ವಿದ್ಯಾರ್ಜನೆಗಾಗಿ ಕಾದಿರುವ ಪುಟಾಣಿಗಳಿಗೆ ಅಕ್ಷರಾಭ್ಯಾಸ: ಮಕ್ಕಳ ಪಾದಮುದ್ರೆ ತೆಗೆದುಕೊಳ್ಳುವ ಮೂಲಕ ವಿಶೇಷವಾಗಿ ಶಾಲೆಗೆ ಬರಮಾಡಿಕೊಂಡ ನ್ಯಾಷನಲ್‌ ಪ್ರೈಡ್ ಶಾಲೆ

ವಿದ್ಯಾರ್ಜನೆಗಾಗಿ ಕಾದಿರುವ ಪುಟಾಣಿಗಳಿಗೆ ಶಾಲೆಯ ಬಾಗಿಲು ತೆರೆದಿದೆ, ತೊದಲು ನುಡಿಯುತ್ತಿದ್ದ ಮಕ್ಕಳು ಅಕ್ಷರಗಳ ಉಚ್ಛಾರಣೆ, ಬರೆಯಲು ಪ್ರಾರಂಭಿಸಿದ್ದಾರೆ. ಈ ಹಿನ್ನೆಲೆ ಇಂದು ನಗರದ ನ್ಯಾಷನಲ್ ಪ್ರೈಡ್ ಶಾಲೆಯ ಮೊದಲ ದಿನವಾದ ಇಂದು ಶಾಸ್ತ್ರಬದ್ದವಾಗಿಯೇ ಆರಂಭಿಸಲಾಗಿದೆ.

ನೂತನವಾಗಿ ಶಾಲೆಗೆ ದಾಖಲಾದ ಸಾಮೂಹಿಕ ಅಕ್ಷರಾಭ್ಯಾಸದಲ್ಲಿ ಭಾಗವಹಿಸಿ ಜ್ಞಾನದ ದೇವತೆ ಸ್ವರತಿಯ ಅಶೀರ್ವಾದದೊಂದಿಗೆ ವಿದ್ಯೆ ಕಲಿಕೆಯನ್ನ ಆರಂಭಿಸಿದರು.

ಸಾಮಾನ್ಯವಾಗಿ ಶೃಂಗೇರಿಯ ಶಾರದಾಂಬೆಯ ಸನ್ನಿಧಿಯಲ್ಲಿ ತಮ್ಮ ಮಕ್ಕಳ ಅಕ್ಷರಾಭ್ಯಾಸವನ್ನ ಮಾಡುತ್ತಾರೆ, ಈ ಪರಂಪರೆಯನ್ನೇ ಈ ಶಾಲೆಯಲ್ಲಿ ಪ್ರತಿಯೊಂದು ಮಗುವಿನ ಅಕ್ಷರಾಭ್ಯಾಸವನ್ನ ಸಾಮೂಹಿಕವಾಗಿ ಮಾಡಲಾಯಿತು.

ಮೊದಲ ಅಕ್ಷರವಾಗಿ ಮಕ್ಕಳು ಕನ್ನಡ ವರ್ಣಮಾಲೆಯ ಅ ಆ ಇ ಈ ನ್ನು ಸ್ಲೇಟ್ ನಲ್ಲಿ ಬರೆದು ಶಾಸ್ತ್ರೋಕ್ತವಾಗಿ ಮೊದಲ ದಿನ ಆರಂಭಿಸಿದರು. ಮಕ್ಕಳ ಜೊತೆಯಲ್ಲಿ ಬಂದ ಪೋಷಕರು ಅಕ್ಷರಭ್ಯಾಸದಲ್ಲಿ ಭಾಗಿಯಾಗಿದ್ದರ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.

ಶಾಲೆಗೆ ಬಂದ ಮಕ್ಕಳು ಮೊದಲ ಬಾರಿಗೆ ತರಗತಿಯೊಳಗೆ ಹೆಜ್ಜೆ ಇಡುತ್ತಿದ್ದಾರೆ, ಈ ದಿನವನ್ನ ಪೋಷಕರಿಗೆ ಸದಾ ನೆನೆಪಿನ ದಿನವನ್ನಾಗಿ ಮಾಡಲು ನ್ಯಾಷನಲ್ ಪ್ರೈಡ್ ಶಾಲೆ ಮುಂದಾಗಿದೆ, ಮಕ್ಕಳು ತರಗತಿಯೊಳಗೆ ಇಡುತ್ತಿರುವ ಮೊದಲ ಹೆಜ್ಜೆಯ ಫೂಟ್ ಪ್ರಿಂಟ್ ತೆಗದುಕೊಂಡು ತರಗತಿಯಲ್ಲಿ ದಾಖಲು ಮಾಡಲಾಯಿತು.

ಪುರಾಣಗಳಲ್ಲಿ ವಾಲ್ಮೀಕಿ ಮಹರ್ಷಿಗಳು ಲವಕುಶರಿಗೆ ಅಕ್ಷರಭ್ಯಾಸವನ್ನು ಮಾಡಿಸುವ ಮೂಲಕ ವಿದ್ಯೆಯನ್ನು ಪ್ರಾರಂಭಿಸಿದ್ದರು ಎಂಬ ಉಲ್ಲೇಖವಿದೆ. ಸರ್ವಧರ್ಮ ಸಮನ್ವಯತೆ ಸಾರುವ ನಿಟ್ಟಿನಲ್ಲಿ ಈ ಶಾಲೆ ಮುಂದಿದೆ. ಅದೇರೀತಿ ಶಿಸ್ತು ಮತ್ತು ಸಮಯ ಪಾಲನೆ ಶಾಲೆಯ ಪ್ರಮುಖ ಆದ್ಯತೆಯಾಗಿದೆ.

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

12 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

14 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

15 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

24 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 day ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago