ವಿದ್ಯಾರ್ಜನೆಗಾಗಿ ಕಾದಿರುವ ಪುಟಾಣಿಗಳಿಗೆ ಅಕ್ಷರಾಭ್ಯಾಸ: ಮಕ್ಕಳ ಪಾದಮುದ್ರೆ ತೆಗೆದುಕೊಳ್ಳುವ ಮೂಲಕ ವಿಶೇಷವಾಗಿ ಶಾಲೆಗೆ ಬರಮಾಡಿಕೊಂಡ ನ್ಯಾಷನಲ್‌ ಪ್ರೈಡ್ ಶಾಲೆ

ವಿದ್ಯಾರ್ಜನೆಗಾಗಿ ಕಾದಿರುವ ಪುಟಾಣಿಗಳಿಗೆ ಶಾಲೆಯ ಬಾಗಿಲು ತೆರೆದಿದೆ, ತೊದಲು ನುಡಿಯುತ್ತಿದ್ದ ಮಕ್ಕಳು ಅಕ್ಷರಗಳ ಉಚ್ಛಾರಣೆ, ಬರೆಯಲು ಪ್ರಾರಂಭಿಸಿದ್ದಾರೆ. ಈ ಹಿನ್ನೆಲೆ ಇಂದು ನಗರದ ನ್ಯಾಷನಲ್ ಪ್ರೈಡ್ ಶಾಲೆಯ ಮೊದಲ ದಿನವಾದ ಇಂದು ಶಾಸ್ತ್ರಬದ್ದವಾಗಿಯೇ ಆರಂಭಿಸಲಾಗಿದೆ.

ನೂತನವಾಗಿ ಶಾಲೆಗೆ ದಾಖಲಾದ ಸಾಮೂಹಿಕ ಅಕ್ಷರಾಭ್ಯಾಸದಲ್ಲಿ ಭಾಗವಹಿಸಿ ಜ್ಞಾನದ ದೇವತೆ ಸ್ವರತಿಯ ಅಶೀರ್ವಾದದೊಂದಿಗೆ ವಿದ್ಯೆ ಕಲಿಕೆಯನ್ನ ಆರಂಭಿಸಿದರು.

ಸಾಮಾನ್ಯವಾಗಿ ಶೃಂಗೇರಿಯ ಶಾರದಾಂಬೆಯ ಸನ್ನಿಧಿಯಲ್ಲಿ ತಮ್ಮ ಮಕ್ಕಳ ಅಕ್ಷರಾಭ್ಯಾಸವನ್ನ ಮಾಡುತ್ತಾರೆ, ಈ ಪರಂಪರೆಯನ್ನೇ ಈ ಶಾಲೆಯಲ್ಲಿ ಪ್ರತಿಯೊಂದು ಮಗುವಿನ ಅಕ್ಷರಾಭ್ಯಾಸವನ್ನ ಸಾಮೂಹಿಕವಾಗಿ ಮಾಡಲಾಯಿತು.

ಮೊದಲ ಅಕ್ಷರವಾಗಿ ಮಕ್ಕಳು ಕನ್ನಡ ವರ್ಣಮಾಲೆಯ ಅ ಆ ಇ ಈ ನ್ನು ಸ್ಲೇಟ್ ನಲ್ಲಿ ಬರೆದು ಶಾಸ್ತ್ರೋಕ್ತವಾಗಿ ಮೊದಲ ದಿನ ಆರಂಭಿಸಿದರು. ಮಕ್ಕಳ ಜೊತೆಯಲ್ಲಿ ಬಂದ ಪೋಷಕರು ಅಕ್ಷರಭ್ಯಾಸದಲ್ಲಿ ಭಾಗಿಯಾಗಿದ್ದರ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.

ಶಾಲೆಗೆ ಬಂದ ಮಕ್ಕಳು ಮೊದಲ ಬಾರಿಗೆ ತರಗತಿಯೊಳಗೆ ಹೆಜ್ಜೆ ಇಡುತ್ತಿದ್ದಾರೆ, ಈ ದಿನವನ್ನ ಪೋಷಕರಿಗೆ ಸದಾ ನೆನೆಪಿನ ದಿನವನ್ನಾಗಿ ಮಾಡಲು ನ್ಯಾಷನಲ್ ಪ್ರೈಡ್ ಶಾಲೆ ಮುಂದಾಗಿದೆ, ಮಕ್ಕಳು ತರಗತಿಯೊಳಗೆ ಇಡುತ್ತಿರುವ ಮೊದಲ ಹೆಜ್ಜೆಯ ಫೂಟ್ ಪ್ರಿಂಟ್ ತೆಗದುಕೊಂಡು ತರಗತಿಯಲ್ಲಿ ದಾಖಲು ಮಾಡಲಾಯಿತು.

ಪುರಾಣಗಳಲ್ಲಿ ವಾಲ್ಮೀಕಿ ಮಹರ್ಷಿಗಳು ಲವಕುಶರಿಗೆ ಅಕ್ಷರಭ್ಯಾಸವನ್ನು ಮಾಡಿಸುವ ಮೂಲಕ ವಿದ್ಯೆಯನ್ನು ಪ್ರಾರಂಭಿಸಿದ್ದರು ಎಂಬ ಉಲ್ಲೇಖವಿದೆ. ಸರ್ವಧರ್ಮ ಸಮನ್ವಯತೆ ಸಾರುವ ನಿಟ್ಟಿನಲ್ಲಿ ಈ ಶಾಲೆ ಮುಂದಿದೆ. ಅದೇರೀತಿ ಶಿಸ್ತು ಮತ್ತು ಸಮಯ ಪಾಲನೆ ಶಾಲೆಯ ಪ್ರಮುಖ ಆದ್ಯತೆಯಾಗಿದೆ.

Ramesh Babu

Journalist

Recent Posts

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

5 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

6 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

19 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

19 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

20 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

1 day ago