ವಿದ್ಯಾರ್ಥಿಗಳಿಂದ ಶ್ರಮದಾನ: ಸ್ವಚ್ಛತೆ ಇದ್ದಲ್ಲಿ ಆರೋಗ್ಯ ವೃದ್ಧಿ

ದೊಮ್ಮಲೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ 2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರವನ್ನ ಜೂ.21 ರಿಂದ 27ರವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಎಸ್.ಎಸ್ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಸಮೀಪದ ವಿಶ್ವ ವಿನಯ್ ಗುರು  ಆಶ್ರಮದಲ್ಲಿ ಆಯೋಜಿಸಲಾಗಿತ್ತು.

ಈ ಶಿಬಿರದಲ್ಲಿ ಕಾಲೇಜಿನ ಸುಮಾರು 50 ಶಿಬಿರಾರ್ಥಿಗಳು  ಭಾಗವಹಿಸಿದ್ದರು. ಶಿಬಿರದಲ್ಲಿ ಶಿಬಿರಾರ್ಥಿಗಳು ಏಳು ದಿನಗಳ ಕಾಲ ಆಶ್ರಮದ ಸುತ್ತು ಮುತ್ತಲು ಇರುವ ಗಿಡಗಳಿಗೆ ಪಾತಿ ಮಾಡಿ ಗೊಬ್ಬರ ಹಾಕಿ ಶ್ರಮ ದಾನವನ್ನು  ಮಾಡಿದರು.

ಅದೇರೀತಿ ಗ್ರಾಮದಲ್ಲಿನ ಜನತೆಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರು. ದೇವಸ್ಥಾನದ ಸುತ್ತಮುತ್ತಲಿನ   ನಾಗರಕಲ್ಲುಗಳನ್ನು ಸ್ವಚ್ಛ ಮಾಡಿದರು. ದೇವಸ್ಥಾನದಲ್ಲಿ ನಡೆಯುವ ಅನ್ನ ದಾಸೋಹ ಕಾರ್ಯಕ್ರಮದಲ್ಲಿ  ಭಾಗವಹಿಸಿ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗಿಸಿದರು.

ಘಾಟಿ ದೇವಸ್ಥಾನ ಬಳಿ ಇರುವ ರಾಷ್ಟ್ರೋತ್ಥಾನ ಗೋ ಸಂರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿ ದನ ಕರುಗಳಿಗೆ    ಮೇವು ನೀಡಿ, ಅಲ್ಲಿನ ವಿವಿಧ ತಳಿಗಳ ದನ ಕರುಗಳು ಹಾಗೂ ಹಸುಗಳ ಪರಿಚಯವನ್ನು ಮಾಡಿಕೊಂಡರು.

ಏಳು ದಿನಗಳ ಕಾಲ ಶಿಬಿರಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಪ್ರತಿ ದಿನ ಅಧ್ಯಾಪಕರು ಹಾಗೂ  ಸಂಪನ್ಮೂಲ ವ್ಯಕ್ತಿಗಳಿಂದ ವ್ಯಕ್ತಿತ್ವ ವಿಕಾಸನ, ಪರಿಸರ ಸಂರಕ್ಷಣೆ, ಜೀವನ ಕೌಶಲ್ಯದ ಬಗ್ಗೆ ಅರಿವು ಮೂಡಿಸಲಾಯಿತು. ಇದರ ಜೊತೆಗೆ ವಕೀಲರಿಂದ ಕಾನೂನು ಅರಿವು- ನೆರವು  ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆ ಮಾಡುವ ಪ್ರವೃತ್ತಿ ಬೆಳೆಯುತ್ತದೆ.

ಈ ಎಲ್ಲಾ ಕಾರ್ಯಕ್ರಮಗಳ ಮೇಲ್ವಿಚಾರಣೆಯನ್ನ  ಕಾರ್ಯಕ್ರಮ ಅಧಿಕಾರಿ ಎನ್ ಅಡಿವಪ್ಪ, ಕಾಲೇಜಿನ ಪ್ರಾಂಶುಪಾಲರಾದ ಬಿ ವಿ ಸುಧಾ, ಸಹ ಕಾರ್ಯಕ್ರಮ ಅಧಿಕಾರಿಯಾದ  ಕೆ.ಶಿವರಾಜ್ ವಹಿಸಿದ್ದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

10 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

11 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

19 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago