ವಿದ್ಯಾರ್ಜನೆಗಾಗಿ ಕಾದಿರುವ ಪುಟಾಣಿಗಳಿಗೆ ಅಕ್ಷರಾಭ್ಯಾಸ: ಮಕ್ಕಳ ಪಾದಮುದ್ರೆ ತೆಗೆದುಕೊಳ್ಳುವ ಮೂಲಕ ವಿಶೇಷವಾಗಿ ಶಾಲೆಗೆ ಬರಮಾಡಿಕೊಂಡ ನ್ಯಾಷನಲ್‌ ಪ್ರೈಡ್ ಶಾಲೆ

ವಿದ್ಯಾರ್ಜನೆಗಾಗಿ ಕಾದಿರುವ ಪುಟಾಣಿಗಳಿಗೆ ಶಾಲೆಯ ಬಾಗಿಲು ತೆರೆದಿದೆ, ತೊದಲು ನುಡಿಯುತ್ತಿದ್ದ ಮಕ್ಕಳು ಅಕ್ಷರಗಳ ಉಚ್ಛಾರಣೆ, ಬರೆಯಲು ಪ್ರಾರಂಭಿಸಿದ್ದಾರೆ. ಈ ಹಿನ್ನೆಲೆ ಇಂದು ನಗರದ ನ್ಯಾಷನಲ್ ಪ್ರೈಡ್ ಶಾಲೆಯ ಮೊದಲ ದಿನವಾದ ಇಂದು ಶಾಸ್ತ್ರಬದ್ದವಾಗಿಯೇ ಆರಂಭಿಸಲಾಗಿದೆ.

ನೂತನವಾಗಿ ಶಾಲೆಗೆ ದಾಖಲಾದ ಸಾಮೂಹಿಕ ಅಕ್ಷರಾಭ್ಯಾಸದಲ್ಲಿ ಭಾಗವಹಿಸಿ ಜ್ಞಾನದ ದೇವತೆ ಸ್ವರತಿಯ ಅಶೀರ್ವಾದದೊಂದಿಗೆ ವಿದ್ಯೆ ಕಲಿಕೆಯನ್ನ ಆರಂಭಿಸಿದರು.

ಸಾಮಾನ್ಯವಾಗಿ ಶೃಂಗೇರಿಯ ಶಾರದಾಂಬೆಯ ಸನ್ನಿಧಿಯಲ್ಲಿ ತಮ್ಮ ಮಕ್ಕಳ ಅಕ್ಷರಾಭ್ಯಾಸವನ್ನ ಮಾಡುತ್ತಾರೆ, ಈ ಪರಂಪರೆಯನ್ನೇ ಈ ಶಾಲೆಯಲ್ಲಿ ಪ್ರತಿಯೊಂದು ಮಗುವಿನ ಅಕ್ಷರಾಭ್ಯಾಸವನ್ನ ಸಾಮೂಹಿಕವಾಗಿ ಮಾಡಲಾಯಿತು.

ಮೊದಲ ಅಕ್ಷರವಾಗಿ ಮಕ್ಕಳು ಕನ್ನಡ ವರ್ಣಮಾಲೆಯ ಅ ಆ ಇ ಈ ನ್ನು ಸ್ಲೇಟ್ ನಲ್ಲಿ ಬರೆದು ಶಾಸ್ತ್ರೋಕ್ತವಾಗಿ ಮೊದಲ ದಿನ ಆರಂಭಿಸಿದರು. ಮಕ್ಕಳ ಜೊತೆಯಲ್ಲಿ ಬಂದ ಪೋಷಕರು ಅಕ್ಷರಭ್ಯಾಸದಲ್ಲಿ ಭಾಗಿಯಾಗಿದ್ದರ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.

ಶಾಲೆಗೆ ಬಂದ ಮಕ್ಕಳು ಮೊದಲ ಬಾರಿಗೆ ತರಗತಿಯೊಳಗೆ ಹೆಜ್ಜೆ ಇಡುತ್ತಿದ್ದಾರೆ, ಈ ದಿನವನ್ನ ಪೋಷಕರಿಗೆ ಸದಾ ನೆನೆಪಿನ ದಿನವನ್ನಾಗಿ ಮಾಡಲು ನ್ಯಾಷನಲ್ ಪ್ರೈಡ್ ಶಾಲೆ ಮುಂದಾಗಿದೆ, ಮಕ್ಕಳು ತರಗತಿಯೊಳಗೆ ಇಡುತ್ತಿರುವ ಮೊದಲ ಹೆಜ್ಜೆಯ ಫೂಟ್ ಪ್ರಿಂಟ್ ತೆಗದುಕೊಂಡು ತರಗತಿಯಲ್ಲಿ ದಾಖಲು ಮಾಡಲಾಯಿತು.

ಪುರಾಣಗಳಲ್ಲಿ ವಾಲ್ಮೀಕಿ ಮಹರ್ಷಿಗಳು ಲವಕುಶರಿಗೆ ಅಕ್ಷರಭ್ಯಾಸವನ್ನು ಮಾಡಿಸುವ ಮೂಲಕ ವಿದ್ಯೆಯನ್ನು ಪ್ರಾರಂಭಿಸಿದ್ದರು ಎಂಬ ಉಲ್ಲೇಖವಿದೆ. ಸರ್ವಧರ್ಮ ಸಮನ್ವಯತೆ ಸಾರುವ ನಿಟ್ಟಿನಲ್ಲಿ ಈ ಶಾಲೆ ಮುಂದಿದೆ. ಅದೇರೀತಿ ಶಿಸ್ತು ಮತ್ತು ಸಮಯ ಪಾಲನೆ ಶಾಲೆಯ ಪ್ರಮುಖ ಆದ್ಯತೆಯಾಗಿದೆ.

Ramesh Babu

Journalist

Recent Posts

ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ ನೀಡಿದ ಶಾಸಕ ಸಿ.ಬಿ.ಸುರೇಶ್ ಬಾಬು

  *ಚಿಕ್ಕನಾಯಕನಹಳ್ಳಿ : ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

2 hours ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

22 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

22 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

1 day ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

4 days ago