ಪ್ರತಿಯೊಬ್ಬ ವಿದ್ಯಾರ್ಥಿ ಕಾನೂನಿನ ಬಗ್ಗೆ ಹೆಚ್ಚು ಗಮನ ಹರಿಸಿ, ಕಡ್ಡಾಯವಾಗಿ ಕಾನೂನು ಪಾಲನೆಗೆ ಮುಂದಾಗಬೇಕು ಎಂದು ದೊಡ್ಡಬೆಳವಂಗಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಅವರು ತಿಳಿಸಿದರು.
ಯಲಹಂಕ ಜಿಕೆವಿಕೆ ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಬಿಟೆಕ್ ಕೃಷಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ವಾರ್ಷಿಕ ಎನ್ಎಸ್ಎಸ್ ವಿಶೇಷ ಶಿಬಿರದಲ್ಲಿ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹಾಗೂ ಸಂಚಾರಿ ನಿಯಮಗಳ ತರಬೇತಿ ನೀಡಿದರು.
ನಂತರ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದ ಅವರು, ಜೀವ ಸುರಕ್ಷತೆ ದೃಷ್ಟಿಯಿಂದ ಜಾರಿಗೆ ತಂದಿರುವ ಸಂಚಾರಿ ನಿಯಮಗಳನ್ನು ಎಲ್ಲರೂ ಚಾಚೂ ತಪ್ಪದೇ ಪಾಲಿಸಬೇಕು. ವಾಹನ ಚಾಲನೆ ಮಾಡುವಾಗ ತಪ್ಪದೆ ಹೆಲ್ಮೆಟ್ ಧರಿಸಬೇಕು. ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ಮಾಡಬಾರದು. ದ್ವಿಚಕ್ರ ವಾಹನದಲ್ಲಿ ತ್ರೀಬಲ್ ರೈಡಿಂಗ್, ಮದ್ಯಪಾನ ಮಾಡಿ ಚಾಲನೆ, ಸೀಟ್ ಬೆಲ್ಟ್ ಧರಿಸದಿರುವುದು, ಸೈಡ್ ಮಿರರ್ ಇಲ್ಲದ ವಾಹನ, ತುರ್ತು ವಾಹನಗಳಿಗೆ ದಾರಿ ಬಿಡದಿರುವುದು, ಅಜಾಗರೂಕತೆ ವಾಹನ ಚಾಲನೆ, ಮುಖ್ಯವಾಗಿ ಅಪ್ರಾಪ್ತರ ವಾಹನ ಚಾಲನೆ ಕಡ್ಡಾಯ ನಿಷೇಧ ಎಂದು ತಿಳಿಸಿದರು.
ಈ ವೇಳೆ ಉಪನ್ಯಾಸಕರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…