ವಿದ್ಯಾರ್ಥಿಗಳಿಂದ ಶ್ರಮದಾನ: ಸ್ವಚ್ಛತೆ ಇದ್ದಲ್ಲಿ ಆರೋಗ್ಯ ವೃದ್ಧಿ

ದೊಮ್ಮಲೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ 2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರವನ್ನ ಜೂ.21 ರಿಂದ 27ರವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಎಸ್.ಎಸ್ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಸಮೀಪದ ವಿಶ್ವ ವಿನಯ್ ಗುರು  ಆಶ್ರಮದಲ್ಲಿ ಆಯೋಜಿಸಲಾಗಿತ್ತು.

ಈ ಶಿಬಿರದಲ್ಲಿ ಕಾಲೇಜಿನ ಸುಮಾರು 50 ಶಿಬಿರಾರ್ಥಿಗಳು  ಭಾಗವಹಿಸಿದ್ದರು. ಶಿಬಿರದಲ್ಲಿ ಶಿಬಿರಾರ್ಥಿಗಳು ಏಳು ದಿನಗಳ ಕಾಲ ಆಶ್ರಮದ ಸುತ್ತು ಮುತ್ತಲು ಇರುವ ಗಿಡಗಳಿಗೆ ಪಾತಿ ಮಾಡಿ ಗೊಬ್ಬರ ಹಾಕಿ ಶ್ರಮ ದಾನವನ್ನು  ಮಾಡಿದರು.

ಅದೇರೀತಿ ಗ್ರಾಮದಲ್ಲಿನ ಜನತೆಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರು. ದೇವಸ್ಥಾನದ ಸುತ್ತಮುತ್ತಲಿನ   ನಾಗರಕಲ್ಲುಗಳನ್ನು ಸ್ವಚ್ಛ ಮಾಡಿದರು. ದೇವಸ್ಥಾನದಲ್ಲಿ ನಡೆಯುವ ಅನ್ನ ದಾಸೋಹ ಕಾರ್ಯಕ್ರಮದಲ್ಲಿ  ಭಾಗವಹಿಸಿ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗಿಸಿದರು.

ಘಾಟಿ ದೇವಸ್ಥಾನ ಬಳಿ ಇರುವ ರಾಷ್ಟ್ರೋತ್ಥಾನ ಗೋ ಸಂರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿ ದನ ಕರುಗಳಿಗೆ    ಮೇವು ನೀಡಿ, ಅಲ್ಲಿನ ವಿವಿಧ ತಳಿಗಳ ದನ ಕರುಗಳು ಹಾಗೂ ಹಸುಗಳ ಪರಿಚಯವನ್ನು ಮಾಡಿಕೊಂಡರು.

ಏಳು ದಿನಗಳ ಕಾಲ ಶಿಬಿರಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಪ್ರತಿ ದಿನ ಅಧ್ಯಾಪಕರು ಹಾಗೂ  ಸಂಪನ್ಮೂಲ ವ್ಯಕ್ತಿಗಳಿಂದ ವ್ಯಕ್ತಿತ್ವ ವಿಕಾಸನ, ಪರಿಸರ ಸಂರಕ್ಷಣೆ, ಜೀವನ ಕೌಶಲ್ಯದ ಬಗ್ಗೆ ಅರಿವು ಮೂಡಿಸಲಾಯಿತು. ಇದರ ಜೊತೆಗೆ ವಕೀಲರಿಂದ ಕಾನೂನು ಅರಿವು- ನೆರವು  ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆ ಮಾಡುವ ಪ್ರವೃತ್ತಿ ಬೆಳೆಯುತ್ತದೆ.

ಈ ಎಲ್ಲಾ ಕಾರ್ಯಕ್ರಮಗಳ ಮೇಲ್ವಿಚಾರಣೆಯನ್ನ  ಕಾರ್ಯಕ್ರಮ ಅಧಿಕಾರಿ ಎನ್ ಅಡಿವಪ್ಪ, ಕಾಲೇಜಿನ ಪ್ರಾಂಶುಪಾಲರಾದ ಬಿ ವಿ ಸುಧಾ, ಸಹ ಕಾರ್ಯಕ್ರಮ ಅಧಿಕಾರಿಯಾದ  ಕೆ.ಶಿವರಾಜ್ ವಹಿಸಿದ್ದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

4 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

8 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

17 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

23 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago