ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ವಿಭಾಗವು ವಿದೇಶಿ ಮೂಲದ ಡ್ರಗ್ಸ್ ಸಾಗಾಟಗಾರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತನಿಂದ 2 ಕೋಟಿ ಮೌಲ್ಯದ ಎಂಡಿಎಂಎ ಹರಳು, ಬಿಳಿ ಹರಳು (676 ಗ್ರಾಂ) ಕಂದು ಹರಳು (926 ಗ್ರಾಂ), ಹಳದಿ ಹರಳು (112 ಗ್ರಾಂ) ಹಾಗೂ ಪಿಂಕ್ ಹರಳು (310 ಗ್ರಾಂ) ಸೇರಿದಂತೆ ಒಟ್ಟಾರೆಯಾಗಿ 2024ಗ್ರಾಂ ನಷ್ಟು ವಶಪಡಿಸಿಕೊಂಡಿದ್ದಾರೆ. ಇದರ ಜೊತೆಗೆ ಮೊಬೈಲ್ ಫೋನ್ ಹಾಗೂ ತೂಕದ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.
ಅಕ್ರಮವಾಗಿ ಡ್ರಗ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದೇವನಹಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು ಬಂಧಿಸಿದ್ದಾರೆ. ಇವರಿಂದ 80 ಲಕ್ಷ ರೂಪಾಯಿ ಮೌಲ್ಯದ 850 ಗ್ರಾಂನಷ್ಟು ಕೊಕೇನ್, 2 ಮೊಬೈಲ್, ವಿದ್ಯುನ್ಮಾನ ತೂಕ ಯಂತ್ರ, ಒಂದು ಬ್ಯಾಗ್ ಹಾಗೂ 85 ಜಿಪ್ ಕವರ್ ಗಳನ್ನು ಸಾಕ್ಷಿಯಾಗಿ ವಶಪಡಿಸಿಕೊಂಡಿದ್ದಾರೆ ಎಂದರು.
ಏ.3ರಂದು ಹೆಣ್ಣೂರು ಪೊಲೀಸ್ ಠಾಣೆ ಅಧಿಕಾರಿಗಳು ಹಲ್ಲೆಯ ವೈರಲ್ ವಿಡಿಯೋ ಜಾಡು ಹಿಡಿದು ತ್ವರಿತವಾಗಿ ಸಂತ್ರಸ್ತನನ್ನು ಪತ್ತೆಮಾಡಿದ್ದು, ಇದರಿಂದ 05 ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಲ್ಲೆ ಮಾಡಿದ ವ್ಯಕ್ತಿ ಹಾಗೂ ಹಲ್ಲೆಗೊಳಗಾದವ ಇಬ್ಬರೂ ಪ್ರತಿಷ್ಠಿತ ಡೈರಿ ಕಂಪನಿಯ ಉದ್ಯೋಗಿಗಳಾಗಿದ್ದು, ಕೆಲಸದ ಸ್ಥಳದಲ್ಲಿನ ವೈಷಮ್ಯ ಹಾಗೂ ಹಣಕಾಸಿನ ವ್ಯವಹಾರದಿಂದಾಗಿ ಈ ಘಟನೆ ನಡೆದಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದರು.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…