ವಿದ್ಯಾನಿಧಿ ಕಾಲೇಜಿನಲ್ಲಿ “ವಿದ್ಯಾರ್ಥಿಗಳಲ್ಲಿ ಮೌಲ್ಯಗಳ ಜಾಗೃತಿ” ಕಾರ್ಯಕ್ರಮ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳು ಕಲಿಕೆಯ ಹಂತದಲ್ಲೇ ಮೌಲ್ಯಗಳನ್ನು ಬೆಳೆಸಿಕೊಂಡರೆ ಮಾನವೀಯತೆ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಏಜಾಕ್ಸ್ ಕಂಪನಿಯ ಸಿಎಸ್‌ಆರ್ ಅಧಿಕಾರಿ ಮಂಜುನಾಥ್ ಹೇಳಿದರು.

ನಗರದ ವಿದ್ಯಾನಿಧಿ ಕಾಲೇಜಿನಲ್ಲಿ ಶುಕ್ರವಾರ ನಡೆದ “ವಿದ್ಯಾರ್ಥಿಗಳಲ್ಲಿ ಮೌಲ್ಯಗಳ ಜಾಗೃತಿ” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಇತ್ತೀಚಿನ ದಿನದಲ್ಲಿ ವಿದ್ಯಾರ್ಥಿಗಳಲ್ಲಿ ಗುರುಗಳಿಗೆ ತೋರುವ ಗೌರವ ಕಡಿಮೆಯಾಗುತ್ತಿದೆ. ಸಮಾಜದಲ್ಲಿ ಹಿರಿಯರೊಂದಿಗೆ ವರ್ತಿಸುವ ರೀತಿ ಬದಲಾಗುತ್ತಿದೆ. ತಂದೆ-ತಾಯಿಯರೊಂದಿಗೆ ಬೆರೆಯುವಿಕೆ‌ ಕಡಿಮೆಯಾಗುತ್ತಿದೆ. ಬದುಕಿನ‌ಲ್ಲಿ ಪ್ರಗತಿಯೊಂದುವ ಮಾರ್ಗ ಬಿಟ್ಟು, ಬೇರೆ ಬೇರೆ ಮಾರ್ಗಗಳನ್ನು ಆಯ್ಕೆ‌ ಮಾಡುತ್ತಿದ್ದಾರೆ, ದುಷ್ಚಟಗಳಿಗೆ ಬಲಿಯಾಗಿತ್ತಿದ್ದಾರೆ. ಇವೆಲ್ಲವುಗಳನ್ನು ಬಿಟ್ಟು ಸಾಧನೆಯತ್ತ ಸಾಗಬೇಕಾಗಿದೆ. ಕಾಲೇಜಿಗೆ ಸೇರಿದ ಉದ್ದೇಶ ಮರೆಯದೆ ಗುರಿಗಳನ್ನು ಬಲ‌ಪಡಿಸಬೇಕಿದೆ. ನಿರಂತರ ಪ್ರಯತ್ನದಿಂದ ಮುಂದಿನ ದಿನದಲ್ಲಿ ಗುರಿತಲುಪಲು ಸಾಧ್ಯವಾಗುತ್ತದೆ ಎಂದರು.

ವಿದ್ಯಾನಿಧಿ ಕಾಲೇಜಿನ ಉಪನ್ಯಾಸಕ ಬಾಲಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿರುವುದರಿಂದ ಸೈಬರ್ ವಂಚನೆಗೆ ಒಳಗಾಗುವ ಸಾಧ್ಯತೆಗಳಿದೆ. ಹೀಗಾಗಿ ವಿದ್ಯಾರ್ಥಿಗಳು ಹೆಚ್ಚಿನ ಜಾಗೃತರಾಗಬೇಕು. ಪೊಲೀಸ್ ಇಲಾಖೆ ಮಾಹಿತಿ ಪ್ರಕಾರ ಸೈಬರ್ ವಂಚನೆಗೆ ಒಳಗಾದವರಲ್ಲಿ ಹೆಚ್ಚು ಶಿಕ್ಷಣವಂತರೆ ಎಂಬುದು ಆಶ್ಚರ್ಯದ ಸಂಗತಿ. ಬ್ಯಾಂಕ್ ಗೆ ಸಂಬಂಧಿಸಿದ ಯಾವುದೇ ಕರೆಗಳು ಬಂದರೆ ಎಚ್ಚರವಹಿಸಿ. ಒಟಿಪಿಗಳನ್ನು ನೀಡಬೇಡಿ. ಸೈಬರ್ ವಂಚನೆಗೆ ಒಳಗಾಗಿ, ಹಣ ಕಳೆದುಕೊಂಡರೆ ಕೂಡಲೇ 1930 ಕರೆ ಮಾಡಿ ದೂರು ದಾಖಲಿಸಿ. ಯಾವುದೇ ಆನ್ಲೈನ್ ಹಣದ ಜಾಲಗಳಿಗೆ ಒಳಪಡದೆ ಎಚ್ಚರವಹಿಸಿ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಗಿರೀಶ್, ದಿನೇಶ್ ಇದ್ದರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

12 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

14 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

14 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

14 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

16 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

20 hours ago