ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ವಿಭಾಗವು ವಿದೇಶಿ ಮೂಲದ ಡ್ರಗ್ಸ್ ಸಾಗಾಟಗಾರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತನಿಂದ 2 ಕೋಟಿ ಮೌಲ್ಯದ ಎಂಡಿಎಂಎ ಹರಳು, ಬಿಳಿ ಹರಳು (676 ಗ್ರಾಂ) ಕಂದು ಹರಳು (926 ಗ್ರಾಂ), ಹಳದಿ ಹರಳು (112 ಗ್ರಾಂ) ಹಾಗೂ ಪಿಂಕ್ ಹರಳು (310 ಗ್ರಾಂ) ಸೇರಿದಂತೆ ಒಟ್ಟಾರೆಯಾಗಿ 2024ಗ್ರಾಂ ನಷ್ಟು ವಶಪಡಿಸಿಕೊಂಡಿದ್ದಾರೆ. ಇದರ ಜೊತೆಗೆ ಮೊಬೈಲ್ ಫೋನ್ ಹಾಗೂ ತೂಕದ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.
ಅಕ್ರಮವಾಗಿ ಡ್ರಗ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದೇವನಹಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು ಬಂಧಿಸಿದ್ದಾರೆ. ಇವರಿಂದ 80 ಲಕ್ಷ ರೂಪಾಯಿ ಮೌಲ್ಯದ 850 ಗ್ರಾಂನಷ್ಟು ಕೊಕೇನ್, 2 ಮೊಬೈಲ್, ವಿದ್ಯುನ್ಮಾನ ತೂಕ ಯಂತ್ರ, ಒಂದು ಬ್ಯಾಗ್ ಹಾಗೂ 85 ಜಿಪ್ ಕವರ್ ಗಳನ್ನು ಸಾಕ್ಷಿಯಾಗಿ ವಶಪಡಿಸಿಕೊಂಡಿದ್ದಾರೆ ಎಂದರು.
ಏ.3ರಂದು ಹೆಣ್ಣೂರು ಪೊಲೀಸ್ ಠಾಣೆ ಅಧಿಕಾರಿಗಳು ಹಲ್ಲೆಯ ವೈರಲ್ ವಿಡಿಯೋ ಜಾಡು ಹಿಡಿದು ತ್ವರಿತವಾಗಿ ಸಂತ್ರಸ್ತನನ್ನು ಪತ್ತೆಮಾಡಿದ್ದು, ಇದರಿಂದ 05 ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಲ್ಲೆ ಮಾಡಿದ ವ್ಯಕ್ತಿ ಹಾಗೂ ಹಲ್ಲೆಗೊಳಗಾದವ ಇಬ್ಬರೂ ಪ್ರತಿಷ್ಠಿತ ಡೈರಿ ಕಂಪನಿಯ ಉದ್ಯೋಗಿಗಳಾಗಿದ್ದು, ಕೆಲಸದ ಸ್ಥಳದಲ್ಲಿನ ವೈಷಮ್ಯ ಹಾಗೂ ಹಣಕಾಸಿನ ವ್ಯವಹಾರದಿಂದಾಗಿ ಈ ಘಟನೆ ನಡೆದಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದರು.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…