ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳು ಕಲಿಕೆಯ ಹಂತದಲ್ಲೇ ಮೌಲ್ಯಗಳನ್ನು ಬೆಳೆಸಿಕೊಂಡರೆ ಮಾನವೀಯತೆ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಏಜಾಕ್ಸ್ ಕಂಪನಿಯ ಸಿಎಸ್ಆರ್ ಅಧಿಕಾರಿ ಮಂಜುನಾಥ್ ಹೇಳಿದರು.
ನಗರದ ವಿದ್ಯಾನಿಧಿ ಕಾಲೇಜಿನಲ್ಲಿ ಶುಕ್ರವಾರ ನಡೆದ “ವಿದ್ಯಾರ್ಥಿಗಳಲ್ಲಿ ಮೌಲ್ಯಗಳ ಜಾಗೃತಿ” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಇತ್ತೀಚಿನ ದಿನದಲ್ಲಿ ವಿದ್ಯಾರ್ಥಿಗಳಲ್ಲಿ ಗುರುಗಳಿಗೆ ತೋರುವ ಗೌರವ ಕಡಿಮೆಯಾಗುತ್ತಿದೆ. ಸಮಾಜದಲ್ಲಿ ಹಿರಿಯರೊಂದಿಗೆ ವರ್ತಿಸುವ ರೀತಿ ಬದಲಾಗುತ್ತಿದೆ. ತಂದೆ-ತಾಯಿಯರೊಂದಿಗೆ ಬೆರೆಯುವಿಕೆ ಕಡಿಮೆಯಾಗುತ್ತಿದೆ. ಬದುಕಿನಲ್ಲಿ ಪ್ರಗತಿಯೊಂದುವ ಮಾರ್ಗ ಬಿಟ್ಟು, ಬೇರೆ ಬೇರೆ ಮಾರ್ಗಗಳನ್ನು ಆಯ್ಕೆ ಮಾಡುತ್ತಿದ್ದಾರೆ, ದುಷ್ಚಟಗಳಿಗೆ ಬಲಿಯಾಗಿತ್ತಿದ್ದಾರೆ. ಇವೆಲ್ಲವುಗಳನ್ನು ಬಿಟ್ಟು ಸಾಧನೆಯತ್ತ ಸಾಗಬೇಕಾಗಿದೆ. ಕಾಲೇಜಿಗೆ ಸೇರಿದ ಉದ್ದೇಶ ಮರೆಯದೆ ಗುರಿಗಳನ್ನು ಬಲಪಡಿಸಬೇಕಿದೆ. ನಿರಂತರ ಪ್ರಯತ್ನದಿಂದ ಮುಂದಿನ ದಿನದಲ್ಲಿ ಗುರಿತಲುಪಲು ಸಾಧ್ಯವಾಗುತ್ತದೆ ಎಂದರು.
ವಿದ್ಯಾನಿಧಿ ಕಾಲೇಜಿನ ಉಪನ್ಯಾಸಕ ಬಾಲಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿರುವುದರಿಂದ ಸೈಬರ್ ವಂಚನೆಗೆ ಒಳಗಾಗುವ ಸಾಧ್ಯತೆಗಳಿದೆ. ಹೀಗಾಗಿ ವಿದ್ಯಾರ್ಥಿಗಳು ಹೆಚ್ಚಿನ ಜಾಗೃತರಾಗಬೇಕು. ಪೊಲೀಸ್ ಇಲಾಖೆ ಮಾಹಿತಿ ಪ್ರಕಾರ ಸೈಬರ್ ವಂಚನೆಗೆ ಒಳಗಾದವರಲ್ಲಿ ಹೆಚ್ಚು ಶಿಕ್ಷಣವಂತರೆ ಎಂಬುದು ಆಶ್ಚರ್ಯದ ಸಂಗತಿ. ಬ್ಯಾಂಕ್ ಗೆ ಸಂಬಂಧಿಸಿದ ಯಾವುದೇ ಕರೆಗಳು ಬಂದರೆ ಎಚ್ಚರವಹಿಸಿ. ಒಟಿಪಿಗಳನ್ನು ನೀಡಬೇಡಿ. ಸೈಬರ್ ವಂಚನೆಗೆ ಒಳಗಾಗಿ, ಹಣ ಕಳೆದುಕೊಂಡರೆ ಕೂಡಲೇ 1930 ಕರೆ ಮಾಡಿ ದೂರು ದಾಖಲಿಸಿ. ಯಾವುದೇ ಆನ್ಲೈನ್ ಹಣದ ಜಾಲಗಳಿಗೆ ಒಳಪಡದೆ ಎಚ್ಚರವಹಿಸಿ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಗಿರೀಶ್, ದಿನೇಶ್ ಇದ್ದರು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…