ವಿದ್ಯಾರ್ಥಿಗಳಿಂದ ಶ್ರಮದಾನ: ಸ್ವಚ್ಛತೆ ಇದ್ದಲ್ಲಿ ಆರೋಗ್ಯ ವೃದ್ಧಿ

ದೊಮ್ಮಲೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ 2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರವನ್ನ ಜೂ.21 ರಿಂದ 27ರವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಎಸ್.ಎಸ್ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಸಮೀಪದ ವಿಶ್ವ ವಿನಯ್ ಗುರು  ಆಶ್ರಮದಲ್ಲಿ ಆಯೋಜಿಸಲಾಗಿತ್ತು.

ಈ ಶಿಬಿರದಲ್ಲಿ ಕಾಲೇಜಿನ ಸುಮಾರು 50 ಶಿಬಿರಾರ್ಥಿಗಳು  ಭಾಗವಹಿಸಿದ್ದರು. ಶಿಬಿರದಲ್ಲಿ ಶಿಬಿರಾರ್ಥಿಗಳು ಏಳು ದಿನಗಳ ಕಾಲ ಆಶ್ರಮದ ಸುತ್ತು ಮುತ್ತಲು ಇರುವ ಗಿಡಗಳಿಗೆ ಪಾತಿ ಮಾಡಿ ಗೊಬ್ಬರ ಹಾಕಿ ಶ್ರಮ ದಾನವನ್ನು  ಮಾಡಿದರು.

ಅದೇರೀತಿ ಗ್ರಾಮದಲ್ಲಿನ ಜನತೆಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರು. ದೇವಸ್ಥಾನದ ಸುತ್ತಮುತ್ತಲಿನ   ನಾಗರಕಲ್ಲುಗಳನ್ನು ಸ್ವಚ್ಛ ಮಾಡಿದರು. ದೇವಸ್ಥಾನದಲ್ಲಿ ನಡೆಯುವ ಅನ್ನ ದಾಸೋಹ ಕಾರ್ಯಕ್ರಮದಲ್ಲಿ  ಭಾಗವಹಿಸಿ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗಿಸಿದರು.

ಘಾಟಿ ದೇವಸ್ಥಾನ ಬಳಿ ಇರುವ ರಾಷ್ಟ್ರೋತ್ಥಾನ ಗೋ ಸಂರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿ ದನ ಕರುಗಳಿಗೆ    ಮೇವು ನೀಡಿ, ಅಲ್ಲಿನ ವಿವಿಧ ತಳಿಗಳ ದನ ಕರುಗಳು ಹಾಗೂ ಹಸುಗಳ ಪರಿಚಯವನ್ನು ಮಾಡಿಕೊಂಡರು.

ಏಳು ದಿನಗಳ ಕಾಲ ಶಿಬಿರಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಪ್ರತಿ ದಿನ ಅಧ್ಯಾಪಕರು ಹಾಗೂ  ಸಂಪನ್ಮೂಲ ವ್ಯಕ್ತಿಗಳಿಂದ ವ್ಯಕ್ತಿತ್ವ ವಿಕಾಸನ, ಪರಿಸರ ಸಂರಕ್ಷಣೆ, ಜೀವನ ಕೌಶಲ್ಯದ ಬಗ್ಗೆ ಅರಿವು ಮೂಡಿಸಲಾಯಿತು. ಇದರ ಜೊತೆಗೆ ವಕೀಲರಿಂದ ಕಾನೂನು ಅರಿವು- ನೆರವು  ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆ ಮಾಡುವ ಪ್ರವೃತ್ತಿ ಬೆಳೆಯುತ್ತದೆ.

ಈ ಎಲ್ಲಾ ಕಾರ್ಯಕ್ರಮಗಳ ಮೇಲ್ವಿಚಾರಣೆಯನ್ನ  ಕಾರ್ಯಕ್ರಮ ಅಧಿಕಾರಿ ಎನ್ ಅಡಿವಪ್ಪ, ಕಾಲೇಜಿನ ಪ್ರಾಂಶುಪಾಲರಾದ ಬಿ ವಿ ಸುಧಾ, ಸಹ ಕಾರ್ಯಕ್ರಮ ಅಧಿಕಾರಿಯಾದ  ಕೆ.ಶಿವರಾಜ್ ವಹಿಸಿದ್ದರು.

Ramesh Babu

Journalist

Recent Posts

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

41 minutes ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

4 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

15 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

15 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

20 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

20 hours ago