ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ವಿಭಾಗವು ವಿದೇಶಿ ಮೂಲದ ಡ್ರಗ್ಸ್ ಸಾಗಾಟಗಾರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತನಿಂದ 2 ಕೋಟಿ ಮೌಲ್ಯದ ಎಂಡಿಎಂಎ ಹರಳು, ಬಿಳಿ ಹರಳು (676 ಗ್ರಾಂ) ಕಂದು ಹರಳು (926 ಗ್ರಾಂ), ಹಳದಿ ಹರಳು (112 ಗ್ರಾಂ) ಹಾಗೂ ಪಿಂಕ್ ಹರಳು (310 ಗ್ರಾಂ) ಸೇರಿದಂತೆ ಒಟ್ಟಾರೆಯಾಗಿ 2024ಗ್ರಾಂ ನಷ್ಟು ವಶಪಡಿಸಿಕೊಂಡಿದ್ದಾರೆ. ಇದರ ಜೊತೆಗೆ ಮೊಬೈಲ್ ಫೋನ್ ಹಾಗೂ ತೂಕದ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.
ಅಕ್ರಮವಾಗಿ ಡ್ರಗ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದೇವನಹಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು ಬಂಧಿಸಿದ್ದಾರೆ. ಇವರಿಂದ 80 ಲಕ್ಷ ರೂಪಾಯಿ ಮೌಲ್ಯದ 850 ಗ್ರಾಂನಷ್ಟು ಕೊಕೇನ್, 2 ಮೊಬೈಲ್, ವಿದ್ಯುನ್ಮಾನ ತೂಕ ಯಂತ್ರ, ಒಂದು ಬ್ಯಾಗ್ ಹಾಗೂ 85 ಜಿಪ್ ಕವರ್ ಗಳನ್ನು ಸಾಕ್ಷಿಯಾಗಿ ವಶಪಡಿಸಿಕೊಂಡಿದ್ದಾರೆ ಎಂದರು.
ಏ.3ರಂದು ಹೆಣ್ಣೂರು ಪೊಲೀಸ್ ಠಾಣೆ ಅಧಿಕಾರಿಗಳು ಹಲ್ಲೆಯ ವೈರಲ್ ವಿಡಿಯೋ ಜಾಡು ಹಿಡಿದು ತ್ವರಿತವಾಗಿ ಸಂತ್ರಸ್ತನನ್ನು ಪತ್ತೆಮಾಡಿದ್ದು, ಇದರಿಂದ 05 ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಲ್ಲೆ ಮಾಡಿದ ವ್ಯಕ್ತಿ ಹಾಗೂ ಹಲ್ಲೆಗೊಳಗಾದವ ಇಬ್ಬರೂ ಪ್ರತಿಷ್ಠಿತ ಡೈರಿ ಕಂಪನಿಯ ಉದ್ಯೋಗಿಗಳಾಗಿದ್ದು, ಕೆಲಸದ ಸ್ಥಳದಲ್ಲಿನ ವೈಷಮ್ಯ ಹಾಗೂ ಹಣಕಾಸಿನ ವ್ಯವಹಾರದಿಂದಾಗಿ ಈ ಘಟನೆ ನಡೆದಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…