ವಿಟಿಯು ನಾಲ್ಕನೇ ರ್ಯಾಂಕ್ ಪಡೆದ ವಿದ್ಯಾರ್ಥಿಗೆ ಸನ್ಮಾನ: ರ್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿರುವುದು ಬಹಳ ಹೆಮ್ಮೆಯ ವಿಷಯ- ರಾಜೇಂದ್ರ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅಡಿಯಲ್ಲಿ ರಾಜ್ಯಾದ್ಯಂತ ಸುಮಾರು 200ಕ್ಕೂ ಹೆಚ್ಚು ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಅದರಲ್ಲಿ ನಮ್ಮ ಆರ್.ಎಲ್ ಜಾಲಪ್ಪ ಸಮೂಹ ಸಂಸ್ಥೆಗಳ ತಾಂತ್ರಿಕ ಕಾಲೇಜು ಒಂದು. ನಮ್ಮ ಕಾಲೇಜಿನ ಮೆಕಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಮೂಲ ಪವನ್ ಕುಮಾರ್ ರೆಡ್ಡಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ. ಉತ್ತಮ ರ್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿರುವುದು ಬಹಳ ಹೆಮ್ಮೆಯ ವಿಷಯ ಎಂದು ಕಾಲೇಜು ನಿರ್ದೇಶಕ ರಾಜೇಂದ್ರ ಹೇಳಿದರು.

ವಿದ್ಯಾರ್ಥಿ ಮೂಲ ಪವನ್ ಕುಮಾರ್ ರೆಡ್ಡಿ ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ. ಉನ್ನತ ಸಾಧನೆಗೈದ ವಿದ್ಯಾರ್ಥಿ ಮೂಲ ಪವನ್ ಕುಮಾರ್ ರೆಡ್ಡಿಯನ್ನ ಕಾಲೇಜು ನಿರ್ದೇಶಕ ರಾಜೇಂದ್ರ, ಪ್ರಾಧ್ಯಪಕರಾದ ಸುನೀಲ್ ಕುಮಾರ್, ದಾದಾಫೀರ್ ಸೇರಿದಂತೆ ಅಭಿನಂದಿಸಿದರು. ನಂತರ ತೆರದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದೆ ನಮ್ಮ ಕಾಲೇಜಿನ ವಿದ್ಯಾರ್ಥಿಗೆ ಐದನೇ ರ್ಯಾಂಕ್ ಬಂದಿತ್ತು. ಮುಂದಿನ‌ ದಿನಗಳಲ್ಲಿ ಮೊದಲ ರ್ಯಾಂಕ್ ಪಡೆಯಲು ವಿದ್ಯಾರ್ಥಿಗಳನ್ನು ತಯಾರು ಮಾಡಲಾಗುವುದು ಎಂದರು.

ಕಾಲೇಜಿನಲ್ಲಿ ಉತ್ತಮ ಪರಿಣತಿ ಪಡೆದ ಬೋಧಕರ ಸಿಬ್ಬಂದಿ ಇದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಈ ವಿದ್ಯಾರ್ಥಿಯನ್ನು‌ ಉಳಿದ ಎಲ್ಲಾ ವಿದ್ಯಾರ್ಥಿಗಳು ಮಾದರಿ, ಸ್ಫೂರ್ತಿಯಾಗಿ ತೆಗೆದುಕೊಂಡು ಉತ್ತಮ ಅಂಕ ಪಡೆದು ತಂದೆ-ತಾಯಿ, ಕಾಲೇಜಿಗೆ ಕೀರ್ತಿ ತರಬೇಕು ಎಂದು ಕೋರಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ವಿದ್ಯಾರ್ಥಿ ಮೂಲ ಪವನ್ ಕುಮಾರ್ ರೆಡ್ಡಿ, ನನ್ನ ಈ ಎಲ್ಲಾ ಸಾಧನೆಗೆ ನನ್ನ ತಂದೆ-ತಾಯಿ, ಕಾಲೇಜಿನ ಆಡಳಿತ ಮಂಡಳಿ ಹಾಗೂ ಗುರುಗಳು. ರ್ಯಾಂಕ್ ಪಡೆಯುವ ನಿರೀಕ್ಷೆ ಇತ್ತು. ಅದರಂತೆ ನಾಲ್ಕನೇ ರ್ಯಾಂಕ್ ಪಡೆದಿರುವುದಕ್ಕೆ ಖುಷಿ ಇದೆ. ಕಠಿಣ ಪರಿಶ್ರಮದಿಂದ ಈ ಸಾಧನೆ ಮಾಡುವುದಕ್ಕೆ ಸಾಧ್ಯವಾಯಿತು. ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ಇನ್ನೂ ಹೆಚ್ಚು ಪರಿಣತಿ ಪಡೆದು ಉತ್ತಮ ಸಾಧನೆ ಮಾಡಲಾಗುವುದು ಎಂದರು.

ಈ ವೇಳೆ ವಿದ್ಯಾರ್ಥಿ ತಂದೆ ಮೂಲ ಎರಕಲ ರೆಡ್ಡಿ, ತಾಯಿ ಮೂಲ ನಾಗರತ್ನಮ್ಮ, ಪ್ರಾಂಶುಪಾಲ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

Ramesh Babu

Journalist

Recent Posts

ಹೆದ್ದಾರಿಯಿಂದ ನಗರ ಬೀದಿವರೆಗೆ ಶುಭಾಶಯ, ಸ್ವಾಗತ ಬ್ಯಾನರ್‌ಗಳದ್ದೇ ಆರ್ಭಟ: ನ್ಯಾಯಾಲಯದ ನಿರ್ದೇಶನಕ್ಕೂ ಸೊಪ್ಪು ಹಾಕದ ಅನಧಿಕೃತ ಫ್ಲೆಕ್ಸ್‌ಗಳು: ಸ್ವಚ್ಛತೆ, ಸುರಕ್ಷತೆ ಹಾಗೂ ಪರಿಸರಕ್ಕೆ ದೊಡ್ಡ ಸವಾಲು

ಬೆಂಗಳೂರು ಗ್ರಾಮಾಂತರ: ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಕಟೌಟ್ ಹಾಗೂ ಬಿಲ್‌ಬೋರ್ಡ್‌ಗಳನ್ನು ಅಳವಡಿಸದಂತೆ ರಾಜ್ಯ ಸರ್ಕಾರ ಮತ್ತು ನ್ಯಾಯಾಲಯಗಳು…

5 hours ago

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

18 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

1 day ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

2 days ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

2 days ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

2 days ago