ವಿದ್ಯಾನಿಧಿ ಕಾಲೇಜಿನಲ್ಲಿ “ವಿದ್ಯಾರ್ಥಿಗಳಲ್ಲಿ ಮೌಲ್ಯಗಳ ಜಾಗೃತಿ” ಕಾರ್ಯಕ್ರಮ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳು ಕಲಿಕೆಯ ಹಂತದಲ್ಲೇ ಮೌಲ್ಯಗಳನ್ನು ಬೆಳೆಸಿಕೊಂಡರೆ ಮಾನವೀಯತೆ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಏಜಾಕ್ಸ್ ಕಂಪನಿಯ ಸಿಎಸ್‌ಆರ್ ಅಧಿಕಾರಿ ಮಂಜುನಾಥ್ ಹೇಳಿದರು.

ನಗರದ ವಿದ್ಯಾನಿಧಿ ಕಾಲೇಜಿನಲ್ಲಿ ಶುಕ್ರವಾರ ನಡೆದ “ವಿದ್ಯಾರ್ಥಿಗಳಲ್ಲಿ ಮೌಲ್ಯಗಳ ಜಾಗೃತಿ” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಇತ್ತೀಚಿನ ದಿನದಲ್ಲಿ ವಿದ್ಯಾರ್ಥಿಗಳಲ್ಲಿ ಗುರುಗಳಿಗೆ ತೋರುವ ಗೌರವ ಕಡಿಮೆಯಾಗುತ್ತಿದೆ. ಸಮಾಜದಲ್ಲಿ ಹಿರಿಯರೊಂದಿಗೆ ವರ್ತಿಸುವ ರೀತಿ ಬದಲಾಗುತ್ತಿದೆ. ತಂದೆ-ತಾಯಿಯರೊಂದಿಗೆ ಬೆರೆಯುವಿಕೆ‌ ಕಡಿಮೆಯಾಗುತ್ತಿದೆ. ಬದುಕಿನ‌ಲ್ಲಿ ಪ್ರಗತಿಯೊಂದುವ ಮಾರ್ಗ ಬಿಟ್ಟು, ಬೇರೆ ಬೇರೆ ಮಾರ್ಗಗಳನ್ನು ಆಯ್ಕೆ‌ ಮಾಡುತ್ತಿದ್ದಾರೆ, ದುಷ್ಚಟಗಳಿಗೆ ಬಲಿಯಾಗಿತ್ತಿದ್ದಾರೆ. ಇವೆಲ್ಲವುಗಳನ್ನು ಬಿಟ್ಟು ಸಾಧನೆಯತ್ತ ಸಾಗಬೇಕಾಗಿದೆ. ಕಾಲೇಜಿಗೆ ಸೇರಿದ ಉದ್ದೇಶ ಮರೆಯದೆ ಗುರಿಗಳನ್ನು ಬಲ‌ಪಡಿಸಬೇಕಿದೆ. ನಿರಂತರ ಪ್ರಯತ್ನದಿಂದ ಮುಂದಿನ ದಿನದಲ್ಲಿ ಗುರಿತಲುಪಲು ಸಾಧ್ಯವಾಗುತ್ತದೆ ಎಂದರು.

ವಿದ್ಯಾನಿಧಿ ಕಾಲೇಜಿನ ಉಪನ್ಯಾಸಕ ಬಾಲಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿರುವುದರಿಂದ ಸೈಬರ್ ವಂಚನೆಗೆ ಒಳಗಾಗುವ ಸಾಧ್ಯತೆಗಳಿದೆ. ಹೀಗಾಗಿ ವಿದ್ಯಾರ್ಥಿಗಳು ಹೆಚ್ಚಿನ ಜಾಗೃತರಾಗಬೇಕು. ಪೊಲೀಸ್ ಇಲಾಖೆ ಮಾಹಿತಿ ಪ್ರಕಾರ ಸೈಬರ್ ವಂಚನೆಗೆ ಒಳಗಾದವರಲ್ಲಿ ಹೆಚ್ಚು ಶಿಕ್ಷಣವಂತರೆ ಎಂಬುದು ಆಶ್ಚರ್ಯದ ಸಂಗತಿ. ಬ್ಯಾಂಕ್ ಗೆ ಸಂಬಂಧಿಸಿದ ಯಾವುದೇ ಕರೆಗಳು ಬಂದರೆ ಎಚ್ಚರವಹಿಸಿ. ಒಟಿಪಿಗಳನ್ನು ನೀಡಬೇಡಿ. ಸೈಬರ್ ವಂಚನೆಗೆ ಒಳಗಾಗಿ, ಹಣ ಕಳೆದುಕೊಂಡರೆ ಕೂಡಲೇ 1930 ಕರೆ ಮಾಡಿ ದೂರು ದಾಖಲಿಸಿ. ಯಾವುದೇ ಆನ್ಲೈನ್ ಹಣದ ಜಾಲಗಳಿಗೆ ಒಳಪಡದೆ ಎಚ್ಚರವಹಿಸಿ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಗಿರೀಶ್, ದಿನೇಶ್ ಇದ್ದರು.

Ramesh Babu

Journalist

Recent Posts

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

5 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

16 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

21 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago