ವಿದ್ಯಾನಿಧಿ ಕಾಲೇಜಿನಲ್ಲಿ “ವಿದ್ಯಾರ್ಥಿಗಳಲ್ಲಿ ಮೌಲ್ಯಗಳ ಜಾಗೃತಿ” ಕಾರ್ಯಕ್ರಮ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳು ಕಲಿಕೆಯ ಹಂತದಲ್ಲೇ ಮೌಲ್ಯಗಳನ್ನು ಬೆಳೆಸಿಕೊಂಡರೆ ಮಾನವೀಯತೆ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಏಜಾಕ್ಸ್ ಕಂಪನಿಯ ಸಿಎಸ್‌ಆರ್ ಅಧಿಕಾರಿ ಮಂಜುನಾಥ್ ಹೇಳಿದರು.

ನಗರದ ವಿದ್ಯಾನಿಧಿ ಕಾಲೇಜಿನಲ್ಲಿ ಶುಕ್ರವಾರ ನಡೆದ “ವಿದ್ಯಾರ್ಥಿಗಳಲ್ಲಿ ಮೌಲ್ಯಗಳ ಜಾಗೃತಿ” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಇತ್ತೀಚಿನ ದಿನದಲ್ಲಿ ವಿದ್ಯಾರ್ಥಿಗಳಲ್ಲಿ ಗುರುಗಳಿಗೆ ತೋರುವ ಗೌರವ ಕಡಿಮೆಯಾಗುತ್ತಿದೆ. ಸಮಾಜದಲ್ಲಿ ಹಿರಿಯರೊಂದಿಗೆ ವರ್ತಿಸುವ ರೀತಿ ಬದಲಾಗುತ್ತಿದೆ. ತಂದೆ-ತಾಯಿಯರೊಂದಿಗೆ ಬೆರೆಯುವಿಕೆ‌ ಕಡಿಮೆಯಾಗುತ್ತಿದೆ. ಬದುಕಿನ‌ಲ್ಲಿ ಪ್ರಗತಿಯೊಂದುವ ಮಾರ್ಗ ಬಿಟ್ಟು, ಬೇರೆ ಬೇರೆ ಮಾರ್ಗಗಳನ್ನು ಆಯ್ಕೆ‌ ಮಾಡುತ್ತಿದ್ದಾರೆ, ದುಷ್ಚಟಗಳಿಗೆ ಬಲಿಯಾಗಿತ್ತಿದ್ದಾರೆ. ಇವೆಲ್ಲವುಗಳನ್ನು ಬಿಟ್ಟು ಸಾಧನೆಯತ್ತ ಸಾಗಬೇಕಾಗಿದೆ. ಕಾಲೇಜಿಗೆ ಸೇರಿದ ಉದ್ದೇಶ ಮರೆಯದೆ ಗುರಿಗಳನ್ನು ಬಲ‌ಪಡಿಸಬೇಕಿದೆ. ನಿರಂತರ ಪ್ರಯತ್ನದಿಂದ ಮುಂದಿನ ದಿನದಲ್ಲಿ ಗುರಿತಲುಪಲು ಸಾಧ್ಯವಾಗುತ್ತದೆ ಎಂದರು.

ವಿದ್ಯಾನಿಧಿ ಕಾಲೇಜಿನ ಉಪನ್ಯಾಸಕ ಬಾಲಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿರುವುದರಿಂದ ಸೈಬರ್ ವಂಚನೆಗೆ ಒಳಗಾಗುವ ಸಾಧ್ಯತೆಗಳಿದೆ. ಹೀಗಾಗಿ ವಿದ್ಯಾರ್ಥಿಗಳು ಹೆಚ್ಚಿನ ಜಾಗೃತರಾಗಬೇಕು. ಪೊಲೀಸ್ ಇಲಾಖೆ ಮಾಹಿತಿ ಪ್ರಕಾರ ಸೈಬರ್ ವಂಚನೆಗೆ ಒಳಗಾದವರಲ್ಲಿ ಹೆಚ್ಚು ಶಿಕ್ಷಣವಂತರೆ ಎಂಬುದು ಆಶ್ಚರ್ಯದ ಸಂಗತಿ. ಬ್ಯಾಂಕ್ ಗೆ ಸಂಬಂಧಿಸಿದ ಯಾವುದೇ ಕರೆಗಳು ಬಂದರೆ ಎಚ್ಚರವಹಿಸಿ. ಒಟಿಪಿಗಳನ್ನು ನೀಡಬೇಡಿ. ಸೈಬರ್ ವಂಚನೆಗೆ ಒಳಗಾಗಿ, ಹಣ ಕಳೆದುಕೊಂಡರೆ ಕೂಡಲೇ 1930 ಕರೆ ಮಾಡಿ ದೂರು ದಾಖಲಿಸಿ. ಯಾವುದೇ ಆನ್ಲೈನ್ ಹಣದ ಜಾಲಗಳಿಗೆ ಒಳಪಡದೆ ಎಚ್ಚರವಹಿಸಿ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಗಿರೀಶ್, ದಿನೇಶ್ ಇದ್ದರು.

Ramesh Babu

Journalist

Recent Posts

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

5 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

16 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

20 hours ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago

ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣ ಬೇಡ- ತಹಶೀಲ್ದಾರ್ ಮಲ್ಲಪ್ಪಗೆ ರೈತರ ಮನವಿ

ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…

2 days ago