ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ವಿಭಾಗವು ವಿದೇಶಿ ಮೂಲದ ಡ್ರಗ್ಸ್ ಸಾಗಾಟಗಾರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತನಿಂದ 2 ಕೋಟಿ ಮೌಲ್ಯದ ಎಂಡಿಎಂಎ ಹರಳು, ಬಿಳಿ ಹರಳು (676 ಗ್ರಾಂ) ಕಂದು ಹರಳು (926 ಗ್ರಾಂ), ಹಳದಿ ಹರಳು (112 ಗ್ರಾಂ) ಹಾಗೂ ಪಿಂಕ್ ಹರಳು (310 ಗ್ರಾಂ) ಸೇರಿದಂತೆ ಒಟ್ಟಾರೆಯಾಗಿ 2024ಗ್ರಾಂ ನಷ್ಟು ವಶಪಡಿಸಿಕೊಂಡಿದ್ದಾರೆ. ಇದರ ಜೊತೆಗೆ ಮೊಬೈಲ್ ಫೋನ್ ಹಾಗೂ ತೂಕದ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.
ಅಕ್ರಮವಾಗಿ ಡ್ರಗ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದೇವನಹಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು ಬಂಧಿಸಿದ್ದಾರೆ. ಇವರಿಂದ 80 ಲಕ್ಷ ರೂಪಾಯಿ ಮೌಲ್ಯದ 850 ಗ್ರಾಂನಷ್ಟು ಕೊಕೇನ್, 2 ಮೊಬೈಲ್, ವಿದ್ಯುನ್ಮಾನ ತೂಕ ಯಂತ್ರ, ಒಂದು ಬ್ಯಾಗ್ ಹಾಗೂ 85 ಜಿಪ್ ಕವರ್ ಗಳನ್ನು ಸಾಕ್ಷಿಯಾಗಿ ವಶಪಡಿಸಿಕೊಂಡಿದ್ದಾರೆ ಎಂದರು.
ಏ.3ರಂದು ಹೆಣ್ಣೂರು ಪೊಲೀಸ್ ಠಾಣೆ ಅಧಿಕಾರಿಗಳು ಹಲ್ಲೆಯ ವೈರಲ್ ವಿಡಿಯೋ ಜಾಡು ಹಿಡಿದು ತ್ವರಿತವಾಗಿ ಸಂತ್ರಸ್ತನನ್ನು ಪತ್ತೆಮಾಡಿದ್ದು, ಇದರಿಂದ 05 ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಲ್ಲೆ ಮಾಡಿದ ವ್ಯಕ್ತಿ ಹಾಗೂ ಹಲ್ಲೆಗೊಳಗಾದವ ಇಬ್ಬರೂ ಪ್ರತಿಷ್ಠಿತ ಡೈರಿ ಕಂಪನಿಯ ಉದ್ಯೋಗಿಗಳಾಗಿದ್ದು, ಕೆಲಸದ ಸ್ಥಳದಲ್ಲಿನ ವೈಷಮ್ಯ ಹಾಗೂ ಹಣಕಾಸಿನ ವ್ಯವಹಾರದಿಂದಾಗಿ ಈ ಘಟನೆ ನಡೆದಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದರು.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…