ವಿದೇಶಿ ಮೂಲದ ಡ್ರಗ್ಸ್ ಸಾಗಾಟಗಾರನ ಬಂಧನ: ಬಂಧಿತನಿಂದ 2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ವಿಭಾಗವು ವಿದೇಶಿ ಮೂಲದ ಡ್ರಗ್ಸ್ ಸಾಗಾಟಗಾರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತನಿಂದ 2 ಕೋಟಿ ಮೌಲ್ಯದ ಎಂಡಿಎಂಎ ಹರಳು, ಬಿಳಿ  ಹರಳು (676 ಗ್ರಾಂ) ಕಂದು ಹರಳು (926 ಗ್ರಾಂ), ಹಳದಿ ಹರಳು (112 ಗ್ರಾಂ) ಹಾಗೂ ಪಿಂಕ್ ಹರಳು (310 ಗ್ರಾಂ) ಸೇರಿದಂತೆ ಒಟ್ಟಾರೆಯಾಗಿ 2024ಗ್ರಾಂ ನಷ್ಟು ವಶಪಡಿಸಿಕೊಂಡಿದ್ದಾರೆ. ಇದರ ಜೊತೆಗೆ ಮೊಬೈಲ್ ಫೋನ್ ಹಾಗೂ ತೂಕದ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.

ಅಕ್ರಮವಾಗಿ ಡ್ರಗ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದೇವನಹಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು ಬಂಧಿಸಿದ್ದಾರೆ. ಇವರಿಂದ 80 ಲಕ್ಷ ರೂಪಾಯಿ ಮೌಲ್ಯದ 850 ಗ್ರಾಂನಷ್ಟು ಕೊಕೇನ್, 2 ಮೊಬೈಲ್, ವಿದ್ಯುನ್ಮಾನ ತೂಕ ಯಂತ್ರ, ಒಂದು ಬ್ಯಾಗ್ ಹಾಗೂ 85 ಜಿಪ್ ಕವರ್ ಗಳನ್ನು ಸಾಕ್ಷಿಯಾಗಿ ವಶಪಡಿಸಿಕೊಂಡಿದ್ದಾರೆ ಎಂದರು.

ಆಟದ ಮೈದಾನಗಳಲ್ಲಿ ಯುವಕರನ್ನು ಗುರಿಯಾಗಿಸಿಕೊಂಡು ಅಕ್ರಮವಾಗಿ ನಿಷೇಧಿತ ಕೊಕೇನ್ ಮಾರಾಟ ಮಾಡುತ್ತಿದ್ದ, ಇಬ್ಬರು ವಿದೇಶಿ ಪ್ರಜೆಗಳನ್ನು ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 6.50 ಲಕ್ಷ ರೂಪಾಯಿ ಮೌಲ್ಯದ 81 ಗ್ರಾಂ ಕೊಕೇನ್ ಹಾಗೂ 2,200 ರೂ. ನಗದು ವಶಪಡಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಏ.3ರಂದು ಹೆಣ್ಣೂರು ಪೊಲೀಸ್ ಠಾಣೆ ಅಧಿಕಾರಿಗಳು ಹಲ್ಲೆಯ ವೈರಲ್ ವಿಡಿಯೋ ಜಾಡು ಹಿಡಿದು ತ್ವರಿತವಾಗಿ ಸಂತ್ರಸ್ತನನ್ನು ಪತ್ತೆಮಾಡಿದ್ದು, ಇದರಿಂದ 05 ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಲ್ಲೆ ಮಾಡಿದ ವ್ಯಕ್ತಿ ಹಾಗೂ ಹಲ್ಲೆಗೊಳಗಾದವ ಇಬ್ಬರೂ ಪ್ರತಿಷ್ಠಿತ ಡೈರಿ ಕಂಪನಿಯ ಉದ್ಯೋಗಿಗಳಾಗಿದ್ದು, ಕೆಲಸದ ಸ್ಥಳದಲ್ಲಿನ ವೈಷಮ್ಯ ಹಾಗೂ ಹಣಕಾಸಿನ ವ್ಯವಹಾರದಿಂದಾಗಿ ಈ ಘಟನೆ ನಡೆದಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದರು.

 

ಲಕ್ಷಾಂತರ ರೂಪಾಯಿ ವಂಚನೆ ಹಗರಣದಲ್ಲಿ ಹಲಸೂರು ಠಾಣೆ ಪೊಲೀಸರು ಓರ್ವ ಮಹಿಳೆ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರು ಪ್ರತಿಷ್ಠಿತ ಕಂಪನಿಗಳ ಪ್ರತಿನಿಧಿಗಳೆಂದು ಹೇಳಿಕೊಂಡು ಚಾರಿಟಬಲ್ ಟ್ರಸ್ಟ್ ಗಳನ್ನು ಸಂಪರ್ಕಿಸಿ ಕೋಟ್ಯಾಂತರ ರೂಪಾಯಿ ಸಿಎಸ್ಆರ್ ಹಣವನ್ನು ದೇಣಿಗೆ ರೂಪದಲ್ಲಿ ನೀಡುವುದಾಗಿ ಹೇಳಿ 10-15 ಲಕ್ಷ ರೂಪಾಯಿ ಹಣವನ್ನು ಪ್ರಕ್ರಿಯೆ ಶುಲ್ಕವಾಗಿ ಪಡೆದು, ವಂಚನೆ ಮಾಡುತ್ತಿದ್ದರು. ಈ ಪ್ರಕರಣದ ತನಿಖೆ ಮುಂದುವರಿದಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

4 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

4 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

16 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

18 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

18 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

19 hours ago