ವಿದೇಶಿ ಮೂಲದ ಡ್ರಗ್ಸ್ ಸಾಗಾಟಗಾರನ ಬಂಧನ: ಬಂಧಿತನಿಂದ 2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ವಿಭಾಗವು ವಿದೇಶಿ ಮೂಲದ ಡ್ರಗ್ಸ್ ಸಾಗಾಟಗಾರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತನಿಂದ 2 ಕೋಟಿ ಮೌಲ್ಯದ ಎಂಡಿಎಂಎ ಹರಳು, ಬಿಳಿ  ಹರಳು (676 ಗ್ರಾಂ) ಕಂದು ಹರಳು (926 ಗ್ರಾಂ), ಹಳದಿ ಹರಳು (112 ಗ್ರಾಂ) ಹಾಗೂ ಪಿಂಕ್ ಹರಳು (310 ಗ್ರಾಂ) ಸೇರಿದಂತೆ ಒಟ್ಟಾರೆಯಾಗಿ 2024ಗ್ರಾಂ ನಷ್ಟು ವಶಪಡಿಸಿಕೊಂಡಿದ್ದಾರೆ. ಇದರ ಜೊತೆಗೆ ಮೊಬೈಲ್ ಫೋನ್ ಹಾಗೂ ತೂಕದ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.

ಅಕ್ರಮವಾಗಿ ಡ್ರಗ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದೇವನಹಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು ಬಂಧಿಸಿದ್ದಾರೆ. ಇವರಿಂದ 80 ಲಕ್ಷ ರೂಪಾಯಿ ಮೌಲ್ಯದ 850 ಗ್ರಾಂನಷ್ಟು ಕೊಕೇನ್, 2 ಮೊಬೈಲ್, ವಿದ್ಯುನ್ಮಾನ ತೂಕ ಯಂತ್ರ, ಒಂದು ಬ್ಯಾಗ್ ಹಾಗೂ 85 ಜಿಪ್ ಕವರ್ ಗಳನ್ನು ಸಾಕ್ಷಿಯಾಗಿ ವಶಪಡಿಸಿಕೊಂಡಿದ್ದಾರೆ ಎಂದರು.

ಆಟದ ಮೈದಾನಗಳಲ್ಲಿ ಯುವಕರನ್ನು ಗುರಿಯಾಗಿಸಿಕೊಂಡು ಅಕ್ರಮವಾಗಿ ನಿಷೇಧಿತ ಕೊಕೇನ್ ಮಾರಾಟ ಮಾಡುತ್ತಿದ್ದ, ಇಬ್ಬರು ವಿದೇಶಿ ಪ್ರಜೆಗಳನ್ನು ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 6.50 ಲಕ್ಷ ರೂಪಾಯಿ ಮೌಲ್ಯದ 81 ಗ್ರಾಂ ಕೊಕೇನ್ ಹಾಗೂ 2,200 ರೂ. ನಗದು ವಶಪಡಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಏ.3ರಂದು ಹೆಣ್ಣೂರು ಪೊಲೀಸ್ ಠಾಣೆ ಅಧಿಕಾರಿಗಳು ಹಲ್ಲೆಯ ವೈರಲ್ ವಿಡಿಯೋ ಜಾಡು ಹಿಡಿದು ತ್ವರಿತವಾಗಿ ಸಂತ್ರಸ್ತನನ್ನು ಪತ್ತೆಮಾಡಿದ್ದು, ಇದರಿಂದ 05 ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಲ್ಲೆ ಮಾಡಿದ ವ್ಯಕ್ತಿ ಹಾಗೂ ಹಲ್ಲೆಗೊಳಗಾದವ ಇಬ್ಬರೂ ಪ್ರತಿಷ್ಠಿತ ಡೈರಿ ಕಂಪನಿಯ ಉದ್ಯೋಗಿಗಳಾಗಿದ್ದು, ಕೆಲಸದ ಸ್ಥಳದಲ್ಲಿನ ವೈಷಮ್ಯ ಹಾಗೂ ಹಣಕಾಸಿನ ವ್ಯವಹಾರದಿಂದಾಗಿ ಈ ಘಟನೆ ನಡೆದಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದರು.

 

ಲಕ್ಷಾಂತರ ರೂಪಾಯಿ ವಂಚನೆ ಹಗರಣದಲ್ಲಿ ಹಲಸೂರು ಠಾಣೆ ಪೊಲೀಸರು ಓರ್ವ ಮಹಿಳೆ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರು ಪ್ರತಿಷ್ಠಿತ ಕಂಪನಿಗಳ ಪ್ರತಿನಿಧಿಗಳೆಂದು ಹೇಳಿಕೊಂಡು ಚಾರಿಟಬಲ್ ಟ್ರಸ್ಟ್ ಗಳನ್ನು ಸಂಪರ್ಕಿಸಿ ಕೋಟ್ಯಾಂತರ ರೂಪಾಯಿ ಸಿಎಸ್ಆರ್ ಹಣವನ್ನು ದೇಣಿಗೆ ರೂಪದಲ್ಲಿ ನೀಡುವುದಾಗಿ ಹೇಳಿ 10-15 ಲಕ್ಷ ರೂಪಾಯಿ ಹಣವನ್ನು ಪ್ರಕ್ರಿಯೆ ಶುಲ್ಕವಾಗಿ ಪಡೆದು, ವಂಚನೆ ಮಾಡುತ್ತಿದ್ದರು. ಈ ಪ್ರಕರಣದ ತನಿಖೆ ಮುಂದುವರಿದಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

6 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

13 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

14 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago