ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳು ಕಲಿಕೆಯ ಹಂತದಲ್ಲೇ ಮೌಲ್ಯಗಳನ್ನು ಬೆಳೆಸಿಕೊಂಡರೆ ಮಾನವೀಯತೆ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಏಜಾಕ್ಸ್ ಕಂಪನಿಯ ಸಿಎಸ್ಆರ್ ಅಧಿಕಾರಿ ಮಂಜುನಾಥ್ ಹೇಳಿದರು.
ನಗರದ ವಿದ್ಯಾನಿಧಿ ಕಾಲೇಜಿನಲ್ಲಿ ಶುಕ್ರವಾರ ನಡೆದ “ವಿದ್ಯಾರ್ಥಿಗಳಲ್ಲಿ ಮೌಲ್ಯಗಳ ಜಾಗೃತಿ” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಇತ್ತೀಚಿನ ದಿನದಲ್ಲಿ ವಿದ್ಯಾರ್ಥಿಗಳಲ್ಲಿ ಗುರುಗಳಿಗೆ ತೋರುವ ಗೌರವ ಕಡಿಮೆಯಾಗುತ್ತಿದೆ. ಸಮಾಜದಲ್ಲಿ ಹಿರಿಯರೊಂದಿಗೆ ವರ್ತಿಸುವ ರೀತಿ ಬದಲಾಗುತ್ತಿದೆ. ತಂದೆ-ತಾಯಿಯರೊಂದಿಗೆ ಬೆರೆಯುವಿಕೆ ಕಡಿಮೆಯಾಗುತ್ತಿದೆ. ಬದುಕಿನಲ್ಲಿ ಪ್ರಗತಿಯೊಂದುವ ಮಾರ್ಗ ಬಿಟ್ಟು, ಬೇರೆ ಬೇರೆ ಮಾರ್ಗಗಳನ್ನು ಆಯ್ಕೆ ಮಾಡುತ್ತಿದ್ದಾರೆ, ದುಷ್ಚಟಗಳಿಗೆ ಬಲಿಯಾಗಿತ್ತಿದ್ದಾರೆ. ಇವೆಲ್ಲವುಗಳನ್ನು ಬಿಟ್ಟು ಸಾಧನೆಯತ್ತ ಸಾಗಬೇಕಾಗಿದೆ. ಕಾಲೇಜಿಗೆ ಸೇರಿದ ಉದ್ದೇಶ ಮರೆಯದೆ ಗುರಿಗಳನ್ನು ಬಲಪಡಿಸಬೇಕಿದೆ. ನಿರಂತರ ಪ್ರಯತ್ನದಿಂದ ಮುಂದಿನ ದಿನದಲ್ಲಿ ಗುರಿತಲುಪಲು ಸಾಧ್ಯವಾಗುತ್ತದೆ ಎಂದರು.
ವಿದ್ಯಾನಿಧಿ ಕಾಲೇಜಿನ ಉಪನ್ಯಾಸಕ ಬಾಲಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿರುವುದರಿಂದ ಸೈಬರ್ ವಂಚನೆಗೆ ಒಳಗಾಗುವ ಸಾಧ್ಯತೆಗಳಿದೆ. ಹೀಗಾಗಿ ವಿದ್ಯಾರ್ಥಿಗಳು ಹೆಚ್ಚಿನ ಜಾಗೃತರಾಗಬೇಕು. ಪೊಲೀಸ್ ಇಲಾಖೆ ಮಾಹಿತಿ ಪ್ರಕಾರ ಸೈಬರ್ ವಂಚನೆಗೆ ಒಳಗಾದವರಲ್ಲಿ ಹೆಚ್ಚು ಶಿಕ್ಷಣವಂತರೆ ಎಂಬುದು ಆಶ್ಚರ್ಯದ ಸಂಗತಿ. ಬ್ಯಾಂಕ್ ಗೆ ಸಂಬಂಧಿಸಿದ ಯಾವುದೇ ಕರೆಗಳು ಬಂದರೆ ಎಚ್ಚರವಹಿಸಿ. ಒಟಿಪಿಗಳನ್ನು ನೀಡಬೇಡಿ. ಸೈಬರ್ ವಂಚನೆಗೆ ಒಳಗಾಗಿ, ಹಣ ಕಳೆದುಕೊಂಡರೆ ಕೂಡಲೇ 1930 ಕರೆ ಮಾಡಿ ದೂರು ದಾಖಲಿಸಿ. ಯಾವುದೇ ಆನ್ಲೈನ್ ಹಣದ ಜಾಲಗಳಿಗೆ ಒಳಪಡದೆ ಎಚ್ಚರವಹಿಸಿ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಗಿರೀಶ್, ದಿನೇಶ್ ಇದ್ದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…