ವಿದ್ಯಾರ್ಥಿಗಳಿಂದ ಶ್ರಮದಾನ: ಸ್ವಚ್ಛತೆ ಇದ್ದಲ್ಲಿ ಆರೋಗ್ಯ ವೃದ್ಧಿ

ದೊಮ್ಮಲೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ 2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರವನ್ನ ಜೂ.21 ರಿಂದ 27ರವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಎಸ್.ಎಸ್ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಸಮೀಪದ ವಿಶ್ವ ವಿನಯ್ ಗುರು  ಆಶ್ರಮದಲ್ಲಿ ಆಯೋಜಿಸಲಾಗಿತ್ತು.

ಈ ಶಿಬಿರದಲ್ಲಿ ಕಾಲೇಜಿನ ಸುಮಾರು 50 ಶಿಬಿರಾರ್ಥಿಗಳು  ಭಾಗವಹಿಸಿದ್ದರು. ಶಿಬಿರದಲ್ಲಿ ಶಿಬಿರಾರ್ಥಿಗಳು ಏಳು ದಿನಗಳ ಕಾಲ ಆಶ್ರಮದ ಸುತ್ತು ಮುತ್ತಲು ಇರುವ ಗಿಡಗಳಿಗೆ ಪಾತಿ ಮಾಡಿ ಗೊಬ್ಬರ ಹಾಕಿ ಶ್ರಮ ದಾನವನ್ನು  ಮಾಡಿದರು.

ಅದೇರೀತಿ ಗ್ರಾಮದಲ್ಲಿನ ಜನತೆಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರು. ದೇವಸ್ಥಾನದ ಸುತ್ತಮುತ್ತಲಿನ   ನಾಗರಕಲ್ಲುಗಳನ್ನು ಸ್ವಚ್ಛ ಮಾಡಿದರು. ದೇವಸ್ಥಾನದಲ್ಲಿ ನಡೆಯುವ ಅನ್ನ ದಾಸೋಹ ಕಾರ್ಯಕ್ರಮದಲ್ಲಿ  ಭಾಗವಹಿಸಿ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗಿಸಿದರು.

ಘಾಟಿ ದೇವಸ್ಥಾನ ಬಳಿ ಇರುವ ರಾಷ್ಟ್ರೋತ್ಥಾನ ಗೋ ಸಂರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿ ದನ ಕರುಗಳಿಗೆ    ಮೇವು ನೀಡಿ, ಅಲ್ಲಿನ ವಿವಿಧ ತಳಿಗಳ ದನ ಕರುಗಳು ಹಾಗೂ ಹಸುಗಳ ಪರಿಚಯವನ್ನು ಮಾಡಿಕೊಂಡರು.

ಏಳು ದಿನಗಳ ಕಾಲ ಶಿಬಿರಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಪ್ರತಿ ದಿನ ಅಧ್ಯಾಪಕರು ಹಾಗೂ  ಸಂಪನ್ಮೂಲ ವ್ಯಕ್ತಿಗಳಿಂದ ವ್ಯಕ್ತಿತ್ವ ವಿಕಾಸನ, ಪರಿಸರ ಸಂರಕ್ಷಣೆ, ಜೀವನ ಕೌಶಲ್ಯದ ಬಗ್ಗೆ ಅರಿವು ಮೂಡಿಸಲಾಯಿತು. ಇದರ ಜೊತೆಗೆ ವಕೀಲರಿಂದ ಕಾನೂನು ಅರಿವು- ನೆರವು  ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆ ಮಾಡುವ ಪ್ರವೃತ್ತಿ ಬೆಳೆಯುತ್ತದೆ.

ಈ ಎಲ್ಲಾ ಕಾರ್ಯಕ್ರಮಗಳ ಮೇಲ್ವಿಚಾರಣೆಯನ್ನ  ಕಾರ್ಯಕ್ರಮ ಅಧಿಕಾರಿ ಎನ್ ಅಡಿವಪ್ಪ, ಕಾಲೇಜಿನ ಪ್ರಾಂಶುಪಾಲರಾದ ಬಿ ವಿ ಸುಧಾ, ಸಹ ಕಾರ್ಯಕ್ರಮ ಅಧಿಕಾರಿಯಾದ  ಕೆ.ಶಿವರಾಜ್ ವಹಿಸಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

2 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

7 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago