ವಿದ್ಯಾನಿಧಿ ಕಾಲೇಜಿನಲ್ಲಿ “ವಿದ್ಯಾರ್ಥಿಗಳಲ್ಲಿ ಮೌಲ್ಯಗಳ ಜಾಗೃತಿ” ಕಾರ್ಯಕ್ರಮ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳು ಕಲಿಕೆಯ ಹಂತದಲ್ಲೇ ಮೌಲ್ಯಗಳನ್ನು ಬೆಳೆಸಿಕೊಂಡರೆ ಮಾನವೀಯತೆ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಏಜಾಕ್ಸ್ ಕಂಪನಿಯ ಸಿಎಸ್‌ಆರ್ ಅಧಿಕಾರಿ ಮಂಜುನಾಥ್ ಹೇಳಿದರು.

ನಗರದ ವಿದ್ಯಾನಿಧಿ ಕಾಲೇಜಿನಲ್ಲಿ ಶುಕ್ರವಾರ ನಡೆದ “ವಿದ್ಯಾರ್ಥಿಗಳಲ್ಲಿ ಮೌಲ್ಯಗಳ ಜಾಗೃತಿ” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಇತ್ತೀಚಿನ ದಿನದಲ್ಲಿ ವಿದ್ಯಾರ್ಥಿಗಳಲ್ಲಿ ಗುರುಗಳಿಗೆ ತೋರುವ ಗೌರವ ಕಡಿಮೆಯಾಗುತ್ತಿದೆ. ಸಮಾಜದಲ್ಲಿ ಹಿರಿಯರೊಂದಿಗೆ ವರ್ತಿಸುವ ರೀತಿ ಬದಲಾಗುತ್ತಿದೆ. ತಂದೆ-ತಾಯಿಯರೊಂದಿಗೆ ಬೆರೆಯುವಿಕೆ‌ ಕಡಿಮೆಯಾಗುತ್ತಿದೆ. ಬದುಕಿನ‌ಲ್ಲಿ ಪ್ರಗತಿಯೊಂದುವ ಮಾರ್ಗ ಬಿಟ್ಟು, ಬೇರೆ ಬೇರೆ ಮಾರ್ಗಗಳನ್ನು ಆಯ್ಕೆ‌ ಮಾಡುತ್ತಿದ್ದಾರೆ, ದುಷ್ಚಟಗಳಿಗೆ ಬಲಿಯಾಗಿತ್ತಿದ್ದಾರೆ. ಇವೆಲ್ಲವುಗಳನ್ನು ಬಿಟ್ಟು ಸಾಧನೆಯತ್ತ ಸಾಗಬೇಕಾಗಿದೆ. ಕಾಲೇಜಿಗೆ ಸೇರಿದ ಉದ್ದೇಶ ಮರೆಯದೆ ಗುರಿಗಳನ್ನು ಬಲ‌ಪಡಿಸಬೇಕಿದೆ. ನಿರಂತರ ಪ್ರಯತ್ನದಿಂದ ಮುಂದಿನ ದಿನದಲ್ಲಿ ಗುರಿತಲುಪಲು ಸಾಧ್ಯವಾಗುತ್ತದೆ ಎಂದರು.

ವಿದ್ಯಾನಿಧಿ ಕಾಲೇಜಿನ ಉಪನ್ಯಾಸಕ ಬಾಲಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿರುವುದರಿಂದ ಸೈಬರ್ ವಂಚನೆಗೆ ಒಳಗಾಗುವ ಸಾಧ್ಯತೆಗಳಿದೆ. ಹೀಗಾಗಿ ವಿದ್ಯಾರ್ಥಿಗಳು ಹೆಚ್ಚಿನ ಜಾಗೃತರಾಗಬೇಕು. ಪೊಲೀಸ್ ಇಲಾಖೆ ಮಾಹಿತಿ ಪ್ರಕಾರ ಸೈಬರ್ ವಂಚನೆಗೆ ಒಳಗಾದವರಲ್ಲಿ ಹೆಚ್ಚು ಶಿಕ್ಷಣವಂತರೆ ಎಂಬುದು ಆಶ್ಚರ್ಯದ ಸಂಗತಿ. ಬ್ಯಾಂಕ್ ಗೆ ಸಂಬಂಧಿಸಿದ ಯಾವುದೇ ಕರೆಗಳು ಬಂದರೆ ಎಚ್ಚರವಹಿಸಿ. ಒಟಿಪಿಗಳನ್ನು ನೀಡಬೇಡಿ. ಸೈಬರ್ ವಂಚನೆಗೆ ಒಳಗಾಗಿ, ಹಣ ಕಳೆದುಕೊಂಡರೆ ಕೂಡಲೇ 1930 ಕರೆ ಮಾಡಿ ದೂರು ದಾಖಲಿಸಿ. ಯಾವುದೇ ಆನ್ಲೈನ್ ಹಣದ ಜಾಲಗಳಿಗೆ ಒಳಪಡದೆ ಎಚ್ಚರವಹಿಸಿ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಗಿರೀಶ್, ದಿನೇಶ್ ಇದ್ದರು.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

8 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

8 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

9 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

11 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

18 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

18 hours ago