕನೇ ರ್ಯಾಂಕ್ ಪಡೆದಿರುವುದಕ್ಕೆ ಖುಷಿ ಇದೆ. ಕಠಿಣ ಪರಿಶ್ರಮದಿಂದ ಈ ಸಾಧನೆ ಮಾಡುವುದಕ್ಕೆ ಸಾಧ್ಯವಾಯಿತು. ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ಇನ್ನೂ ಹೆಚ್ಚು ಪರಿಣತಿ ಪಡೆದು ಉತ್ತಮ ಸಾಧನೆ ಮಾಡಲಾಗುವುದು ಎಂದರು.

ಈ ವೇಳೆ ವಿದ್ಯಾರ್ಥಿ ತಂದೆ ಮೂಲ ಎರಕಲ ರೆಡ್ಡಿ, ತಾಯಿ ಮೂಲ ನಾಗರತ್ನಮ್ಮ, ಪ್ರಾಂಶುಪಾಲ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

2 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

2 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

4 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

13 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

14 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

16 hours ago