ವಿಟಿಯು ನಾಲ್ಕನೇ ರ್ಯಾಂಕ್ ಪಡೆದ ವಿದ್ಯಾರ್ಥಿಗೆ ಸನ್ಮಾನ: ರ್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿರುವುದು ಬಹಳ ಹೆಮ್ಮೆಯ ವಿಷಯ- ರಾಜೇಂದ್ರ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅಡಿಯಲ್ಲಿ ರಾಜ್ಯಾದ್ಯಂತ ಸುಮಾರು 200ಕ್ಕೂ ಹೆಚ್ಚು ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಅದರಲ್ಲಿ ನಮ್ಮ ಆರ್.ಎಲ್ ಜಾಲಪ್ಪ ಸಮೂಹ ಸಂಸ್ಥೆಗಳ ತಾಂತ್ರಿಕ ಕಾಲೇಜು ಒಂದು. ನಮ್ಮ ಕಾಲೇಜಿನ ಮೆಕಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಮೂಲ ಪವನ್ ಕುಮಾರ್ ರೆಡ್ಡಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ. ಉತ್ತಮ ರ್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿರುವುದು ಬಹಳ ಹೆಮ್ಮೆಯ ವಿಷಯ ಎಂದು ಕಾಲೇಜು ನಿರ್ದೇಶಕ ರಾಜೇಂದ್ರ ಹೇಳಿದರು.

ವಿದ್ಯಾರ್ಥಿ ಮೂಲ ಪವನ್ ಕುಮಾರ್ ರೆಡ್ಡಿ ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ. ಉನ್ನತ ಸಾಧನೆಗೈದ ವಿದ್ಯಾರ್ಥಿ ಮೂಲ ಪವನ್ ಕುಮಾರ್ ರೆಡ್ಡಿಯನ್ನ ಕಾಲೇಜು ನಿರ್ದೇಶಕ ರಾಜೇಂದ್ರ, ಪ್ರಾಧ್ಯಪಕರಾದ ಸುನೀಲ್ ಕುಮಾರ್, ದಾದಾಫೀರ್ ಸೇರಿದಂತೆ ಅಭಿನಂದಿಸಿದರು. ನಂತರ ತೆರದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದೆ ನಮ್ಮ ಕಾಲೇಜಿನ ವಿದ್ಯಾರ್ಥಿಗೆ ಐದನೇ ರ್ಯಾಂಕ್ ಬಂದಿತ್ತು. ಮುಂದಿನ‌ ದಿನಗಳಲ್ಲಿ ಮೊದಲ ರ್ಯಾಂಕ್ ಪಡೆಯಲು ವಿದ್ಯಾರ್ಥಿಗಳನ್ನು ತಯಾರು ಮಾಡಲಾಗುವುದು ಎಂದರು.

ಕಾಲೇಜಿನಲ್ಲಿ ಉತ್ತಮ ಪರಿಣತಿ ಪಡೆದ ಬೋಧಕರ ಸಿಬ್ಬಂದಿ ಇದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಈ ವಿದ್ಯಾರ್ಥಿಯನ್ನು‌ ಉಳಿದ ಎಲ್ಲಾ ವಿದ್ಯಾರ್ಥಿಗಳು ಮಾದರಿ, ಸ್ಫೂರ್ತಿಯಾಗಿ ತೆಗೆದುಕೊಂಡು ಉತ್ತಮ ಅಂಕ ಪಡೆದು ತಂದೆ-ತಾಯಿ, ಕಾಲೇಜಿಗೆ ಕೀರ್ತಿ ತರಬೇಕು ಎಂದು ಕೋರಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ವಿದ್ಯಾರ್ಥಿ ಮೂಲ ಪವನ್ ಕುಮಾರ್ ರೆಡ್ಡಿ, ನನ್ನ ಈ ಎಲ್ಲಾ ಸಾಧನೆಗೆ ನನ್ನ ತಂದೆ-ತಾಯಿ, ಕಾಲೇಜಿನ ಆಡಳಿತ ಮಂಡಳಿ ಹಾಗೂ ಗುರುಗಳು. ರ್ಯಾಂಕ್ ಪಡೆಯುವ ನಿರೀಕ್ಷೆ ಇತ್ತು. ಅದರಂತೆ ನಾಲ್ಕನೇ ರ್ಯಾಂಕ್ ಪಡೆದಿರುವುದಕ್ಕೆ ಖುಷಿ ಇದೆ. ಕಠಿಣ ಪರಿಶ್ರಮದಿಂದ ಈ ಸಾಧನೆ ಮಾಡುವುದಕ್ಕೆ ಸಾಧ್ಯವಾಯಿತು. ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ಇನ್ನೂ ಹೆಚ್ಚು ಪರಿಣತಿ ಪಡೆದು ಉತ್ತಮ ಸಾಧನೆ ಮಾಡಲಾಗುವುದು ಎಂದರು.

ಈ ವೇಳೆ ವಿದ್ಯಾರ್ಥಿ ತಂದೆ ಮೂಲ ಎರಕಲ ರೆಡ್ಡಿ, ತಾಯಿ ಮೂಲ ನಾಗರತ್ನಮ್ಮ, ಪ್ರಾಂಶುಪಾಲ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

Ramesh Babu

Journalist

Recent Posts

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

2 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

5 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

6 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

9 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

10 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

12 hours ago